AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್​ ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್​ ಕಾರು ಅಪಘತಾದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಚ್ಚಾ ಬಾದಾಮ್​ ಖ್ಯಾತಿಯ ಬುಬನ್​ ಬಡ್ಯಾಕರ್​ಗೆ ಅಪಘಾತ: ಆಸ್ಪತ್ರೆಗೆ ದಾಖಲು
ಕಚ್ಚಾ ಬಾದಾಮ್​ ಗಾಯಕ
TV9 Web
| Edited By: |

Updated on:Mar 01, 2022 | 1:21 PM

Share

ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್(Kacha Badam) ಹಾಡಿನ ಮೂಲಕ ಹೊಸ ಸೆನ್ಸೇಷನ್​ ಹುಟ್ಟುಹಾಕಿದ ಗಾಯಕ ಬುಬನ್​ ಬಡ್ಯಾಕರ್(Buban Badykar)​ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಬನ್ ಇತ್ತೀಚೆಗೆ ಸೆಕೆಂಡ್​ ಹ್ಯಾಂಡ್​ ಕಾರ್​ ಖರೀದಿಸಿದ್ದು, ಅದನ್ನು ಕಲಿಯುತ್ತಿರುವಾಗ ಅಪಘಾತಕ್ಕೀಡಾಗಿದ್ದಾರೆ. ಬುಬನ್​ ಅವರು ಎದೆಯ ಭಾಗದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿರುವ ಬುಬನ್​ ಅವರನ್ನು ಸದ್ಯ ಸುರಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಬನ್​ ಬಡ್ಯಾಕರ್​ ಪಶ್ಚಿಮ ಬಂಗಾಳ ಮೂಲದ ಬಿರ್ಭೂಮ್ ಗ್ರಾಮದ ಕಡಲೆಕಾಯಿ ವ್ಯಾಪಾರಿ. ಕಡಲೆಕಾಯಿ ಮಾರಾಟ ಮಾಡುವ ವೇಳೆ ಕಚ್ಚಾ ಬಾದಾಮ್​ ಹಾಡನ್ನುಹಾಡಿ ತಾವು ತಂದಿರುವ ಕಡಲೆಕಾಯಿಯನ್ನು ಕೊಳ್ಳುವಂತೆ ಹೇಳುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇವರು ಹಾಡು ಕಚ್ಚಾ ಬಾದಾಮ್​ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಬುಬನ್​ ಅವರ ಹಾಡಿನ ಸಾಲಿಗೆ ರಿಮಿಕ್ಸ್​ ಹಾಕಿದ ನಂತರವಂತೂ ಇನ್ಸ್ಟಾಗ್ರಾಮ್​ನಲ್ಲಿ ಕಚ್ಚಾ ಬಾದಾಮ್​ ಹಾಡಿನ ರೀಲ್ಸ್​​ಗಳದ್ದೇ ಕಾರುಬಾರಾಗಿತ್ತು.  ರಿಮಿಕ್ಸ್​​ ವಿಡಿಯೋವನ್ನು ಯುಟ್ಯೂಬ್​ನಲ್ಲಿ ಹಂಚಿಕೊಂಡ ಮೇಲೆ 50 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದು ನೆಟ್ಟಿಗರ  ಮನ ಗೆದ್ದಿತ್ತು.

ಬುಬನ್​ ತನ್ನ ಪತ್ನಿ ಮತ್ತು ಮಗನನ್ನು ಕಡಲೆಕಾಯಿ ಮಾರಾಟ ಮಾಡಿ ಸಾಕುತ್ತಿದ್ದರು. ಇವರ ಹಾಡು ವೈರಲ್​ ಆಗುತ್ತಿದ್ದಂತೆ ಸ್ಟಾರ್ ನಟ ನಟಿಯರೂ ಕೂಡ ಇವರ ಹಾಡಿಗೆ ರೀಲ್ಸ್​ ಮಾಡಿದ್ದು, ಈಗ ಬುಬನ್​ ಅವರ ಲುಕ್​ ಬದಲಾಗಿದೆ. ಪ್ರತಿದಿನ 3 ರಿಂದ 4 ಕೆಜಿ ಕಡಲೆಕಾಯಿಯನ್ನು ಮಾರಾಟ ಮಾಡಿ 200 ರಿಂದ 250 ರೂ ದುಡಿಯುತ್ತಿದ್ದ ಬುಬನ್​ ಅವರೂ ಕೂಡ ದೊಡ್ಡ ಸ್ಟಾರ್​ ಆಗಿದ್ದಾರೆ.  ಸದ್ಯ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

Published On - 9:37 am, Tue, 1 March 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ