AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಬಂಪರ್! ವಿಶೇಷ ಯೋಜನೆ ಘೋಷಿಸಿದ ಕೇರಳದ ಬಿಷಪ್

ವರ್ಚುವಲ್ ಮೀಟಿಂಗ್ ಒಂದರಲ್ಲಿ ಬಿಷಪ್ ಈ ಯೋಜನೆಯನ್ನು ಘೋಷಿಸಿದಾರೆ. ಆಗ ಎಲ್ಲರ ಹುಬ್ಬುಗಳೂ ಅಚ್ಚರಿಯಿಂದ ಮೇಲೇರಿದವಂತೆ. ಆದರೆ ಬಿಷಪ್ ತಾವು ಮಾಡಿದ ಘೋಷಣೆಯನ್ನು ಮತ್ತೊಮ್ಮೆ ದೃಢಪಡಿಸಿದ್ದಾರೆ.

5ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಬಂಪರ್! ವಿಶೇಷ ಯೋಜನೆ ಘೋಷಿಸಿದ ಕೇರಳದ ಬಿಷಪ್
ಬಿಷಪ್ ಜೊಸೆಫ್
TV9 Web
| Edited By: |

Updated on: Jul 27, 2021 | 4:01 PM

Share

ತಿರುವನಂತಪುರಂ: ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸುವ ಕುರಿತು ತೀವ್ರತರದ ಚರ್ಚೆಗಳು ನಡೆಯುತ್ತಿವೆ. ಕಡಿಮೆ ಮಕ್ಕಳನ್ನು ಹೊಂದಿದ ಕುಟುಂಬಕ್ಕಷ್ಟೇ ಸರ್ಕಾರಿ ಯೋಜನೆಗಳನ್ನು ನೀಡುವುದಾಗಿ ಕೆಲವು ರಾಜ್ಯ ಸರ್ಕಾರಗಳು ಈಗಾಗಲೇ ಘೋಷಿಸಿವೆ. ಈ ಹೊತ್ತಲ್ಲೇ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಕೆಲವು ಉತ್ತೇಜನಕಾರಿ ಯೋಜನೆಗಳನ್ನು ಒದಗಿಸುವುದಾಗಿ ಕೇರಳದ ಚರ್ಚ್ ಒಂದರ ಬಿಷಪ್ (Kerala Bishop) ಘೋಷಿಸಿದ್ದಾರೆ.

ಸಿರೋ ಮಲಬಾರ್ ಚರ್ಚ್​ನ ಮಾರ್ ಜೊಸೆಫ್ ಅವರೇ ಈ ಘೋಷಣೆ ಮಾಡಿದವರು. ತಮ್ಮ ಚರ್ಚ್​ನ ವ್ಯಾಪ್ತಿಯಲ್ಲಿ ಬರುವ ದಂಪತಿಗಳಿಗೆ 5 ಅಥವಾ 5ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ಬಂಪರ್ ಯೋಜನೆಗಳನ್ನು ಘೋಷಿಸಿದ್ದಾರೆ. ಆದರೆ 2000ನೇ ಇಸವಿಯ ನಂತರ ಮದುವೆಯಾದ ದಂಪತಿಗಳು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯ ಎಂದು ಸಹ ಕೆಲ ನಿಯಮವನ್ನೂ ಅವರು ರೂಪಿಸಿದ್ದಾರೆ.

2000ನೇ ಇಸವಿಯ ನಂತರ ಮದುವೆಯಾದ ದಂಪತಿಗಳ 4ನೆ ಮಗುವಿನಿಂದ ನಂತರದ ಮಕ್ಕಳೆಲ್ಲರೂ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಚರ್ಚ್​ನ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು, ಅದೂ ಪ್ರತಿ ತಿಂಗಳು ₹1500 ಪ್ರೋತ್ಸಾಹ ಧನವನ್ನೂ ಒದಗಿಸಿ ಶಿಕ್ಷಣ ನೀಡಲಾಗುವುದು ಎಂದು ಬಿಷಪ್ ಘೋಷಿಸಿದ್ದಾರೆ. ದಂಪತಿಗಳ ನಾಲ್ಕನೇ ಮಗುವಿನಿಂದ ನಂತರದ ಎಲ್ಲಾ ಮಕ್ಕಳಿಗೆ ವೈದ್ಯಕೀಯ ಸೌಲಭ್ಯವನ್ನು ಸಹ ಚರ್ಚ್​ ನಡೆಸುತ್ತಿರುವ ಆಸ್ಪತ್ರೆಯೇ ನೋಡಿಕೊಳ್ಳಲಿದೆ ಎಂದು ಸಹ ಅವರು ತಿಳಿಸಿದ್ದಾರೆ.

ವರ್ಚುವಲ್ ಮೀಟಿಂಗ್ ಒಂದರಲ್ಲಿ ಬಿಷಪ್ ಈ ಯೋಜನೆಯನ್ನು ಘೋಷಿಸಿದಾರೆ. ಆಗ ಎಲ್ಲರ ಹುಬ್ಬುಗಳೂ ಅಚ್ಚರಿಯಿಂದ ಮೇಲೇರಿದವಂತೆ. ಆದರೆ ಬಿಷಪ್ ತಾವು ಮಾಡಿದ ಘೋಷಣೆಯನ್ನು ಮತ್ತೊಮ್ಮೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: 

Viral News: ಕೈಕಾಲುಗಳನ್ನು ವಿಸ್ತರಿಸುವ ಮೂಲಕ ಮಾನವರನ್ನು 5.6 ಇಂಚು ಎತ್ತರವಾಗಿಸಬಹುದು! ವಿಲಕ್ಷಣ ಹೇಳಿಕೆ ನೀಡಿ ವೈರಲ್​ ಆದ ವೈದ್ಯ

‘ಲಂಚವನ್ನು ನಾನು ಸ್ವೀಕರಿಸುವುದೂ ಇಲ್ಲ, ಕೊಡುವುದೂ ಇಲ್ಲ’; ವೈರಲ್​ ಆಯ್ತು ರಾಜ್​ ಕುಂದ್ರಾ ಹಳೆಯ ವಿಡಿಯೋ

(Kerala Bishop announces special project if there are more than 5 children! )

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್