Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಮನಬಂದಂತೆ ಥಳಿಸಿದ ಟ್ಯೂಷನ್ ಶಿಕ್ಷಕ

ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ಟ್ಯೂಷನ್ ಶಿಕ್ಷಕನೊಬ್ಬ ಎರಡನೇ ತರಗತಿಯ ಬಾಲಕಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಬಾಲಕಿಯ ಕೂದಲನ್ನು ಎಳೆದು, ಕೈ ಮತ್ತು ಕೋಲಿನಿಂದ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಶಿಕ್ಷಕನನ್ನು ಬಂಧಿಸಲಾಗಿದ್ದು,ತನಿಖೆ ನಡೆಯುತ್ತಿದೆ.

Viral: 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಮನಬಂದಂತೆ ಥಳಿಸಿದ ಟ್ಯೂಷನ್ ಶಿಕ್ಷಕ
Follow us
ಅಕ್ಷತಾ ವರ್ಕಾಡಿ
|

Updated on: Nov 27, 2024 | 10:57 AM

ಉತ್ತರ ಪ್ರದೇಶ: ಟ್ಯೂಷನ್ ಶಿಕ್ಷಕನೊಬ್ಬ 2 ನೇ ತರಗತಿ ಬಾಲಕಿಯ ಜಡೆ ಹಿಡಿದು ಎಳೆದೊಯ್ಧು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಶಿಕ್ಷಕ ಬಾಲಕಿಗೆ ಇತರ ವಿದ್ಯಾರ್ಥಿಗಳ ಮುಂದೆ ಕೂದಲು ಎಳೆದು ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಶಿಕ್ಷಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಶಿಕ್ಷಕ ಪುಟ್ಟ ಬಾಲಕಿಯ ಜಡೆ ಹಿಡಿದು ಬೆನ್ನಿಗೆ ಸರಿಯಾಗಿ ಬಾರಿಸುತ್ತಿರುವುದನ್ನು ಕಾಣಬಹುದು. ಇದಲ್ಲದೇ ಬಾಲಕಿ ನೋವಿನಿಂದ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪ್ರಾರಂಭದಲ್ಲಿ ಕೈಯಿಂದ ಬಾರಿಸುತ್ತಿದ್ದ ಶಿಕ್ಷಕ ಬಳಿಕ ಕೋಲಿನಿಂದ ಬಾಲಕಿಗೆ ಹೊಡೆಯಲು ಪ್ರಾರಂಭಿಸಿದ್ದಾರೆ. ಸದ್ಯ ಕ್ರೂರ ಕೃತ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದಂತೆ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ

ಮಗುವಿಗೆ ಥಳಿಸಿದ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಎಡಿಜಿ ಕಾನ್ಪುರ್ ವಲಯ ವೈರಲ್ ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕನ್ನೌಜ್ ಪೊಲೀಸರಿಗೆ ಆದೇಶಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ