AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್​ ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್​ ಕಾರು ಅಪಘತಾದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು
ಕಚ್ಚಾ ಬಾದಾಮ್​ ಗಾಯಕ
TV9 Web
| Edited By: |

Updated on:Mar 01, 2022 | 1:21 PM

Share

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್(Kacha Badam) ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್(Buban Badykar)​ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಬನ್ ಇತ್ತೀಚೆಗೆ ಸೆಕೆಂಡ್​ ಹ್ಯಾಂಡ್​ ಕಾರ್​ ಖರೀದಿಸಿದ್ದು, ಅದನ್ನು ಕಲಿಯುತ್ತಿರುವಾಗ ಅಪಘಾತಕ್ಕೀಡಾಗಿದ್ದಾರೆ. ಬುಬನ್​ ಅವರು ಎದೆಯ ಭಾಗದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿರುವ ಬುಬನ್​ ಅವರನ್ನು ಸದ್ಯ ಸುರಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಬನ್​ ಬಡ್ಯಾಕರ್​ ಪಶ್ಚಿಮ ಬಂಗಾಳ ಮೂಲದ ಬಿರ್ಭೂಮ್ ಗ್ರಾಮದ ಕಡಲೆಕಾಯಿ ವ್ಯಾಪಾರಿ. ಕಡಲೆಕಾಯಿ ಮಾರಾಟ ಮಾಡುವ ವೇಳೆ ಕಚ್ಚಾ ಬಾದಾಮ್​ ಹಾಡನ್ನುಹಾಡಿ ತಾವು ತಂದಿರುವ ಕಡಲೆಕಾಯಿಯನ್ನು ಕೊಳ್ಳುವಂತೆ ಹೇಳುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇವರು ಹಾಡು ಕಚ್ಚಾ ಬಾದಾಮ್​ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಬುಬನ್​ ಅವರ ಹಾಡಿನ ಸಾಲಿಗೆ ರಿಮಿಕ್ಸ್​ ಹಾಕಿದ ನಂತರವಂತೂ ಇನ್ಸ್ಟಾಗ್ರಾಮ್​ನಲ್ಲಿ ಕಚ್ಚಾ ಬಾದಾಮ್​ ಹಾಡಿನ ರೀಲ್ಸ್​​ಗಳದ್ದೇ ಕಾರುಬಾರಾಗಿತ್ತು.  ರಿಮಿಕ್ಸ್​​ ವಿಡಿಯೋವನ್ನು ಯುಟ್ಯೂಬ್​ನಲ್ಲಿ ಹಂಚಿಕೊಂಡ ಮೇಲೆ 50 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದು ನೆಟ್ಟಿಗರ  ಮನ ಗೆದ್ದಿತ್ತು.

ಬುಬನ್​ ತನ್ನ ಪತ್ನಿ ಮತ್ತು ಮಗನನ್ನು ಕಡಲೆಕಾಯಿ ಮಾರಾಟ ಮಾಡಿ ಸಾಕುತ್ತಿದ್ದರು. ಇವರ ಹಾಡು ವೈರಲ್​ ಆಗುತ್ತಿದ್ದಂತೆ ಸ್ಟಾರ್ ನಟ ನಟಿಯರೂ ಕೂಡ ಇವರ ಹಾಡಿಗೆ ರೀಲ್ಸ್​ ಮಾಡಿದ್ದು, ಈಗ ಬುಬನ್​ ಅವರ ಲುಕ್​ ಬದಲಾಗಿದೆ. ಪ್ರತಿದಿನ 3 ರಿಂದ 4 ಕೆಜಿ ಕಡಲೆಕಾಯಿಯನ್ನು ಮಾರಾಟ ಮಾಡಿ 200 ರಿಂದ 250 ರೂ ದುಡಿಯುತ್ತಿದ್ದ ಬುಬನ್​ ಅವರೂ ಕೂಡ ದೊಡ್ಡ ಸ್ಟಾರ್​ ಆಗಿದ್ದಾರೆ.  ಸದ್ಯ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

Published On - 9:37 am, Tue, 1 March 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ