AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ

Karnataka Bank Holidays in March 2021: ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

Bank Holidays in March 2021: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Feb 28, 2021 | 4:34 PM

Share

ಜನಸಾಮಾನ್ಯರಿಗೆ ಹಬ್ಬ ಹರಿದಿನಗಳನ್ನು ತಿಳಿಸುವ ಕ್ಯಾಲೆಂಡರ್​ ಎಷ್ಟು ಮುಖ್ಯವೋ, ಬ್ಯಾಂಕ್​ ರಜೆಗಳ ಪಟ್ಟಿಯೂ ಅಷ್ಟೇ ಮುಖ್ಯ. ವ್ಯವಹಾರ ಕಾರಣಗಳಿಗಾಗಿ ತುರ್ತು ಸಂದರ್ಭದಲ್ಲಿ ಬ್ಯಾಂಕ್​ಗೆ ತೆರಳಿದಾಗ ಅಪ್ಪಿತಪ್ಪಿ ಅಂದು ಬ್ಯಾಂಕ್​ಗೆ ರಜೆಯಿದ್ದರೆ ಭಾರೀ ಕಷ್ಟವಾಗಿಬಿಡುತ್ತದೆ. ಹಾಗಾಗಿ, ಹೆಚ್ಚಿನವರು ಹೊಸ ತಿಂಗಳು ಹತ್ತಿರವಾಗುತ್ತಿದ್ದಂತೆಯೇ ಯಾವ್ಯಾವ ದಿನ ಬ್ಯಾಂಕ್​ಗಳಿಗೆ ರಜೆ ಎಂದು ತಿಳಿದುಕೊಳ್ಳಲು ಇಷ್ಟಪಡುತ್ತಾರೆ. ಸದ್ಯ ಫೆಬ್ರವರಿ ಮುಗಿದು ಮಾರ್ಚ್​ ತಿಂಗಳು ಶುರುವಾಗುತ್ತಿದೆ. ಈ ಬಾರಿ ಮಾರ್ಚ್​ನಲ್ಲಿ ಒಟ್ಟು 7 ರಜೆಗಳಿದ್ದು ಅದು ಯಾವ ಯಾವ ದಿನಾಂಕದಂದು ಎಂಬ ಪಟ್ಟಿ ಇಲ್ಲಿದೆ.

ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ.

2021ರ ಮಾರ್ಚ್​ ತಿಂಗಳ ರಜಾ ವಿವರ:

  • ಮಾರ್ಚ್​ 7: ಭಾನುವಾರ
  • ಮಾರ್ಚ್​ 11: ಶಿವರಾತ್ರಿ
  • ಮಾರ್ಚ್​ 13: ಎರಡನೇ ಶನಿವಾರ
  • ಮಾರ್ಚ್​ 14: ಭಾನುವಾರ
  • ಮಾರ್ಚ್​ 21: ಭಾನುವಾರ
  • ಮಾರ್ಚ್​ 27: ನಾಲ್ಕನೇ ಶನಿವಾರ
  • ಮಾರ್ಚ್​ 28: ಭಾನುವಾರ

ಹೀಗೆ ಒಟ್ಟು 7 ದಿನಗಳು ರಜೆ ಇದ್ದು, ಮಾರ್ಚ್​ 12ರ ಶುಕ್ರವಾರ ಒಂದು ರಜೆ ಹಾಕಿಕೊಂಡರೆ ಬ್ಯಾಂಕ್​ ಉದ್ಯೋಗಿಗಳಿಗೆ ಸತತ ನಾಲ್ಕು ದಿನಗಳ ರಜೆ ಸಿಗಲಿದೆ. ಈ ಕಾರಣಗಳಿಂದ ಬ್ಯಾಂಕ್​ನಲ್ಲಿ ಮುಖ್ಯ ಕೆಲಸವೇನಾದರೂ ಇದ್ದರೆ ಮೊದಲೇ ಯೋಚಿಸಿ ತುಸು ಮುಂಚಿತವಾಗಿ ಮುಗಿಸಿಕೊಳ್ಳುವುದೇ ಒಳಿತು.

ಇದನ್ನೂ ಓದಿ: ಮತ್ತೊಂದು ಕ್ರಾಂತಿಗೆ ಸಿದ್ಧವಾಯ್ತು ಜಿಯೋ, ಕೇವಲ ₹1,999ಕ್ಕೆ ಎರಡು ವರ್ಷಗಳ ತನಕ ಅನಿಯಮಿತ ಸೌಲಭ್ಯ

ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 2:42 pm, Sat, 27 February 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ