Viral: ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯಲು ಆರಂಭಿಸಿದ ವೈದ್ಯರು;‌ ಇಲ್ಲಿದೆ ವೈರಲ್‌ ಫೋಟೋಸ್‌

ವೈದ್ಯರು ಬರೆಯುವ ಪ್ರಿಸ್ಕ್ರಿಪ್ಷನ್‌ ಯಾರಿಗೆ ತಾನೇ ಅರ್ಥವಾಗುತ್ತೆ ಹೇಳಿ, ಇಂಗ್ಲೀಷಿನಲ್ಲಿ ಗೀಚುವ ಈ ಅಕ್ಷರಗಳು ಮೆಡಿಕಲ್‌ ಶಾಪ್‌ ಅವರಿಗೆ ಬಿಟ್ಟು ಬೇರೆ ಯಾರಿಗೂ ಅರ್ಥವಾಗದು. ಸಾಮಾನ್ಯವಾಗಿ ಎಲ್ಲಾ ಡಾಕ್ಟರ್‌ಗಳು ಕೂಡಾ ಇಂಗ್ಲೀಷಿನಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯುತ್ತಾರೆ ಈ ಮಧ್ಯೆ ಇಲ್ಲೊಂದಷ್ಟು ಕನ್ನಡದ ವೈದ್ಯರು ಕನ್ನಡದ ಮೇಲಿನ ಪ್ರೀತಿಗಾಗಿ ಕನ್ನಡ ಭಾಷೆಯಲ್ಲಿಯೇ ಔಷಧ ಚೀಟಿಯನ್ನು ಬರೆಯಲು ಆರಂಭಿಸಿದ್ದಾರೆ. ಈ ಕುರಿತ ಒಂದಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೈದ್ಯರ ಕನ್ನಡ ಪ್ರೇಮ ನೆಟ್ಟಿಗರ ಮನ ಗೆದ್ದಿದೆ.

Viral: ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯಲು ಆರಂಭಿಸಿದ ವೈದ್ಯರು;‌ ಇಲ್ಲಿದೆ ವೈರಲ್‌ ಫೋಟೋಸ್‌
ವೈರಲ್​​ ಫೋಟೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 11, 2024 | 10:51 AM

ಭಾಷೆ ಉಳಿಯಲು ಅಥವಾ ಅಳಿಯಲು ನಾವೇ ಕಾರಣರಾಗುತ್ತೇವೆ. ಹೌದು ಒಂದು ಭಾಷೆಯ ಮೇಲಿನ ಅಭಿಮಾನ, ಗೌರವ, ಭಾಷೆಯ ಬಳಕೆ ಆ ಭಾಷೆಯ ಉಳಿಯುವಿಕೆಗೆ ಕಾರಣವಾಗುತ್ತದೆ. ಹಲವರು ತಮ್ಮ ಭಾಷೆಯ ಮೇಲಿನ ಪ್ರೀತಿಯನ್ನು ಬೇರೆ ಬೇರೆ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ಅದೇ ರೀತಿ ಇಲ್ಲೊಂದು ವೈದ್ಯರು ಇದೀಗ ತಮ್ಮ ಮಾತೃಭಾಷೆಯಾದ ಕನ್ನಡದ ಮೇಲಿನ ಪ್ರೀತಿಯಿಂದ ನಮ್ಮ ಕನ್ನಡದಲ್ಲಿಯೇ ಔಷಧ ಚೀಟಿಯನ್ನು ಬರೆಯಲು ಆರಂಭಿಸಿದ್ದಾರೆ. ಈ ಮೂಲಕ ಕನ್ನಡಾಭಿಮಾನವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಈ ಕುರಿತ ಒಂದಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೈದ್ಯರ ಕನ್ನಡ ಪ್ರೇಮ ನೆಟ್ಟಿಗರ ಮನ ಗೆದ್ದಿದೆ.

ಚಿಕ್ಕನಾಯಕನಹಳ್ಳಿಯ ಮಹಿಮಾ ದಂತಚಿಕಿತ್ಸಾಲಯದ ವೈದ್ಯರಾದ ಡಾ. ಸಿ.ಜಿ ಮಲ್ಲಿಕಾರ್ಜುನ್‌ ಮತ್ತು ದೇವರಚಿಕ್ಕನಹಳ್ಳಿಯ ಕೆ.ವಿ ಡೆಂಟಲ್‌ ಕ್ಲಿನಿಕ್‌ನ ಡಾ. ಹರಿಪ್ರಸಾದ್‌ ಸಿ.ಎಸ್‌ ಕನ್ನಡದಲ್ಲಿಯೇ ರೋಗಿಗಳಿಗೆ ಔಷಧ ಚೀಟಿಯನ್ನು ಕೊಡುತ್ತಿದ್ದು, ಈ ಕುರಿತ ಒಂದಷ್ಟು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ವೈರಲ್​​​ ಫೋಟೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಉಮೇಶ್‌ ಶಿವರಾಜು (umesh_anush) ಎಂಬವರು ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಕರ್ನಾಟಕದಲ್ಲಿ ಕನ್ನಡದಲ್ಲಿಯೇ ಔಷಧ ಚೀಟಿಗಳನ್ನು ಬರೆಯಲು ಆರಂಭಿಸಿದ ವೈದ್ಯರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗಿರುವ ಫೋಟೋದಲ್ಲಿ ವೈದ್ಯರು ರೋಗಿಗಳಿಗೆ ಕನ್ನಡ ಭಾಷೆಯಲ್ಲಿಯೇ ಔಷಧ ಚೀಟಿಯನ್ನು ಬರೆದು ಕೊಟ್ಟಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಭೂಮಿಯತ್ತ ಧಾವಿಸುತ್ತಿದೆ ಬೃಹತ್‌ ಕ್ಷುದ್ರಗ್ರಹ, ಎಚ್ಚರಿಕೆ ನೀಡಿದ ಇಸ್ರೋ

ಸೆಪ್ಟೆಂಬರ್‌ 10 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ʼನಿಜಕ್ಕೂ ಇದು ತುಂಬಾ ಖುಷಿಯ ವಿಚಾರʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼವೈದ್ಯರ ಈ ನಡೆಗೆ ಸಂಪೂರ್ಣವಾಗಿ ನನ್ನ ಬೆಂಬಲ ಇದೆʼ ಎಂದು ಹೇಳಿದ್ದಾರೆ.

ವೈರಲ್​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ