AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ

Viral News: ಕೇರಳದ ಕಲಾಕಾರ ಡಾವಿಂಚಿ ಸುರೇಶ್ ಬೇಕರಿ ಉತ್ಪನ್ನಗಳನ್ನು ಮತ್ತು ವಿವಿಧ ಬಣ್ಣದ ಬಿಸ್ಕೆಟ್​ಗಳನ್ನು ಬಳಸಿ ತೆಯ್ಯಂ ಕಲಾಕೃತಿಯನ್ನು ರಚಿಸಿದ್ದಾರೆ.

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ
ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಿದ ತೆಯ್ಯಂ ಕಲಾಕೃತಿ
TV9 Web
| Edited By: |

Updated on:Oct 13, 2021 | 11:05 AM

Share

ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್​ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್​ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.

ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್​ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್​ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Published On - 11:03 am, Wed, 13 October 21

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ