AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ

ಅದೃಷ್ಟ ಯಾವಾಗ, ಹೇಗೆ ಒಲಿಯುತ್ತೆ ಅಂತ  ಹೇಳೋಕೆ ಆಗೊಲ್ಲ. ಈ ಅದೃಷ್ಟದ ಕಾರಣದಿಂದಲೇ ರಾತ್ರೋರಾತ್ರಿ ಶ್ರೀಮಂತರಾದವರನ್ನು ನೀವು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಬಂಪರ್ ಅದೃಷ್ಟ ಒಳಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿಸಿದ್ದು, ಇಂದು  10 ಕೋಟಿ ಬಂಪರ್ ಲಾಟರಿ ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.  

ಇದಪ್ಪಾ ಅದೃಷ್ಟ ಅಂದ್ರೆ; 10 ಕೋಟಿ ರೂ. ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಣ್ಣೂರಿನ ಆಟೋ ಚಾಲಕ
ಮಾಲಾಶ್ರೀ ಅಂಚನ್​
| Edited By: |

Updated on: Mar 27, 2024 | 5:28 PM

Share

ಅದೃಷ್ಟ ಯಾವಾಗ, ಯಾರಿಗೆ ಯಾವ ರೂಪದಲ್ಲಿ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಅದೆಷ್ಟೋ ಜನರು ಲಾಟರಿ ಗೆಲ್ಲುವ ಮೂಲಕವೇ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾಗಿದ್ದಾರೆ. ಅದೃಷ್ಟ ಇದ್ದವರಿಗೆ ಲಾಟರಿ ಹೊಡಿಯುತ್ತದೆ.   ಹೀಗೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅದೆಷ್ಟೋ ಜನರು ಲಾಟರಿ ಟಿಕೆಟ್ ಖರೀದಿಸುವುದುಂಟು. ಆದರೆ ಕೆಲವರಿಗೆ ಮಾತ್ರ ಈ ಲಾಟರಿಯಲ್ಲಿ ಅದೃಷ್ಟದ ಬಾಗಿಲು ತೆರೆಯುತ್ತದೆ. ಇದೀಗ ಕೇರಳದ ಆಟೋ ಚಾಲಕರೊಬ್ಬರಿಗೆ ಈ ಅದೃಷ್ಟ ಒಲಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿ  ಮಾಡಿದ್ದು, ಇಂದು ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆದ್ದು ಕೋಟ್ಯಾಧಿಪತಿಯಾಗಿದ್ದಾರೆ.

ಕೇರಳದ ಕಣ್ಣೂರಿನ  ಆಳಕೋಡ್ ನಿವಾಸಿ ನಾಸರ್ ಅವರು 10 ಕೋಟಿ ರೂ. ಬಂಪರ್ ಲಾಟರಿ ಗೆದ್ದಿದವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ನಾಸರ್ ಇದೀಗ ಬಂಪರ್ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.

ಇದನ್ನೂ ಓದಿ: ಕೋಳಿ, ಹಂದಿ ಇತ್ಯಾದಿ ಮಾಂಸಕ್ಕಿಂತ ಹೆಬ್ಬಾವಿನ ಮಾಂಸ ಬೆಸ್ಟ್; ಅಧ್ಯಯನ 

ಕೇರಳದ ಕಾರ್ತಿಕಪುರದ ರಾರರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಲಾಟರಿ ಟಿಕೆಟ್ ಖರೀಸಿದ್ದು, ಅವರ ಅದೃಷ್ಟ ಖುಲಾಯಿಸಿ ಈ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಹಣವನ್ನು ಗೆದ್ದಿದ್ದಾರೆ. ಕಾರ್ತಿಕಪುರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುವ ನಾಸರ್ ನಿನ್ನೆ ರಾತ್ರಿಯಷ್ಟೇ ಲಾಟರಿ ಟಿಕೆಟ್ ಖರೀದಿಸಿದ್ದರು ಎಂದು ಲಾಟರಿ ಏಜೆಂಟ್ ರಾಜು ಹೇಳಿದ್ದಾರೆ. ಇದೀಗ ಟಿಕೆಟ್ ಖರೀದಿ ಮಾಡಿದ ಮರು ದಿನವೇ ನಾಸಿರ್ ಅವರಿಗೆ 10. ಕೋಟಿ ರೂ. ಗಳ ಬಂಪರ್ ಲಾಟರಿ ಸಿಕ್ಕಿದ್ದು,  ಈ ಸುದ್ದಿಯನ್ನು ಕೇಳಿ ಅದೃಷ್ಟ ಅಂದ್ರೆ ಇದಪ್ಪಾ ಎಂದು ನೆಟ್ಟಿಗರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​