AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿಗಳನ್ನು ನುಂಗಿದ ಹೆಬ್ಬಾವು; 2 ವರ್ಷಗಳ ನಂತರ ರೈತನಿಗೆ ಪರಿಹಾರ ನೀಡಿದ ಕೇರಳ ಸರ್ಕಾರ

ಮನೆಯಲ್ಲಿದ್ದ ಕೋಳಿ ಗೂಡಿನಲ್ಲಿ ಪ್ರತಿದಿನ ಕೋಳಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದುದ್ದನ್ನು ಗಮನಿಸಿದ ಜಾರ್ಜ್ ಅವರು ಚಿಂತೆಗೊಳಲಾಗಿದ್ದರು. ಆರಂಭದಲ್ಲಿ, ಯಾರೋ ಕೋಳಿಗಳನ್ನು ಕದಿಯುತ್ತಿದ್ದಾರೆ ಎಂದು ಅವರು ಶಂಕಿಸಿದ್ದಾರೆ, ಆದರೆ ಜೂನ್ 2022 ರಲ್ಲಿ ಒಂದು ದಿನ, ಹೆಬ್ಬಾವು ಕೋಳಿ ನುಂಗುತ್ತಿರುವುದನ್ನು ಕಂಡುಬಂದಿದೆ.

ಕೋಳಿಗಳನ್ನು ನುಂಗಿದ ಹೆಬ್ಬಾವು; 2 ವರ್ಷಗಳ ನಂತರ ರೈತನಿಗೆ ಪರಿಹಾರ ನೀಡಿದ ಕೇರಳ ಸರ್ಕಾರ
ಅಕ್ಷತಾ ವರ್ಕಾಡಿ
|

Updated on:Jul 11, 2024 | 12:39 PM

Share

ಕೇರಳದ ಕಾಸರಗೋಡಿನ ಸಣ್ಣ ಕೋಳಿ ಸಾಕಾಣಿಕೆದಾರ ಕೆ.ವಿ.ಜಾರ್ಜ್ ಅವರು ಸಾಕುತ್ತಿದ್ದ ಕೆಲವು ಕೋಳಿಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರಕ್ಕಾಗಿ ಕಳೆದ ಎರಡು ವರ್ಷಗಳಿಂದ ಕಛೇರಿಗಳ ಸುತ್ತಾಟ ನಡೆಸಿದರೂ ಏನು ಪರಿಹಾರ ಸಿಗದೇ ನೊಂದಿದ್ದ ಕೆ.ವಿ.ಜಾರ್ಜ್ ಅವರಿಗೆ ಇದೀಗ 2 ವರ್ಷಗಳ ಕೇರಳ ಸರ್ಕಾರ ಪರಿಹಾರ ನೀಡಿದೆ.

ತಮ್ಮ ಮನೆಯಲ್ಲಿದ್ದ ಕೋಳಿ ಗೂಡಿನಲ್ಲಿ ಪ್ರತಿದಿನ ಸಂಖ್ಯೆ ಕಡಿಮೆಯಾಗುತ್ತಿದ್ದುದ್ದನ್ನು ಗಮನಿಸಿದ ಜಾರ್ಜ್ ಅವರು ಚಿಂತೆಗೊಳಲಾಗಿದ್ದರು. ಆರಂಭದಲ್ಲಿ, ಯಾರೋ ಕೋಳಿಗಳನ್ನು ಕದಿಯುತ್ತಿದ್ದಾರೆ ಎಂದು ಅವರು ಶಂಕಿಸಿದ್ದಾರೆ, ಆದರೆ ಜೂನ್ 2022 ರಲ್ಲಿ ಒಂದು ದಿನ, ಹೆಬ್ಬಾವು ಕೋಳಿ ನುಂಗುತ್ತಿರುವುದನ್ನು ಕಂಡಿದ್ದಾರೆ.

ಭಾರೀ ಗಾತ್ರದ ಹೆಬ್ಬಾವನ್ನು ಕಂಡ ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿಗಳು ಬಂದು ಅದನ್ನು ಕೊಂಡೊಯ್ದಿದ್ದಾರೆ. ನಂತರ, ಅಪರೂಪದ ಸರೀಸೃಪವು ‘ರಾಜ್ಯ-ರಕ್ಷಿತ’ ಆಗಿರುವುದರಿಂದ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಅರಣ್ಯ ಅಧಿಕಾರಿಗಳು ಜಾರ್ಜ್ ಅವರಿಗೆ ತಿಳಿಸಿದ್ದರು. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಶೆಡ್ಯೂಲ್ I ರ ಅಡಿಯಲ್ಲಿ ಹೆಬ್ಬಾವಿಗೆ ಅತ್ಯಂತ ರಕ್ಷಣೆಯ ಸ್ಥಾನಮಾನವನ್ನು ನೀಡಲಾಗಿದೆ.

ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ಆದರೆ ಪರಿಹಾರವನ್ನು ಪಡೆಯಲು ಅವರು ಮಾಡಿದ ಪ್ರಯತ್ನಗಳು ಕಾರ್ಯರೂಪಕ್ಕೆ ಬರಲಿಲ್ಲ. ಒಂದು ವರ್ಷದ ನಂತರ ರಾಜ್ಯ ಸಚಿವರೊಬ್ಬರು ನಡೆಸಿದ ‘ಜನತಾ ಅದಾಲತ್’ ನಲ್ಲಿ ದಿಗ್ಭ್ರಮೆಗೊಂಡ ಜಾರ್ಜ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಾವು ಕೇರಳ ಸರಕಾರದ್ದಾಗಿರಬಹುದು, ಆದರೆ ಕಳೆದುಕೊಂಡ ಕೋಳಿಗಳು ತಮ್ಮದಾಗಿದ್ದು, ಪರಿಹಾರ ನೀಡಬೇಕು ಎಂದು ಜಾರ್ಜ್ ಸಚಿವರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು.

ಜಾರ್ಜ್‌ಗೆ ಸಚಿವರು ಸಮಾಧಾನ ಮಾಡಿದರೂ ಪರಿಹಾರ ಸಿಕ್ಕಿರಲಿಲ್ಲ. ಅಂತಿಮವಾಗಿ, ಅವರು ಕೇರಳ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಲು ನಿರ್ಧರಿಸಿದ್ದಾರೆ. ಆದರೆ, ಆಯೋಗದ ಮೊರೆ ಹೋಗುವ ಮುನ್ನವೇ ಪರಿಹಾರದ ಕುರಿತು ಅರಣ್ಯ ಇಲಾಖೆಯಿಂದ ಕರೆ ಬಂದಿದೆ. ರಾಜ್ಯ ಸರ್ಕಾರದಿಂದ ಹೆಬ್ಬಾವು ಸೇವಿಸಿದ ಕೋಳಿಗಳಿಗೆ 2,000 ರೂ. ಪರಿಹಾರ ಸಿಕ್ಕಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Thu, 11 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ