AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆನೆಗೆ ಬಿಯರ್‌ ಕುಡಿಸಿದ ಪ್ರವಾಸಿಗ; ವೈರಲ್‌ ಆಯ್ತು ವಿಡಿಯೋ

ಪ್ರವಾಸಿ ಸ್ಥಳಗಳಲ್ಲಿ ಒಂದಷ್ಟು ಪ್ರವಾಸಿಗರು ಎಲ್ಲೆ ಮೀರಿ ವರ್ತಿಸುವಂತಹ ಘಟನೆಗಳಿಗೆ ಸಂಬಂಧಪಟ್ಟಂತಹ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಸ್ಪ್ಯಾನಿಷ್‌ ಪ್ರವಾಸಿಗನೊಬ್ಬ ಕೀನ್ಯಾದ ಅಭಯಾರಣ್ಯವೊಂದರಲ್ಲಿ ಆನೆಗೆ ಬಿಯರ್‌ ಕುಡಿಸಿದ್ದಾನೆ. 2024 ರಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಪ್ರವಾಸಿಗನ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video: ಆನೆಗೆ ಬಿಯರ್‌ ಕುಡಿಸಿದ ಪ್ರವಾಸಿಗ; ವೈರಲ್‌ ಆಯ್ತು ವಿಡಿಯೋ
ಆನೆಯ ಸೊಂಡಿಲಿಗೆ ಬಿಯರ್‌ ಸುರಿದ ಪ್ರವಾಸಿಗImage Credit source: Social Media
ಮಾಲಾಶ್ರೀ ಅಂಚನ್​
|

Updated on: Aug 30, 2025 | 12:21 PM

Share

ಪ್ರಾಣಿ ಹಿಂಸೆ ಮಹಾಪಾಪ ಅನ್ನೋ ಮಾತಿದೆ. ಹೀಗಿದ್ರೂ ಕೂಡ ಅನೇಕರು ಒಂದಲ್ಲಾ ಒಂದು ರೀತಿಯಲ್ಲಿ ಪ್ರಾಣಿಗಳಿಗೆ ಹಿಂಸೆಯನ್ನು ನೀಡುತ್ತಿರುತ್ತಾರೆ. ಹೌದು ಕೆಲವರು ತಮ್ಮ ಹುಚ್ಚಾಟಗಳಿಗಾಗಿ ನಾಯಿಯ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಹಚ್ಚುವಂತಹ,  ನಾಯಿಗೆ ಮದ್ಯ ಕುಡಿಸಿದಂತಹ ಘಟನೆಗಳು ಈ ಹಿಂದೆಯೂ ನಡೆದಿವೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತಾನು ಬಿಯರ್‌ ಕುಡಿಯುವುದರ ಜೊತೆಗೆ ಆನೆಗೂ (Tourist pours beer to elephant’s trunk)  ಬಿಯರ್‌ ಕುಡಿಸಿದ್ದಾನೆ. ಕೀನ್ಯಾದ ಅಭಯಾರಣ್ಯವೊಂದರಲ್ಲಿ ಸ್ಪ್ಯಾನಿಷ್‌ ಪ್ರವಾಸಿಗ ಆನೆಯ ಸೊಂಡಿಲಿಗೆ  ಬಿಯರ್‌ ಸುರಿದಿದ್ದು, ಈತನ ಈ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆನೆಯ ಸೊಂಡಿಲಿಗೆ ಬಿಯರ್‌ ಸುರಿದ ಪ್ರವಾಸಿಗ:

ಬಿಬಿಸಿ ವರದಿಯ  ಪ್ರಕಾರ, 2024 ರಲ್ಲಿ ನಡೆದ ಘಟನೆ ಇದಾಗಿದ್ದು, ಕೀನ್ಯಾದ ಲೈಕಿಪಿಯಾದ ಓಲ್‌ ಜೋಗಿ ಕನ್ಸರ್ವೆನ್ಸಿ ಅಭಯಾರಣ್ಯದಲ್ಲಿ ಸ್ಪ್ಯಾನಿಷ್ ಪ್ರವಾಸಿಗ ಆನೆಯ ಸೊಂಡಿಲಿಗೆ ಬಿಯರ್‌ ಸುರಿದಿದ್ದಾನೆ. ಈ ವಿಡಿಯೋವನ್ನು ಆ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದನು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬಳಿಕ ವಿಡಿಯೋವನ್ನು ಡಿಲಿಟ್‌ ಮಾಡಿದ್ದನು. ಆದರೆ ಈ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್‌ ಆಗಿದೆ.

ಇದನ್ನೂ ಓದಿ
Image
ಹುಟ್ಟಿದ ನಂತರ ಮೊದಲ ಬಾರಿಗೆ ನೀರಿನ ಸ್ಪರ್ಶ
Image
ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಮಿನಿ ಟ್ರಕನ್ನು ಉರುಳಿಸಿದ ಆನೆ
Image
ತಾಯಿಯಿಂದ ಬೆರ್ಪಟ್ಟು ಕೇರಳದ ಶಾಲಾ ಆವರಣಕ್ಕೆ ಎಂಟ್ರಿ ಕೊಟ್ಟ ಮರಿಯಾನೆ
Image
ಚೊಂಪುವಿಗೆ ಚೆಂಡಾಟ ಆಡೋದಂದ್ರೆ ಬಲು ಇಷ್ಟ ನೋಡಿ

ಓಲ್‌ ಜೋಗಿ ವನ್ಯಜೀವಿ ಸಂರಕ್ಷಣಾಲಯದಲ್ಲಿನ ಬುಪಾ ಹೆಸರಿನ ಆನೆಯ ಸೊಂಡಿಲಿಗೆ ಪ್ರವಾಸಿಗ ಬಿಯರ್‌ ಸುರಿದಿದ್ದು, ಈ ಬಗ್ಗೆ ಮಾತನಾಡಿದ ಸಂರಕ್ಷಣಾಲಯವು “ನಾವು ಇಂತಹ ವಿಷಯಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ನಮ್ಮ ಆರೈಕೆಯಲ್ಲಿರುವ ಪ್ರಾಣಿಗಳ ಯೋಗಕ್ಷೇಮ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳಲಿ ಬದ್ಧರಾಗಿದ್ದೇವೆ” ತಿಳಿಸಿದೆ. ಜೊತೆಗೆ ಸಂರಕ್ಷಣಾಲಯವು ಈ ನಡವಳಿಕೆ ಸ್ವೀಕಾರಾರ್ಹವಲ್ಲ, ಇದು ಅಪಾಯಕಾರಿ ಮತ್ತು ನಮ್ಮ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದು ಹೇಳಿದೆ.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು MustShareNews ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕೀನ್ಯಾದಲ್ಲಿ ಆನೆಗೆ ಬಿಯರ್‌ ನೀಡಿದ ಸ್ಪ್ಯಾನಿಷ್‌ ಪ್ರವಾಸಿಗ; ಈ ಘಟನೆಯ ಬಗ್ಗೆ ಕೀನ್ಯಾ ವನ್ಯಜೀವಿ ಸೇವೆ ಮತ್ತು ಸಂಬಂಧಿತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಇದನ್ನೂ ಓದಿ: ಹುಟ್ಟಿದ ನಂತರ ಮೊದಲ ಬಾರಿಗೆ ನೀರಿನ ಸ್ಪರ್ಶ, ಆನೆ ಮರಿಯ ಸಂತಸ ನೋಡಿ

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮೊದಲು ಸ್ಪ್ಯಾನಿಷ್‌ ಪ್ರವಾಸಿಗ ತಾನು ಬಿಯರ್‌ ಕುಡಿದು, ನಂತರ ಆನೆಯ ಸೊಂಡಿಲಿಗೆ ಉಳಿದ ಬಿಯರ್‌ ಸುರಿಯುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರವಾಸಿಗನ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ