AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್​ ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್​ ಕಾರು ಅಪಘತಾದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು
ಕಚ್ಚಾ ಬಾದಾಮ್​ ಗಾಯಕ
TV9 Web
| Edited By: |

Updated on:Mar 01, 2022 | 1:21 PM

Share

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್(Kacha Badam) ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್(Buban Badykar)​ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಬನ್ ಇತ್ತೀಚೆಗೆ ಸೆಕೆಂಡ್​ ಹ್ಯಾಂಡ್​ ಕಾರ್​ ಖರೀದಿಸಿದ್ದು, ಅದನ್ನು ಕಲಿಯುತ್ತಿರುವಾಗ ಅಪಘಾತಕ್ಕೀಡಾಗಿದ್ದಾರೆ. ಬುಬನ್​ ಅವರು ಎದೆಯ ಭಾಗದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿರುವ ಬುಬನ್​ ಅವರನ್ನು ಸದ್ಯ ಸುರಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಬನ್​ ಬಡ್ಯಾಕರ್​ ಪಶ್ಚಿಮ ಬಂಗಾಳ ಮೂಲದ ಬಿರ್ಭೂಮ್ ಗ್ರಾಮದ ಕಡಲೆಕಾಯಿ ವ್ಯಾಪಾರಿ. ಕಡಲೆಕಾಯಿ ಮಾರಾಟ ಮಾಡುವ ವೇಳೆ ಕಚ್ಚಾ ಬಾದಾಮ್​ ಹಾಡನ್ನುಹಾಡಿ ತಾವು ತಂದಿರುವ ಕಡಲೆಕಾಯಿಯನ್ನು ಕೊಳ್ಳುವಂತೆ ಹೇಳುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇವರು ಹಾಡು ಕಚ್ಚಾ ಬಾದಾಮ್​ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಬುಬನ್​ ಅವರ ಹಾಡಿನ ಸಾಲಿಗೆ ರಿಮಿಕ್ಸ್​ ಹಾಕಿದ ನಂತರವಂತೂ ಇನ್ಸ್ಟಾಗ್ರಾಮ್​ನಲ್ಲಿ ಕಚ್ಚಾ ಬಾದಾಮ್​ ಹಾಡಿನ ರೀಲ್ಸ್​​ಗಳದ್ದೇ ಕಾರುಬಾರಾಗಿತ್ತು.  ರಿಮಿಕ್ಸ್​​ ವಿಡಿಯೋವನ್ನು ಯುಟ್ಯೂಬ್​ನಲ್ಲಿ ಹಂಚಿಕೊಂಡ ಮೇಲೆ 50 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದು ನೆಟ್ಟಿಗರ  ಮನ ಗೆದ್ದಿತ್ತು.

ಬುಬನ್​ ತನ್ನ ಪತ್ನಿ ಮತ್ತು ಮಗನನ್ನು ಕಡಲೆಕಾಯಿ ಮಾರಾಟ ಮಾಡಿ ಸಾಕುತ್ತಿದ್ದರು. ಇವರ ಹಾಡು ವೈರಲ್​ ಆಗುತ್ತಿದ್ದಂತೆ ಸ್ಟಾರ್ ನಟ ನಟಿಯರೂ ಕೂಡ ಇವರ ಹಾಡಿಗೆ ರೀಲ್ಸ್​ ಮಾಡಿದ್ದು, ಈಗ ಬುಬನ್​ ಅವರ ಲುಕ್​ ಬದಲಾಗಿದೆ. ಪ್ರತಿದಿನ 3 ರಿಂದ 4 ಕೆಜಿ ಕಡಲೆಕಾಯಿಯನ್ನು ಮಾರಾಟ ಮಾಡಿ 200 ರಿಂದ 250 ರೂ ದುಡಿಯುತ್ತಿದ್ದ ಬುಬನ್​ ಅವರೂ ಕೂಡ ದೊಡ್ಡ ಸ್ಟಾರ್​ ಆಗಿದ್ದಾರೆ.  ಸದ್ಯ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

Published On - 9:37 am, Tue, 1 March 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​