AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕನ್ನಡ್‌ ಅಲ್ಲ ಅದು ಕನ್ನಡ; ವೇದಿಕೆ ಮೇಲೆ ಕಿಚ್ಚನ ʼಕನ್ನಡʼ ಪಾಠ

ಕನ್ನಡ ಚಿತ್ರರಂಗದ ಅಭಿನಯ ಚರ್ಕವರ್ತಿ ಸುದೀಪ್‌ ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ನಟ. ಕನ್ನಡದ ವಿಚಾರವಾಗಿ ಅವರು ಆಗಾಗ್ಗೆ ಧ್ವನಿ ಎತ್ತುತ್ತಿರುತ್ತಾರೆ. ಹೌದು ಕೆಲ ವಾರಗಳ ಹಿಂದೆ ದುಬೈನಲ್ಲಿ ನಡೆದ ಸೈಮಾ ಅವಾರ್ಡ್‌ನಲ್ಲೂ ಅವರು ತಮ್ಮ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ. ಅವಾರ್ಡ್‌ ಫಂಕ್ಷನ್‌ನಲ್ಲಿ ಚಿತ್ರರಂಗಕ್ಕೆ ಸೇರಿದ ವ್ಯಕ್ತಿಯೊಬ್ಬರು ಕನ್ನಡ್‌ ಎಂಬ ಪದವನ್ನು ಉಪಯೋಗಿಸಿದಾಗ, ಅದು ಕನ್ನಡ್‌ ಅಲ್ಲ ಕನ್ನಡ ಎಂದು ಕಿಚ್ಚ ಸಖತ್‌ ಆಗಿ ಕ್ಲಾಸ್‌ ತೆಗೆದುಕೊಂಡಿದ್ರು. ಕನ್ನಡ ರಾಜ್ಯೋತ್ಸವದ ಶುಭ ದಿನ ಈ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 01, 2024 | 10:06 AM

Share

ಕನ್ನಡ ಚಿತ್ರರಂಗದ ಅಭಿನಯ ಚರ್ಕವರ್ತಿ ಸುದೀಪ್‌ ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ನಟ. ಇವರು ತಮ್ಮ ಕನ್ನಡಾಭಿಮಾನವನ್ನು ಆಗಾಗ್ಗೆ ವ್ಯಕ್ತಪಡಿಸುತ್ತಿರುತ್ತಾರೆ. ಅದರಲ್ಲೂ ಬಾದ್‌ ಷಾ ಕಿಚ್ಚ ಯಾರೇ ಕನ್ನಡವನ್ನು ಕನ್ನಡ್‌ ಎಂದರೆ ಸಹಿಸೊಲ್ಲ. ಹೌದು ಹೊರ ರಾಜ್ಯದ ಸೆಲೆಬ್ರಿಟಿಗಳು ಮಾತ್ರವಲ್ಲದೆ, ಸಾಮಾನ್ಯರು ಕೂಡಾ ಕನ್ನಡವನ್ನು ಕನ್ನಡ್‌ ಅಂತಲೇ ಉಚ್ಛರಿಸುತ್ತಾರೆ. ಈ ರೀತಿ ಕನ್ನಡಕ್ಕೆ ಅವಮಾನವನ್ನು ಮಾಡಿದಾಗ ಕಿಚ್ಚ ಧ್ವನಿ ಎತ್ತುತ್ತಾರೆ. ಕೆಲ ವಾರಗಳ ಹಿಂದೆಯಷ್ಟೇ ಅವಾರ್ಡ್‌ ಫಂಕ್ಷನ್‌ ಒಂದರಲ್ಲಿ ಕನ್ನಡ್‌ ಎಂದು ಹೇಳಿದ ವ್ಯಕ್ತಿಗೆ ಅದು ಕನ್ನಡ್‌ ಅಲ್ಲ ಕನ್ನಡ ಎಂದು ಕಿಚ್ಚ ಸಖತ್‌ ಆಗಿ ಕ್ಲಾಸ್‌ ತೆಗೆದುಕೊಂಡಿದ್ರು. ಆ ವಿಡಿಯೋ ಕ್ಲಿಪ್‌ ಕೂಡಾ ಭಾರೀ ವೈರಲ್‌ ಆಗಿತ್ತು. ಇದೀಗ ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಕಿಚ್ಚನ ಕನ್ನಡಾಭಿಮಾನಕ್ಕೆ ಸಂಬಂಧಿಸಿದ ಈ ವಿಡಿಯೋ ಮತ್ತೊಮ್ಮೆ ವೈರಲ್‌ ಆಗಿದೆ.

ಕೆಲ ವಾರಗಳ ಹಿಂದೆಯಷ್ಟೇ ದುಬೈನಲ್ಲಿ ನಡೆದ ಅವಾರ್ಡ್‌ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್‌ ತಮ್ಮ ಕನ್ನಡ ಪ್ರೇಮವನ್ನು ತೋರಿಸಿದ್ದರು. ಹೌದು ವೇದಿಕೆಯ ಮೇಲೆ ಚಿತ್ರರಂಗಕ್ಕೆ ಸೇರಿದ ಹೈದರಬಾದ್‌ ಮೂಲದ ವ್ಯಕ್ತಿಯೊಬ್ಬರು ತಾವು ಮಾತನಾಡುವ ಸಂದರ್ಭದಲ್ಲಿ ಕನ್ನಡವನ್ನು ಕನ್ನಡ್‌ ಎಂದು ಉಚ್ಛರಿಸುತ್ತಾರೆ. ಆ ತಕ್ಷಣವೇ ಕಿಚ್ಚ ʼಅದು ಕನ್ನಡ್‌ ಕನ್ನಡ, ಮುಂಬೈ ಜನರು ಕನ್ನಡ್‌ ಅಂತಾ ಹೇಳ್ತಾರೆ. ನೀವು ಹೈದರಬಾದ್‌ನವರಾಗಿ ಕನ್ನಡ್‌ ಅಂತ ಹೇಳ್ತಿರಲ್ವಾ ಎಂದು ಕಿಚ್ಚ ಸಖತ್‌ ಆಗಿ ಕ್ಲಾಸ್‌ ತೆಗೆದುಕೊಂಡಿದ್ರು. ಈ ವಿಡಿಯೋ ಭಾರೀ ವೈರಲ್‌ ಆಗಿತ್ತು. ಕನ್ನಡ ರಾಜ್ಯೋತ್ಸವದ ಈ ಶುಭ ದಿನದಂದು toxicant ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಲಾಗಿದೆ.

ಈ ವೈರಲ್‌ ವಿಡಿಯೋದಲ್ಲಿ ಅವಾರ್ಡ್‌ ಫಂಕ್ಷನ್‌ನಲ್ಲಿ ಕಿಚ್ಚ ಸುದೀಪ್‌ ಕನ್ನಡ್‌ ಅಲ್ಲ ಅದು ಕನ್ನಡ ಎಂದು ವ್ಯಕ್ತಿಯೊಬ್ಬರಿಗೆ ಕನ್ನಡವನ್ನು ಸರಿಯಾಗಿ ಉಚ್ಚರಿಸಿ ಎಂದು ಹೇಳಿಕೊಂಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಸರಳವಾಗಿ ಪರಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನದಲ್ಲಿ ಯುವತಿಯರು…

ನಿನ್ನೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಕಿಚ್ಚನ ಕನ್ನಡಾಭಿಮಾನಕ್ಕೆ ಕನ್ನಡಿಗರು ಭಾರೀ ಮೆಚ್ಚುಗೆ ಸೂಚಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ