AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಮನಬಂದಂತೆ ಥಳಿಸಿದ ಟ್ಯೂಷನ್ ಶಿಕ್ಷಕ

ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಎರಡನೇ ತರಗತಿಯ ಬಾಲಕಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಬಾಲಕಿಯ ಕೂದಲನ್ನು ಎಳೆದು, ಕೈ ಮತ್ತು ಕೋಲಿನಿಂದ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಶಿಕ್ಷಕನನ್ನು ಬಂಧಿಸಲಾಗಿದ್ದು,ತನಿಖೆ ನಡೆಯುತ್ತಿದೆ.

Viral: 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಮನಬಂದಂತೆ ಥಳಿಸಿದ ಟ್ಯೂಷನ್ ಶಿಕ್ಷಕ
ಅಕ್ಷತಾ ವರ್ಕಾಡಿ
|

Updated on: Nov 27, 2024 | 10:57 AM

Share

ಉತ್ತರ ಪ್ರದೇಶ: ಟ್ಯೂಷನ್ ಶಿಕ್ಷಕನೊಬ್ಬ 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಎಳೆದೊಯ್ಧು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಶಿಕ್ಷಕ ಬಾಲಕಿಗೆ ಇತರ ವಿದ್ಯಾರ್ಥಿಗಳ ಮುಂದೆ ಕೂದಲು ಎಳೆದು ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಶಿಕ್ಷಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಶಿಕ್ಷಕ ಪುಟ್ಟ ಬಾಲಕಿಯ ಜಡೆ ಹಿಡಿದು ಬೆನ್ನಿಗೆ ಸರಿಯಾಗಿ ಬಾರಿಸುತ್ತಿರುವುದನ್ನು ಕಾಣಬಹುದು. ಇದಲ್ಲದೇ ಬಾಲಕಿ ನೋವಿನಿಂದ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪ್ರಾರಂಭದಲ್ಲಿ ಕೈಯಿಂದ ಬಾರಿಸುತ್ತಿದ್ದ ಶಿಕ್ಷಕ ಬಳಿಕ ಕೋಲಿನಿಂದ ಬಾಲಕಿಗೆ ಹೊಡೆಯಲು ಪ್ರಾರಂಭಿಸಿದ್ದಾರೆ. ಸದ್ಯ ಕ್ರೂರ ಕೃತ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದಂತೆ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ

ಮಗುವಿಗೆ ಥಳಿಸಿದ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಎಡಿಜಿ ಕಾನ್ಪುರ್ ವಲಯ ವೈರಲ್ ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕನ್ನೌಜ್ ಪೊಲೀಸರಿಗೆ ಆದೇಶಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?