AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ​​ ಭಾರತದ ಮೊದಲ ಪ್ರಧಾನಿ ಎಂದ ಕಂಗನಾ ರಣಾವತ್: ಪಾಠ ಮಾಡಿದ ನೆಟ್ಟಿಗರು

ಕಂಗನಾ ರಣಾವತ್​​ರ ಪ್ರಕಾರ ‘ಭಾರತಕ್ಕೆ 2014 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ನೇತಾಜಿ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಗಿದ್ದರು. ಸರ್ದಾರ್ ಪಟೇಲ್ ಅವರಿಗೆ ಇಂಗ್ಲಿಷ್ ಮಾತನಾಡಲು ಬಾರದ ಕಾರಣ ಅವರು ಪ್ರಧಾನಿ ಆಗಲಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆಯೇ ಸದ್ಯ ಇಂಟರ್ನೆಟ್​ನಲ್ಲಿ ಸಾಕಷ್ಟು ಹಲ್​ ಚಲ್ ಎಬ್ಬಿಸಿದೆ.​

ನೇತಾಜಿ​​ ಭಾರತದ ಮೊದಲ ಪ್ರಧಾನಿ ಎಂದ ಕಂಗನಾ ರಣಾವತ್: ಪಾಠ ಮಾಡಿದ ನೆಟ್ಟಿಗರು
ಕಂಗನಾ ರಣಾವತ್
ಗಂಗಾಧರ​ ಬ. ಸಾಬೋಜಿ
|

Updated on:Apr 07, 2024 | 10:21 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರಿಗೆ ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿ ಲೋಕಸಭಾ ಚುನಾವಣಾ ಟಿಕೆಟ್ ನೀಡಿದೆ. ಇಡೀ ವಿಶ್ವದಲ್ಲಿ ಸಣ್ಣ ಕಾಶಿ ಅಂತ ಪ್ರಸಿದ್ಧವಾಗಿರುವ ಮಂಡಿ ಕ್ಷೇತ್ರದಿಂದ ಅವರು ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಅವರು ಈಗಾಗಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಿಸಿಕೊಂಡಿದ್ದಾರೆ. ಆದರೆ ಅವರು ಇತ್ತೀಚೆಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಿಂದ ಸದ್ಯ ಸಾಕಷ್ಟು ಚರ್ಚೆಗೊಳಗಾಗುತ್ತಿದ್ದಾರೆ. ನಟಿ ಕಂಗನಾ ರಣಾವತ್ ಅವರು ಸಂದರ್ಶನವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬಾಸ್ ಚಂದ್ರ ಬೋಸ್ ಅವರನ್ನು ಭಾರತದ ಮೊದಲ ಪ್ರಧಾನಿ ಎಂದು ಹೇಳಿದ್ದಾರೆ. ಈ ಹೇಳಿಕೆಯೇ ಸದ್ಯ ಇಂಟರ್ನೆಟ್​ನಲ್ಲಿ ಸಾಕಷ್ಟು ಹಲ್​ ಚಲ್ ಎಬ್ಬಿಸಿದೆ.​

ಕಂಗನಾ ರಣಾವತ್​​ರ ಪ್ರಕಾರ ‘ಭಾರತಕ್ಕೆ 2014 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ನೇತಾಜಿ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಗಿದ್ದರು. ಸರ್ದಾರ್ ಪಟೇಲ್ ಅವರಿಗೆ ಇಂಗ್ಲಿಷ್ ಮಾತನಾಡಲು ಬಾರದ ಕಾರಣ ಅವರು ಪ್ರಧಾನಿ ಆಗಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು

ಭಾರತದ ಮೊದಲ ಪ್ರಧಾನ ಮಂತ್ರಿ ಹೇಳಿಕೆ ನೀಡಿದ ಬಳಿಕ ಕಂಗನಾ ರಣಾವತ್ ಅವರ “ಜ್ಞಾನ” ದ ಬಗ್ಗೆ ಸಾಕಷ್ಟು ಟ್ರೋಲ್ ಮಾಡಲಾಗುತ್ತಿದೆ. ಹಲವಾರು ನೆಟಿಗರು ಕಮೆಂಟ್ ಮಾಡುವ ಮೂಲಕ ಕಂಗನಾ ರಣಾವತ್ ಅವರಿಗೆ ಸರಿಯಾದ ಪಾಠ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಮುಂದಿನ 5 ವರ್ಷ ಇಂತಹ ಹೆಚ್ಚು ಹೆಚ್ಚು ಜೋಕ್‌ಗಳಿಗಾಗಿ ಮಂಡಿ ಕ್ಷೇತ್ರದ ಜನರು ಕಂಗನಾ ರಣಾವತ್​ರಿಗೆ ಮತ ಹಾಕಿ ಎಂದು ಕಿಚಾಯಿಸಿದ್ದಾರೆ.

ಇದನ್ನೂ ಓದಿ: ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್​ ಪಂದ್ಯ ವೀಕ್ಷಿಸಿದ ಫ್ಯಾನ್ಸ್​​

ಬಿಆರ್​ಎಸ್​ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಕೂಡ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಸುಭಾಷ್ ಚಂದ್ರ ಬೋಸ್ ನಮ್ಮ ಮೊದಲ ಪ್ರಧಾನಿ ಎಂದು ಬಿಜೆಪಿ ಅಭ್ಯರ್ಥಿಯೊಬ್ಬರು ಹೇಳುತ್ತಾರೆ. ದಕ್ಷಿಣದ ಮತ್ತೊಬ್ಬ ಬಿಜೆಪಿ ನಾಯಕ ಮಹಾತ್ಮಾ ಗಾಂಧಿ ನಮ್ಮ ಪ್ರಧಾನಿ ಎಂದು ಹೇಳುತ್ತಾರೆ. ಇವರೆಲ್ಲ ಎಲ್ಲಿಂದ ಪದವಿ ಪಡೆದರು?’ ಎಂದು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಕೆಟಿ ರಾಮರಾವ್ ಟ್ವೀಟ್​ 

ಇಷ್ಟೆಲ್ಲಾ ಆದ ಬಳಿಕ ನಟಿ ಕಂಗನಾ ರಣಾವತ್ ಅವರು ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆಯನ್ನು  ಸಮರ್ಥಿಸಿಕೊಂಡಿದ್ದಾರೆ. ಕಲಿಕೆಗಾರರಿಗೆ ಕೆಲವು ಸಾಮಾನ್ಯ ಜ್ಞಾನ ಎಂದು ಬರೆದುಕೊಂಡಿದ್ದಾರೆ.  ಸಿಂಗಾಪುರದಲ್ಲಿ ಮುಕ್ತ ಭಾರತಕ್ಕಾಗಿ ಸರ್ಕಾರವನ್ನು ರಚಿಸಿದ ನಂತರ ಸುಭಾಷ್ ಚಂದ್ರ ಬೋಸ್ ಅವರು ತಮ್ಮನ್ನು ತಾವು ಪ್ರಧಾನಿ ಎಂದು ಘೋಷಿಸಿಕೊಂಡಿದ್ದರು ಎನ್ನುವ ಸ್ಕ್ರೀನ್‌ಶಾಟ್ ಅನ್ನು ಅವರು ಹಂಚಿಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Sun, 7 April 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ