AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಸಂತ್ರಸ್ತೆಯ ಸಹೋದರನ ಪ್ರಕಾರ, "2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ.

ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ
ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು
ಅಕ್ಷತಾ ವರ್ಕಾಡಿ
|

Updated on: Jun 03, 2024 | 10:58 AM

Share

ಉತ್ತರ ಪ್ರದೇಶ: ಕಾನ್ಪುರದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತವರು ಮನೆಯಿಂದ 5 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪತಿ 5 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬಾ, ಇಲ್ಲದಿದ್ದರೆ ತನ್ನ ಸಹೋದರನೊಂದಿಗೆ ಲೈಂಗಿಕ ಸಂಬಂಧ ಹೊಂದು ಎಂದು ಕೆಲ ತಿಂಗಳುಗಳಿಂದ ಒತ್ತಡ ಹೇರಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಇದೀಗ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ಆಕೆಯ ಪತಿ ಮತ್ತು ಪತಿಯ ತಮ್ಮನ ಮೇಲೆ ಕೇಸು ದಾಖಲಾಗಿದೆ.

ಸಂತ್ರಸ್ತೆಯ ಸಹೋದರನ ಪ್ರಕಾರ, “2023 ಜನವರಿ 15ರಂದು ತನ್ನ ಸಹೋದರಿಯ ವಿವಾಹ ಕಾನ್ಪುರದ ವ್ಯಕ್ತಿಯೊಂದಿಗೆ ನಡೆದಿದೆ. ಆದರೆ ಮದುವೆಯ ಸಮಯದಲ್ಲಿ ವರದಕ್ಷಿಣೆ ನೀಡಿದ್ದರೂ ಸಹ ಇದೀಗ ಕೆಲ ತಿಂಗಳುಗಳಿಂದ ಹೆಚ್ಚುವರಿಯಾಗಿ 5ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ. ಹಣ ನೀಡಲು ಸಾಧ್ಯವಿಲ್ಲವೆಂದಾದರೆ ತನ್ನ ಸಹೋದರನೊಂದಿಗೆ ಮಲಗು ಎಂದು ಪತಿ ಒತ್ತಾಯಿಸಿದ್ದಾನೆ. ಇದಲ್ಲದೇ ಪತಿ ಮತ್ತು ಆತನ ಸಹೋದರ ಸೇರಿ ಆಕೆಯ ಹೊಟ್ಟೆಗೆ ಒದ್ದ ಕಾರಣ ಮೂರು ತಿಂಗಳ ಹಿಂದೆ ಗರ್ಭಪಾತವಾಗಿದೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಇನ್​ಸ್ಪೆಕ್ಟರ್​ ನೌಬಸ್ತಾ ಜೆಪಿ ಪಾಂಡೆ ಪ್ರಕಾರ, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಕಿರುಕುಳ ಹಲ್ಲೆ,ವರದಕ್ಷಿಣೆ ನಿಷೇದ ಕಾಯ್ದೆಯ ಅಡಿ ಸೆಕ್ಷನ್​​​ 3 ಮತ್ತು 4ರ ಅಡಿ ಎಫ್​​​ ಐ ಆರ್​​​ ದಾಖಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು