AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಬ್ಬನ್​ಪೇಟೆ ಟಿಫನ್ ರೂಮಿನಿಂದ ಶುರುವಾದ ಇವರ ತಿಂಡಿಯಾನ

Bengaluru : ತುಪ್ಪದಲ್ಲಿ ಹುರಿದ ಬಟನ್​ ಮಶ್ರೂಮ್, ಆಲೂಗಡ್ಡೆ ತುಂಡುಗಳಿಂದ ಕೂಡಿದ ಮಸಾಲೆಯುಕ್ತ ಅಣಬೆ ಪುಲಾಬ್ ತಿನ್ನಲು ಭಾನುವಾರಕ್ಕಾಗಿ ಕಾಯಬೇಕು. ಬಾಳೆಎಲೆ ಮೇಲೆ ಚಟ್ನಿಯೊಂದಿಗೆ ಹಬೆಯಾಡುವ ಈ ಪುಲಾವ್ ತಿನ್ನುವುದೇ ಸ್ವರ್ಗ!

Viral: ಕಬ್ಬನ್​ಪೇಟೆ ಟಿಫನ್ ರೂಮಿನಿಂದ ಶುರುವಾದ ಇವರ ತಿಂಡಿಯಾನ
ಬಸವನಗುಡಿಯ ಕಬ್ಬನಪೇಟೆ ಟಿಫಿನ್ ರೂಮಿಗೆ ಹೋಗಿದ್ದ ತಿಂಡಿಪ್ರಿಯರು
ಶ್ರೀದೇವಿ ಕಳಸದ
|

Updated on:Jul 24, 2023 | 3:47 PM

Share

Tiffin : ಹೋಟೆಲ್​ಗೆ ಹೋದರೆ ಎಷ್ಟು ಜನ ಹೋಗುತ್ತೀರಿ? ಕೆಲ ಸ್ನೇಹಿತರೊಡನೆ ಅಥವಾ ಕುಟುಂಬದವರೊಂದಿಗೆ. ಆದರೆ ನಿಮ್ಮ ಅಕ್ಕಪಕ್ಕದ ಮನೆಯವರನ್ನೂ ಸೇರಿಸಿಕೊಂಡು ಹೋಗಿದ್ದಿದೆಯೇ? ಇದೀಗ ವೈರಲ್ ಆಗಿರುವ ಈ ಟ್ವೀಟ್​ ಥ್ರೆಡ್​ ನೋಡಿ. ಮೇಲಿನ ಫೋಟೋದಲ್ಲಿರುವವರೆಲ್ಲರೂ ಭಾನುವಾರದಂದು ತಿಂಡಿ ತಿನ್ನಲೆಂದು ಒಟ್ಟಾಗಿ ಹೊರಟಿದ್ದಾರೆ. ಅವರು ಮೊದಲು ಹೋಗಿದ್ದು ಬಸವನಗುಡಿಯಲ್ಲಿರುವ ಕಬ್ಬನ್​ಪೇಟೆ ಟಿಫನ್​ ರೂಮಿಗೆ. ಮೋಹನ್​ ಎನ್ನುವವರು ನಡೆಸುವ ಈ ಹೋಟೆಲ್​ನಲ್ಲಿ ಭಾನುವಾರ (Sunday)ದ ಅಣಬೆ ಪುಲಾವ್​ ಮತ್ತು ಸಬ್ಬಸಿಗೆ ಇಡ್ಲಿ, ಮಸಾಲೆ ದೋಸೆ ಮತ್ತು ರೈಸ್​ಬಾತ್​ಗಳಿಗಾಗಿ ಇವರು ದಾಂಗುಡಿ ಇಟ್ಟಿದ್ದಾರೆ.

ತೆಗೆದುಕೊಂಡ ಆರ್ಡರ್​ಗಳ ಪಟ್ಟಿ ಮೋಹನ್ ಅವರಿಗೆ ಚೆನ್ನಾಗಿ ನೆನಪಿರುತ್ತದೆಯಾದ್ದರಿಂದ ಬಿಲ್ ಮಾಡಲು ಅವರಿಗೆ ಅನುಕೂಲವಾಗುತ್ತದೆ. ಇಲ್ಲಿ ಸಬ್ಬಸಿಗೆ ಇಡ್ಲಿಗೆ ಕೊಡುವ ಚಟ್ನಿ ಬಹಳ ರುಚಿಯಾಗಿರುತ್ತದೆ. ಜೊತೆಗೆ ಆಲೂಗಡ್ಡೆ ಸಾಗೂ ಕೂಡ ಕೊಡುತ್ತಾರೆ. ಮೃದುವಾದ ಈ ಇಡ್ಲಿಗಳೊಂದಿಗೆ ಇದೆಲ್ಲವನ್ನೂ ಸವಿಯುವುದೆಂದರೆ ಸ್ವರ್ಗ.

ಇನ್ನು ಭಾನುವಾರ ಮಾತ್ರ ಮಾಡುವ ಅಣಬೆ ಪುಲಾವ್ ಸಾಕಷ್ಟು ಬಟನ್​ ಮಶ್ರೂಮ್​​ ತುಪ್ಪದಲ್ಲಿ ಹುರಿದ ಆಲೂಗಡ್ಡೆ ತುಂಡುಗಳು ಮತ್ತು​ ಮಸಾಲೆಯಿಂದ ಕೂಡಿರುತ್ತದೆ. ಚಟ್ನಿಯೊಂದಿಗೆ ಹಬೆಯಾಡುವ ಈ ಪುಲಾವ್ ಅನ್ನು ಬಾಳೆ ಎಲೆಯಲ್ಲಿ ಮುಂಜಾನೆ ಹೊತ್ತಿನಲ್ಲಿ ತಿನ್ನುವುದು ಅತ್ಯಂತ ಸೊಗಸು.

ಈ ತಿಂಡಿ ಮತ್ತು ಹೋಟೆಲ್​ಗಳ ಹೆಸರುಗಳ ಥ್ರೆಡ್​ ಬೆಳೆಯುತ್ತಲೇ ಹೋಗುತ್ತದೆ. ಟ್ವೀಟ್ ಮಾಡಿರುವ ಫೋಟೋಗಳು ನಿಮ್ಮ ಬಾಯಲ್ಲಿ ನೀರೂರಿಸತೊಡಗುತ್ತವೆ. ನಿಮಗೂ ಈಗ ಈ ಹೋಟೆಲ್​​ಗಳಿಗೆ ಹೋಗಬೇಕೆಂಬ ಮನಸ್ಸಾಗುತ್ತಿದೆಯೇ?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 3:40 pm, Mon, 24 July 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು