AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್

ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ature27_12 ಎನ್ನುವ ಖಾತೆ ಹಂಚಿಕೊಂಡಿದೆ. ವಿಡಿಯೋಕ್ಕೆ ಕಾಂಗರೂವಿನಿಂದ ನಾಯಿಯನ್ನು ರಕ್ಷಿಸಲು ಹೋದಾಗ ನಡೆದ ಘಟನೆ ಎಂದು ಕ್ಯಾಪ್ಷನ್​ ನೀಡಲಾಗಿದೆ.

ನಾಯಿಯನ್ನು ರಕ್ಷಿಸಲು ಹೋದ ವ್ಯಕ್ತಿಗೆ ಜಾಡಿಸಿ ಒದ್ದ ಕಾಂಗರೂ: ವಿಡಿಯೋ ವೈರಲ್
ಕಾಂಗರೂ
TV9 Web
| Updated By: Pavitra Bhat Jigalemane|

Updated on:Feb 25, 2022 | 3:48 PM

Share

ಪ್ರಾಣಿಗಳ (Animals) ಪ್ರಪಂಚ ಎಲ್ಲದಕ್ಕಿಂತ ಭಿನ್ನ. ತಮ್ಮದೇ ಭಾಷೆಯಲ್ಲಿ ಸನ್ನೆಗಳನ್ನು ಮಾಡಿಕೊಂಡು, ಆಟ ತುಂಟಾಟ, ಹೊಡೆದಾಟ ಮಾಡಿಕೊಂಡು ಒಂದೇ ಪ್ರದೇಶದಲ್ಲಿ ಎಲ್ಲ ಜಾತಿಯ ಪ್ರಾಣಿಗಳೂ ಕೂಡ ಹೊಂದಿಕೊಂಡು ಬದುಕುತ್ತವೆ. ಅಲ್ಲಿಗೆ ಮಾನವನ ಎಂಟ್ರಿಯಾದರೆ ಅವುಗಳಿಗೂ ಕಿರಿಕಿರಿ ಉಂಟಾಗುತ್ತದೆ. ಇದೀಗ ಕಾಂಗರೂವೊಂದು (Kangaroo) ನಾಯಿಯನ್ನುರಕ್ಷಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಕಾಲಿನಲ್ಲಿ ಜಾಡಿಸಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್ ​(Instagram) ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ನೋಡಿ ನೆಟ್ಟಿಗರು ನಕ್ಕು ನಕ್ಕು ಸುಸ್ತಾಗಿದ್ದಾರೆ.

View this post on Instagram

A post shared by طبیعت (@nature27_12)

ವಿಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ಸಾಕು ನಾಯಿಗಳನ್ನು ಕರೆದುಕೊಂಡು ವಾಕಿಂಗ್​ಗೆ ಹೋಗಿರುತ್ತಾನೆ. ಈ ವೇಳೆ ಅಲ್ಲೇ ಇದ್ದ ಕಾಂಗರೂ ನೊಡಿ ಒಂದು ನಾಯಿ ಕೂಗಿದೆ. ಆಗ ಕೋಪಗೊಂಡ ಕಾಂಗರೂ ಅಟ್ಟಿಸಿಕೊಂಡು ಬಂದಿದೆ. ಆಗ ವ್ಯಕ್ತಿ ನಾಯಿಯನ್ನು ರಕ್ಷಿಸಲು ಮುಂದಾಗಿದ್ದಾನೆ. ಈ ವೇಳೆ ಕಾಂಗರೂ ವ್ಯಕ್ತಿಗೆ ಕಾಲಿನಿಂದ ಜಾಡಿಸಿ ಒದ್ದಿದೆ. ಇದರಿಂದ ಆಯತಪ್ಪಿ ವ್ಯಕ್ತಿ ನೆಲಕ್ಕೆ ಬಿದ್ದಿದ್ದಾನೆ. ದೃಶ್ಯದಲ್ಲಿ ಒಂದು ಕಪ್ಪು ಮತ್ತು ಇನ್ನೊಂದು ಪುಟ್ಟ ಬಿಳಿ ನಾಯಿಮರಿಯನ್ನು ಕಾಣಬಹುದು.  ವ್ಯಕ್ತಿ ಕಾಂಗರೂವಿನಿಂದ ಒದೆಸಿಕೊಂಡು ನೆಲಕ್ಕೆ ಬಿದ್ದ ವಿಡಿಯೋವನ್ನು ಆತನೊಂದಿಗಿದ್ದ ಕುಟುಂಬ ಸೆರೆಹಿಡಿದಿದೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ature27_12 ಎನ್ನುವ ಖಾತೆ ಹಂಚಿಕೊಂಡಿದೆ. ವಿಡಿಯೋಕ್ಕೆ ಕಾಂಗರೂವಿನಿಂದ ನಾಯಿಯನ್ನು ರಕ್ಷಿಸಲು ಹೋದಾಗ ನಡೆದ ಘಟನೆ ಎಂದು ಕ್ಯಾಪ್ಷನ್​ ನೀಡಲಾಗಿದೆ. 3 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಈ ವಿಡಿಯೋ ಪಡೆದಿದೆ.

ಇದನ್ನೂ ಓದಿ:

Viral Video: ಪಾಂಡಾ ಮರಿಗೆ ಬಾಟೆಲ್​ನಲ್ಲಿ ಹಾಲುಣಿಸಿದ ಝೂ ಕೀಪರ್​​

Published On - 3:45 pm, Fri, 25 February 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್