Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಬ್ಬನ್​ಪೇಟೆ ಟಿಫನ್ ರೂಮಿನಿಂದ ಶುರುವಾದ ಇವರ ತಿಂಡಿಯಾನ

Bengaluru : ತುಪ್ಪದಲ್ಲಿ ಹುರಿದ ಬಟನ್​ ಮಶ್ರೂಮ್, ಆಲೂಗಡ್ಡೆ ತುಂಡುಗಳಿಂದ ಕೂಡಿದ ಮಸಾಲೆಯುಕ್ತ ಅಣಬೆ ಪುಲಾಬ್ ತಿನ್ನಲು ಭಾನುವಾರಕ್ಕಾಗಿ ಕಾಯಬೇಕು. ಬಾಳೆಎಲೆ ಮೇಲೆ ಚಟ್ನಿಯೊಂದಿಗೆ ಹಬೆಯಾಡುವ ಈ ಪುಲಾವ್ ತಿನ್ನುವುದೇ ಸ್ವರ್ಗ!

Viral: ಕಬ್ಬನ್​ಪೇಟೆ ಟಿಫನ್ ರೂಮಿನಿಂದ ಶುರುವಾದ ಇವರ ತಿಂಡಿಯಾನ
ಬಸವನಗುಡಿಯ ಕಬ್ಬನಪೇಟೆ ಟಿಫಿನ್ ರೂಮಿಗೆ ಹೋಗಿದ್ದ ತಿಂಡಿಪ್ರಿಯರು
Follow us
ಶ್ರೀದೇವಿ ಕಳಸದ
|

Updated on:Jul 24, 2023 | 3:47 PM

Tiffin : ಹೋಟೆಲ್​ಗೆ ಹೋದರೆ ಎಷ್ಟು ಜನ ಹೋಗುತ್ತೀರಿ? ಕೆಲ ಸ್ನೇಹಿತರೊಡನೆ ಅಥವಾ ಕುಟುಂಬದವರೊಂದಿಗೆ. ಆದರೆ ನಿಮ್ಮ ಅಕ್ಕಪಕ್ಕದ ಮನೆಯವರನ್ನೂ ಸೇರಿಸಿಕೊಂಡು ಹೋಗಿದ್ದಿದೆಯೇ? ಇದೀಗ ವೈರಲ್ ಆಗಿರುವ ಈ ಟ್ವೀಟ್​ ಥ್ರೆಡ್​ ನೋಡಿ. ಮೇಲಿನ ಫೋಟೋದಲ್ಲಿರುವವರೆಲ್ಲರೂ ಭಾನುವಾರದಂದು ತಿಂಡಿ ತಿನ್ನಲೆಂದು ಒಟ್ಟಾಗಿ ಹೊರಟಿದ್ದಾರೆ. ಅವರು ಮೊದಲು ಹೋಗಿದ್ದು ಬಸವನಗುಡಿಯಲ್ಲಿರುವ ಕಬ್ಬನ್​ಪೇಟೆ ಟಿಫನ್​ ರೂಮಿಗೆ. ಮೋಹನ್​ ಎನ್ನುವವರು ನಡೆಸುವ ಈ ಹೋಟೆಲ್​ನಲ್ಲಿ ಭಾನುವಾರ (Sunday)ದ ಅಣಬೆ ಪುಲಾವ್​ ಮತ್ತು ಸಬ್ಬಸಿಗೆ ಇಡ್ಲಿ, ಮಸಾಲೆ ದೋಸೆ ಮತ್ತು ರೈಸ್​ಬಾತ್​ಗಳಿಗಾಗಿ ಇವರು ದಾಂಗುಡಿ ಇಟ್ಟಿದ್ದಾರೆ.

ತೆಗೆದುಕೊಂಡ ಆರ್ಡರ್​ಗಳ ಪಟ್ಟಿ ಮೋಹನ್ ಅವರಿಗೆ ಚೆನ್ನಾಗಿ ನೆನಪಿರುತ್ತದೆಯಾದ್ದರಿಂದ ಬಿಲ್ ಮಾಡಲು ಅವರಿಗೆ ಅನುಕೂಲವಾಗುತ್ತದೆ. ಇಲ್ಲಿ ಸಬ್ಬಸಿಗೆ ಇಡ್ಲಿಗೆ ಕೊಡುವ ಚಟ್ನಿ ಬಹಳ ರುಚಿಯಾಗಿರುತ್ತದೆ. ಜೊತೆಗೆ ಆಲೂಗಡ್ಡೆ ಸಾಗೂ ಕೂಡ ಕೊಡುತ್ತಾರೆ. ಮೃದುವಾದ ಈ ಇಡ್ಲಿಗಳೊಂದಿಗೆ ಇದೆಲ್ಲವನ್ನೂ ಸವಿಯುವುದೆಂದರೆ ಸ್ವರ್ಗ.

ಇನ್ನು ಭಾನುವಾರ ಮಾತ್ರ ಮಾಡುವ ಅಣಬೆ ಪುಲಾವ್ ಸಾಕಷ್ಟು ಬಟನ್​ ಮಶ್ರೂಮ್​​ ತುಪ್ಪದಲ್ಲಿ ಹುರಿದ ಆಲೂಗಡ್ಡೆ ತುಂಡುಗಳು ಮತ್ತು​ ಮಸಾಲೆಯಿಂದ ಕೂಡಿರುತ್ತದೆ. ಚಟ್ನಿಯೊಂದಿಗೆ ಹಬೆಯಾಡುವ ಈ ಪುಲಾವ್ ಅನ್ನು ಬಾಳೆ ಎಲೆಯಲ್ಲಿ ಮುಂಜಾನೆ ಹೊತ್ತಿನಲ್ಲಿ ತಿನ್ನುವುದು ಅತ್ಯಂತ ಸೊಗಸು.

ಈ ತಿಂಡಿ ಮತ್ತು ಹೋಟೆಲ್​ಗಳ ಹೆಸರುಗಳ ಥ್ರೆಡ್​ ಬೆಳೆಯುತ್ತಲೇ ಹೋಗುತ್ತದೆ. ಟ್ವೀಟ್ ಮಾಡಿರುವ ಫೋಟೋಗಳು ನಿಮ್ಮ ಬಾಯಲ್ಲಿ ನೀರೂರಿಸತೊಡಗುತ್ತವೆ. ನಿಮಗೂ ಈಗ ಈ ಹೋಟೆಲ್​​ಗಳಿಗೆ ಹೋಗಬೇಕೆಂಬ ಮನಸ್ಸಾಗುತ್ತಿದೆಯೇ?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 3:40 pm, Mon, 24 July 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!