AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ರೂ ಮತ್ತೆ ಕಾಣಿಸಿಕೊಂಡ ನೋವು, ಸ್ಕ್ಯಾನಿಂಗ್‌ ವೇಳೆ ತಿಳಿಯಿತು ವೈದ್ಯರ ಎಡವಟ್ಟು

ಆಂಧ್ರದ ಕಾಕಿನಾಡದಲ್ಲಿ ಆಘಾತಕಾರಿ ವೈದ್ಯಕೀಯ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ವೈದ್ಯರು ರೋಗಿಯ ಕಾಲಿನಲ್ಲಿ ಒಂದುವರೆ ವರ್ಷಗಳ ಹಿಂದೆ ನಡೆಸಿದ ಶಸ್ತ್ರಚಿಕಿತ್ಸೆ ವೇಳೆ ಶಸ್ತ್ರಚಿಕಿತ್ಸಾ ಉಪಕರಣ ಮರೆತುಬಿಟ್ಟಿದ್ದಾರೆ. ನೋವು ಕಾಣಿಸಿಕೊಂಡಾಗ ಬ್ಲೇಡ್ ಪತ್ತೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರು ತಪ್ಪೊಪ್ಪಿಕೊಳ್ಳಲು ನಿರಾಕರಿಸಿದ್ದು, ಸರ್ಕಾರಿ ಆಸ್ಪತ್ರೆಗಳ ಕಾರ್ಯಕ್ಷಮತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ರೂ ಮತ್ತೆ ಕಾಣಿಸಿಕೊಂಡ ನೋವು, ಸ್ಕ್ಯಾನಿಂಗ್‌ ವೇಳೆ ತಿಳಿಯಿತು ವೈದ್ಯರ ಎಡವಟ್ಟು
ವೈರಲ್​​​ ಪೋಸ್ಟ್​
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2025 | 2:35 PM

Share

ವೈದ್ಯರನ್ನು ರೋಗಿಗಳು ದೇವರ ರೂಪ ಎಂದು ಕರೆಯುತ್ತಾರೆ. ಭಾರತದಲ್ಲಿ “ವೈದ್ಯೋ ನಾರಾಯಣೋ ಹರಿ” (medical negligence) ಎಂಬ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಅದೆಷ್ಟೋ ವೈದ್ಯರು ರೋಗಿಗಳ ಪ್ರಾಣಕ್ಕೆ ಕಂಟಕವಾಗಿದ್ದಾರೆ. ವೈದ್ಯರು ಮಾಡುವ ಎಡವಟ್ಟಿನಿಂದ ಜನರು ಆಸ್ಪತ್ರೆಗಳಿಗೆ ಹೋಗಲು ಭಯಪಡುವ ಪರಿಸ್ಥಿತಿ ಬಂದಿದೆ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ. ಆಂಧ್ರದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಎಸ್. ಅನ್ನಾವರಂ ಪಂಚಾಯತ್‌ನ ರಾಮಕೃಷ್ಣ ನಗರದ ಚಿನ್ನ (25) ಎಂಬ ಯುವಕನಿಗೆ ಒಂದೂವರೆ ವರ್ಷದ ಹಿಂದೆ ವೈಜಾಗ್‌ನಲ್ಲಿ ಕಾಲಿಗೆ ಆದ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಮಯದಲ್ಲಿ, ಅವರ ಕಾಲಿಗೆ ತೀವ್ರ ಗಾಯಗಳಾಗಿತ್ತು. ಕಾಲಿನ ಒಳಗೆ ರಾಡ್ ಸೇರಿಸಿ, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದನ್ನು ಮಾಡಿಸಿ ಒಂದು ವರ್ಷದ ನಂತರ ಮತ್ತೆ ನೋವು ಶುರುವಾಗಿತ್ತು. ವೈದ್ಯರು ಕಾಲಿಗೆ ಹಾಕಿರುವ ಬೋಲ್ಟ್ ತೆಗೆದರೆ ಅದು ಬೇಗನೆ ಸರಿಯಾಗುತ್ತದೆ ಎಂದು ಹೇಳಿದ್ದರು.

ಬೋಲ್ಟ್ ತೆಗೆಯಲು ಟುನಿ ಸರ್ಕಾರಿ ಆಸ್ಪತ್ರೆ ವೈದ್ಯರು ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ, ಅವರಿಗೆ ಮತ್ತೊಂದು ಅಚ್ಚರಿಯ ವಸ್ತುವೊಂದು ಕಾಲಿನಲ್ಲಿ ಕಂಡಿದೆ. ಒಂದು ವರ್ಷದ ಹಿಂದೆ ಮಾಡಿದ ಶಸ್ತ್ರಚಿಕಿತ್ಸೆ ವೇಳೆ, ವೈದ್ಯರು ಶಸ್ತ್ರಚಿಕಿತ್ಸಾ ಬ್ಲೇಡ್​​​ನ್ನು ಕಾಲಿನ ಒಳಗೆಯೇ ಬಿಟ್ಟಿದ್ದಾರೆ. ಇದೀಗ ಅದನ್ನು ತೆಗೆದು ಮತ್ತೆ ಹೊಲಿಗೆ ಹಾಕಿದ್ದಾರೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬುದು ಕಾಣುತ್ತಿದೆ ಎಂದು ರೋಗಿಯ ಮನೆಯವರು ಹೇಳಿದ್ದಾರೆ. ಇನ್ನು ವಿಚಾರ ತಿಳಿದು ರೋಗಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವೈದ್ಯರು ಬಳಿ ಕೇಳಿದಾಗ, ವೈದ್ಯರು ರೋಗಿಯ ವಿರುದ್ಧವೇ ಮಾತನಾಡಿದ್ದಾರೆ.

ಇದನ್ನೂ ಓದಿ: “ಬೆಂಗಳೂರಿನಲ್ಲಿ ಹೊಸ ಫ್ಲಾಟ್ ಬಾಡಿಗೆ ಹಗರಣ”: 15 ಸಾವಿರ ರೂ.ಗೆ 2BHK ಅಪಾರ್ಟ್‌ಮೆಂಟ್​​, ಇದು ನಂಬಲು ಸಾಧ್ಯವೇ?

ವೈರಲ್​​ ಪೋಸ್ಟ್​ :

Kakinada Shock

ನೀವು ನಮ್ಮನ್ನು ಪ್ರಶ್ನೆ ಮಾಡಬೇಡಿ, ಈ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ರೋಗಿಯ ಕಾಲಿನಿಂದ ಶಸ್ತ್ರಚಿಕಿತ್ಸಾ ಬ್ಲೇಡ್​​​ನ್ನು ಹೊರ ತೆಗೆದು ಹೊಲಿಗೆ ಹಾಕಿರುವುದು, ಭಾರೀ ಚರ್ಚೆ ಕಾರಣವಾಗಿದೆ. ಅದರೂ ವೈದ್ಯರ ಕಡೆಯಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಳ್ಳಲು ತಯಾರಿರಲಿಲ್ಲ. ಸರ್ಕಾರಿ ಆಸ್ಪತ್ರೆಗಳ ವೈದ್ಯರ ಕಾರ್ಯಕ್ಷಮತೆಯ ಬಗ್ಗೆ ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಕಾರಣಕ್ಕೆ ಜನ ಸರ್ಕಾರಿ ಆಸ್ಪತ್ರೆಗಳಿಗೆ ಬರಲು ಎದರುತ್ತಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್​​​ ಮೀಡಿಯಾದಲ್ಲಿ ಕಮೆಂಟ್​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ