AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ

Viral News: ಕೇರಳದ ಕಲಾಕಾರ ಡಾವಿಂಚಿ ಸುರೇಶ್ ಬೇಕರಿ ಉತ್ಪನ್ನಗಳನ್ನು ಮತ್ತು ವಿವಿಧ ಬಣ್ಣದ ಬಿಸ್ಕೆಟ್​ಗಳನ್ನು ಬಳಸಿ ತೆಯ್ಯಂ ಕಲಾಕೃತಿಯನ್ನು ರಚಿಸಿದ್ದಾರೆ.

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ
ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಿದ ತೆಯ್ಯಂ ಕಲಾಕೃತಿ
TV9 Web
| Edited By: |

Updated on:Oct 13, 2021 | 11:05 AM

Share

ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್​ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್​ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.

ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್​ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್​ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Published On - 11:03 am, Wed, 13 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ