AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರಿಮಣಿ ಮಾಲೀಕ ನಾನಲ್ಲಂತಿ, ಅಂತು ಇಂತು ಮುಗಿಸ್ಯಾಕ ನಿಂತಿ ನೀ ನನ್ನ ಸಂತಿ 

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ʼಕರಿಮಣಿ ಮಾಲೀಕ ನೀನಲ್ಲʼ ಹಾಡು ಬಹಳ ಟ್ರೆಂಡಿಂಗ್ ನಲ್ಲಿದೆ. ಎಲ್ಲಿ ನೋಡಿದ್ರೂ ಕರಿಮಣಿ ಮಾಲೀಕ ರೀಲ್ಸ್ ವಿಡಿಯೋಗಳೇ ಕಾಣಸಿಗುತ್ತಿವೆ. ಈ ನಡುವೆ ಇಲ್ಲೊಂದು ಜಾನಪದ ಶೈಲಿಯ ʼಕರಿಮಣಿ ಮಾಲೀಕ ನಾನಲ್ಲಂತಿʼ ಎಂಬ ಹಾಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಈ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.

Viral Video: ಕರಿಮಣಿ ಮಾಲೀಕ ನಾನಲ್ಲಂತಿ, ಅಂತು ಇಂತು ಮುಗಿಸ್ಯಾಕ ನಿಂತಿ ನೀ ನನ್ನ ಸಂತಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 22, 2024 | 12:49 PM

Share

ಯಾವುದಾದರೂ ಒಳ್ಳೆಯ ಕ್ರಿಯೇಟಿವ್ ಕಂಟೆಂಟ್​​​ಗಳಿದ್ದರೆ, ಅಂತಹ ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತವೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ದಿಢೀರನೇ ಜನಪ್ರಿಯರಾದವರು ಸಾಕಷ್ಟು ಜನರಿದ್ದಾರೆ.  ಸದ್ಯ ಇದೇ ರೀತಿ ಜಾನಪದ ಹಾಡುಗಾರ ಶಬ್ಬೀರ್ ಡಾಂಗೆ ಅವರು ʼಕರಿಮಣಿ ಮಾಲೀಕ ನಾನಲ್ಲಂತಿʼ ಎಂಬ ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಗೀತೆಯನ್ನು ಹಾಡುವ ಮೂಲಕ ಸುದ್ದಿಯಲ್ಲಿದ್ದಾರೆ.

ಇಂದು ಜಾಗತೀಕರಣದ ಪ್ರಭಾವದಿಂದಾಗಿ ಜೀವನದ ಮೌಲ್ಯವನ್ನು ಪಸರಿಸುವಂತಹ, ಅರ್ಥಗರ್ಭಿತವಾದ ಜಾನಪದ ಗೀತೆಗಳು ಕಣ್ಮರೆಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಶಬ್ಬೀರ್ ಡಾಂಗೆ ಅವರ ಕಂಠಸಿರಿಯಲ್ಲಿ ಮೂಡಿಬಂದ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆಯು ಇದೀಗ ನೆಟ್ಟಿಗರ ಮನ ಗೆದ್ದಿದೆ. ಈ ಹಿಂದೆ ʼಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇʼ ಎಂಬ ಜಾನಪದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ʼಕರಿಮಣಿ ಮಾಲೀಕ ನಾನಲ್ಲಂತಿʼ ಹಾಡು ಸದ್ದು ಮಾಡುತ್ತಿದೆ.

ಇತ್ತೀಚಿಗೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ʼಉಪೇಂದ್ರʼ ಚಿತ್ರದ ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್ ಮಿಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಎಲ್ಲಿ ನೋಡಿದ್ರೂ ಈ ಹಾಡಿನದ್ದೇ ಹವಾ. ಹೀಗಿರುವಾಗ ಈ ನಡುವೆ ಕರಿಮಣಿ ಮಾಲೀಕನ ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಹಾಡೊಂದು ಕೂಡಾ ವೈರಲ್ ಆಗುತ್ತಿವೆ.  ಜಾನಪದ ಗಾಯಕ ಶಬ್ಬೀರ್ ಡಾಂಗೆ (@shabbir_dange_official_) ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿನ ರೀಲ್ಸ್ ವಿಡಿಯೋವನ್ನು  ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ:

ವೈರಲ್ ರೀಲ್ಸ್ ವಿಡಿಯೋದಲ್ಲಿ ಶಬ್ಬೀರ್ ಡಾಂಗೆ ಅವರು ಕರಿಮಣಿ ಮಾಲೀಕ ನಾನಲ್ಲಂತಿ. ಕರಿಮಣಿ ಮಾಲೀಕ ನಾನಲ್ಲಂತಿ ಅಂತೂ ಇಂತು ಮುಗಿಸ್ಯಾಕ ನಿಂತಿ ನನ್ನ ಸಂತಿ ಕರಿಮಣಿ ಮಾಲೀಕನ ಬದಲಿಸಬೇಕಂತಿ, ಎಷ್ಟು ದಿನದಿಂದ ಇಂತ  ಹೊಂಚಾಕಿ ಕುಂತಿ ಎಂಬ ಜಾನಪದ ಗೀತೆಯನ್ನು ಹಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼನಿಮ್ಮ ಈ ಸಾಹಿತ್ಯ ಮತ್ತು ಗಾಯನ ನೋಡಲು ನಿಮ್ಮ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ದಯವಿಟ್ಟು ನಿಮ್ಮ ಗಾಯನ ಕಲೆಯನ್ನು ಹೀಗೆ ಮುಂದುವರೆಸಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಈ ಸುಮಧುರ  ಕಂಠಕ್ಕೆ ಯಾರ ದೃಷ್ಟಿಯೂ ಬೀಳದಿರಲಿʼ ಎಂದು ಹಾರೈಸಿದ್ದಾರೆ. ಮತ್ತೊಬ್ಬ ಬಳಕೆದಾರರು ʼಯಪ್ಪಾ ಕರಿಮಣಿ ರೀಲ್ಸ್ ನೋಡಿ ಸಾಕಾಗಿತ್ತು, ಈಗ ನಿಮ್ಮ ಹಾಡು ಕೇಳಿ ಬಹಳ ಸಂತೋಷವಾಯಿತು ಸರ್ʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಶಬ್ಬೀರ್ ಡಾಂಗೆ ಅವರ ಈ ಹಾಡಿಗೆ ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!