AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್, ‌ಈ ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ

ಗರ್ಭಿಣಿ ಮಹಿಳೆಯರಿಗೆ, ವಿಶೇಷ ಚೇತನರಿಗೆ, ವೃದ್ಧರಿಗೆ ಉಚಿತ ವಾಹನ ವ್ಯವಸ್ಥೆಯನ್ನು ಕಲ್ಪಿಸುವ ಹೃದಯವಂತರನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ಬಾರ್‌ನಲ್ಲಿ ಕುಡಿದು ತೂರಾಡುವ ಕುಡುಕರಿಗೂ ಕೂಡಾ ಉಚಿತ ಆಟೋ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಈ ಕುರಿತ ಪೋಸ್ಟ್‌ ಒಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Viral Post: ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್, ‌ಈ ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ
ವೈರಲ್​​ ಪೋಸ್ಟ್​​
ಮಾಲಾಶ್ರೀ ಅಂಚನ್​
| Edited By: |

Updated on:Jul 10, 2024 | 6:18 PM

Share

ಕುಡುಕರು ಅತಿಯಾಗಿ ಎಣ್ಣೆ ಹೊಡೆದ್ರೆ, ನಶೆಯಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಕೂಡಾ ಅವರಿಗೆ ಇರೋದಿಲ್ಲ. ಇನ್ನೂ ಕುಡಿದು ಟೈಟ್‌ ಆದ್ರೆ ಅವರಿಗೆ ನೆಟ್ಟಗೆ ನೆಲದ ಮೇಲೆ ನಿಲ್ಲಲು ಕೂಡಾ ಕಷ್ಟಸಾಧ್ಯವಾಗುತ್ತದೆ. ಹೀಗೆ ಕಂಠಪೂರ್ತಿ ಕುಡಿದು ರಸ್ತೆ ಬದಿಯಲ್ಲಿ ತೂರಾಡುತ್ತಾ ಹೋಗುವ, ಸಾರ್ವಜನಿಕರಿಗೆ ತೊಂದರೆ ಕೊಡುವ ಕುಡುಕರನ್ನೂ ನೀವು ಕೂಡಾ ನೋಡಿರುತ್ತಿರಿ ಅಲ್ವಾ. ಇಂತಹ ಕುಡುಕರಿಗೆ ಇದೀಗ ಇಲ್ಲೊಂದು ಬಾರ್‌ನಲ್ಲಿ ಉಚಿತ ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಈ ಕುರಿತ ಪೋಸ್ಟ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಕೆಲ ಸಮಯಗಳ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಇರುವ ರಚನಾ ಬಾರ್‌ & ರೆಸ್ಟೋರೆಂಟ್‌ ಗ್ರಾಹಕರನ್ನು ಸೆಳೆಯುವ ಸಲುವಾಗಿ ಹಾಗೂ ಬಾರ್‌ಗೆ ಬರುವ ಗ್ರಾಹಕರ ಹಿತ ದೃಷ್ಟಿಯಿಂದ ಉಚಿತ ವಾಹನ ವ್ಯವಸ್ಥೆಯ ಆಫರ್‌ ನೀಡಿತ್ತು. ಆಟೋದಲ್ಲಿ ಕುಡುಕರಿಗಾಗಿ ಇರುವ ಈ ಭರ್ಜರಿ ಆಫರ್‌ ಬಗ್ಗೆ ಬ್ಯಾನರ್‌ ಕೂಡಾ ಹಾಕಲಾಗಿತ್ತು. ಆಗ ಈ ಸುದ್ದಿ ಬಹಳ ವೈರಲ್‌ ಆಗಿತ್ತು. ಇದೀಗ ಈ ಕುರಿತ ಪೋಸ್ಟ್‌ ಒಂದು ಮತ್ತೊಮ್ಮೆ ವೈರಲ್‌ ಆಗುತ್ತಿದೆ.

ವೈರಲ್​​ ಪೋಸ್ಟ್​​​​​ ( ಫೇಸ್​​​ಬುಕ್​​​ )

ಈ ಪೋಸ್ಟ್‌ ಅನ್ನು Namma Kudla – Mangalore ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಟೈಟ್‌ ಆದ್ರೆ ಫ್ರೀ ಡ್ರಾಮ್‌ ಸರ್ವಿಸ್‌” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಫೋಟೋದಲ್ಲಿ ಆಟೋವೊಂದರಲ್ಲಿ ಬಾರ್‌ ಒಂದು ಉಚಿತ ವಾಹನ ವ್ಯವಸ್ಥೆಯ ಆಫರ್‌ ನೀಡಿರುವ ಬ್ಯಾನರ್‌ ಅಂಟಿಸಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಸ್ಕೂಲ್​​​ನಲ್ಲಿ ದೆವ್ವ, ಮಕ್ಕಳ ಭಯ ಹೋಗಲಾಡಿಸಲು ಅಮಾವಾಸ್ಯೆ ರಾತ್ರಿಯಂದು ಶಾಲೆಯಲ್ಲಿ ಒಂಟಿಯಾಗಿ ಮಲಗಿದ ಮೇಷ್ಟ್ರು

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 600 ಕ್ಕೂ ಹೆಚ್ಚು ಲೈಕ್ಸ್‌ ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಾವ್ಹ್‌ ಇದಂತೂ ತುಂಬಾನೇ ಒಳ್ಳೆಯ ಸರ್ವಿಸ್‌ʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ನೆಟ್ಟಿಗರಂತೂ ಈ ಭರ್ಜರಿ ಆಫರ್‌ ಕಂಡು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Wed, 10 July 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​