AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆನಂದ್ ಮಹೀಂದ್ರಾ ಅವರಿಗೆ ಈ ಹಳ್ಳಿ ಇಷ್ಟವಾಗಲು ಕಾರಣ ಇದೇ ನೋಡಿ

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ವಿಶೇಷವಾಗಿ ಕೇರಳದ ಕಡಮಕ್ಕುಡಿ ಗ್ರಾಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭೂಮಿಯ ಮೇಲಿನ ಅತ್ಯಂತ ಸುಂದರವಾದ ಹಳ್ಳಿ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಈ ಹಳ್ಳಿಯ ಸೌಂದರ್ಯಕ್ಕೆ ಮನಸೋತಿದ್ದಾರೆ. ಸ್ವಚ್ಛ ಸುಂದರ ಈ ಹಳ್ಳಿಯ ಕುರಿತು ಅವರು ಮಾಡಿದ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆನಂದ್ ಮಹೀಂದ್ರಾ ಅವರಿಗೆ ಈ ಹಳ್ಳಿ ಇಷ್ಟವಾಗಲು ಕಾರಣ ಇದೇ ನೋಡಿ
ವೈರಲ್‌ ಪೋಸ್ಟ್‌ Image Credit source: Twitter
ಸಾಯಿನಂದಾ
|

Updated on:Dec 08, 2025 | 3:16 PM

Share

ಕೇರಳ, ಡಿಸೆಂಬರ್ 08: ಆನಂದ್ ಮಹೀಂದ್ರಾ ಇತ್ತೀಚೆಗೆ ಕೇರಳದ ಕಡಮಕ್ಕುಡಿ (Kadamakkudi in Kerala) ದ್ವೀಪಕ್ಕೆ ಭೇಟಿ ನೀಡಿದ್ದು, ಈ ಸುಂದರವಾದ ಹಳ್ಳಿಯನ್ನು ಕಂಡು ಕಳೆದೇ ಹೋಗಿದ್ದಾರೆ. ಸ್ವಚ್ಛವಾದ ಪರಿಸರ, ಗ್ರಾಮೀಣ ಜೀವನ ಮತ್ತು ನೈಸರ್ಗಿಕ ಸೌಂದರ್ಯದ ಪರಿಪೂರ್ಣ ಸಮತೋಲನದಿಂದ ಈ ಸ್ಥಳವು ಆಕರ್ಷಣೀಯವಾಗಿದ್ದು ಕೈಗಾರಿಕೋದ್ಯಮಿ ಆನಂದ್ ಮಹಿಂದ್ರಾರವರ (Anand Mahindra) ಗಮನ ಸೆಳೆಯಲು ಇದುವೇ ಮುಖ್ಯ ಕಾರಣವಾಗಿದೆ. ತಾವು ಅಂದುಕೊಂಡಂತೆ ಈ ಹಳ್ಳಿಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ. ಈ ಕುರಿತಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆನಂದ್ ಮಹಿಂದ್ರಾ (Anand Mahindra) ತಮ್ಮ ಎಕ್ಸ್ ಖಾತೆಯಲ್ಲಿ ಕೇರಳದ ಕಡಮಕ್ಕುಡಿ ದ್ವೀಪಗಳ ಸುಂದರ ನೋಟಗಳನ್ನೊಳಗೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಡಮಕ್ಕುಡಿದಲ್ಲಿ ಹಚ್ಚ ಹಸಿರಿನ ಪರಿಸರದ ಜೊತೆಗೆ ವಿಶಾಲವಾದ ಸ್ವಚ್ಛಂದವಾಗಿ ಹರಿಯುತ್ತಿರುವ ಹಿನ್ನೀರಿನ ದೃಶ್ಯವನ್ನು ಕಾಣಬಹುದು.

ವೈರಲ್‌ ಪೋಸ್ಟ್‌ ಇಲ್ಲಿದೆ ನೋಡಿ

ಈ ಪೋಸ್ಟ್‌ಗೆ ನಾನು ನನಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇನೆ… ಕಳೆದ ವಾರ ಕೊಚ್ಚಿಯಲ್ಲಿ ನಮ್ಮ ಗುಂಪಿನ M101 ವಾರ್ಷಿಕ ನಾಯಕತ್ವ ಸಮ್ಮೇಳನದ ನಂತರ, ಶುಕ್ರವಾರ ನಾನು ಕಡಮಕ್ಕುಡಿ ಭೂಮಿಯ ಮೇಲಿನ ಅತ್ಯಂತ ಸುಂದರವಾದ ಹಳ್ಳಿಗಳಲ್ಲಿ ಒಂದಾಗಿ ಖ್ಯಾತಿಗೆ ಅರ್ಹವಾಗಿದೆಯೇ ಎಂದು ನೋಡಲು ಅಲ್ಲಿಗೆ ಕಾರಿನಲ್ಲಿ ಹೋದೆ. ಸ್ವಚ್ಛ ಮತ್ತು ನಿರ್ಮಲ. ಕಣ್ಣಿಗೆ ಕಾಣುವಷ್ಟು ದೂರ ಚಾಚಿಕೊಂಡಿರುವ ಹಿನ್ನೀರು. ಸಣ್ಣ ದೋಣಿಗಳು ನಿಧಾನವಾಗಿ ಕಾಲುವೆಗಳ ಮೂಲಕ ಸಾಗುತ್ತಿದೆ. ಬೆಳ್ಳಕ್ಕಿಗಳು ಮತ್ತು ಕಪ್ಪು ನೀರುಕಾಗೆಗಳು, ಬಿಸಿಲಿನಲ್ಲಿ ತಮ್ಮನ್ನು ತಾವು ಒಣಗಿಸಿಕೊಂಡು, ಮುದ್ದಾಡುತ್ತಿವೆ, ಮೋಡಿ ಮಾಡುವಂತಿವೆ. ಕೆಲವು ಭೂದೃಶ್ಯಗಳು ಕೇವಲ ಪ್ರಭಾವ ಬೀರುವುದಿಲ್ಲ; ಅವು ನಿಮ್ಮನ್ನು ಮರು ಮಾಪನಾಂಕ ಮಾಡುತ್ತವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನೀತಾ ಅಂಬಾನಿ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಸಿಬ್ಬಂದಿ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ 1.1 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕೇರಳ ಸ್ವಚ್ಛತೆಯನ್ನು ಗಂಭೀರವಾಗಿ ಪರಿಗಣಿಸುವುದರಿಂದ ಇದು ಸುಂದರವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಕೊಚ್ಚಿಯ ಹಿನ್ನೀರಿನಲ್ಲಿ ನೆಲೆಸಿರುವ ಹದಿನಾಲ್ಕು ರಮಣೀಯ ದ್ವೀಪಗಳ ಸಮೂಹ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Mon, 8 December 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ