AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೀ ನಡೆವ ಹಾದಿಯಲ್ಲಿ; ಕೇರಳದ ವಧುವಿನ ಈ ಅರ್ಥಪೂರ್ಣ ವೆಡ್ಡಿಂಗ್​ ಶೂಟ್​

Wedding Photoshoot : 4 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿರುವ ಈ ವಿಡಿಯೋದಲ್ಲಿ, ಈ ವಧು ತನ್ನ ವೆಡ್ಡಿಂಗ್ ಫೋಟೋ ಶೂಟ್ ಮೂಲಕ ಕೇರಳ ರಸ್ತೆಗಳ ಅವಸ್ಥೆಗಳ ಬಗ್ಗೆ ಗಮನ ಸೆಳೆದಿದ್ದಾರೆ.

Viral Video : ನೀ ನಡೆವ ಹಾದಿಯಲ್ಲಿ; ಕೇರಳದ ವಧುವಿನ ಈ ಅರ್ಥಪೂರ್ಣ ವೆಡ್ಡಿಂಗ್​ ಶೂಟ್​
ವೆಡ್ಡಿಂಗ್ ಫೋಟೋ ಶೂಟ್​ನಲ್ಲಿ ಕೇರಳದ ವಧು
TV9 Web
| Edited By: ಶ್ರೀದೇವಿ ಕಳಸದ|

Updated on:Sep 21, 2022 | 10:46 AM

Share

Viral Video : ಜೀವನದ ಪ್ರತೀ ಘಟ್ಟವನ್ನೂ ವಿಶೇಷವಾಗಿ ದಾಖಲಿಸುವುದನ್ನು ಇಂದು ಸಾಮಾನ್ಯವಾಗಿ ಎಲ್ಲರೂ ಬಯಸುತ್ತಿದ್ದಾರೆ. ಅದರಲ್ಲೂ ಡಿಜಿಟಲ್​ಯುಗದಲ್ಲಿ ಈ ಸೃಜನಶೀಲತೆಗೆ ಎಲ್ಲೆಯೇ ಇಲ್ಲ. ಪ್ರೀವೆಡ್ಡಿಂಗ್ ಶೂಟ್ ಇರಬಹುದು, ವೆಡ್ಡಿಂಗ್​ ಶೂಟ್​ ಇರಬಹುದು ಸಿನೆಮಾ ದೃಶ್ಯಗಳಂತೆಯೇ ಕಂಗೊಳಿಸುತ್ತಿರುತ್ತವೆ. ಕೇರಳದ ವಧುವೊಬ್ಬರು ತಮ್ಮ ಮದುವೆಯ ಕ್ಷಣಗಳನ್ನು ದಾಖಲಿಸಲು ಆಲೋಚಿಸಿದ ರೀತಿ ಬಹಳ ಗಮನ ಸೆಳೆಯುವಂತಿದೆ. ತಾವಿರುವ ಊರಿನ ರಸ್ತೆಗಳ ಹದಗೆಟ್ಟ ಸ್ಥಿತಿಯನ್ನು ಈ ವಿಡಿಯೋದಲ್ಲಿ ಹಿಡಿದಿಡಲು ನೋಡಿದ್ದಾರೆ. ತುಂಬಿದ ಹೊಂಡಗಳ ಮಧ್ಯೆ ಕೆಂಪು ಸೀರೆ ಉಟ್ಟು ನಡೆದು ಬರುವ ವಧುವಿನ ವಿಡಿಯೋ ಇಲ್ಲಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಓಡಾಡುವ ವಾಹನಗಳು, ಎಲ್ಲೆಂದರಲ್ಲಿ ತುಂಬಿಕೊಂಡ ರಸ್ತೆಹೊಂಡಗಳು. ಸಂಪೂರ್ಣ ಅಲಂಕರಿಸಿಕೊಂಡು ಹುಷಾರಿನಿಂದ ನಡೆದುಬರುತ್ತಿರುವ ಈ ವಧು… ಈ ದೃಶ್ಯ ನೋಡಿದ ಯಾರೂ ಮತ್ತೆ ಮತ್ತೆ ನೋಡುವಂತಿದೆ.

Arrow_weddingcompany ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಸೆಪ್ಟೆಂಬರ್​ 11ರಂದು ಈ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಈತನಕ 4.3 ಮಿಲಿಯನ್ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. 3,70,400 ಜನರಿಂದ ಮೆಚ್ಚುಗೆ ಪಡೆದಿದೆ.

ವಧುವಿನ ಈ ಸೃಜನಶೀಲ ಆಲೋಚನೆಯಿಂದ ನೆಟ್ಟಿಗರು ಪ್ರಭಾವಿತರಾಗಿದ್ದಾರೆ. ಆದರೆ, ಕೇರಳ ರಸ್ತೆಯ ಅವಸ್ಥೆಯ ಬಗ್ಗೆ ಸಾಕಷ್ಟು ಗೇಲಿ ಮಾಡಿದ್ದಾರೆ. ‘ಫೋಟೋ ಶೂಟ್​ ರಸ್ತೆಯಲ್ಲಿ ನಡೆಯುತ್ತಿಲ್ಲ, ಹೊಂಡದಲ್ಲಿ’ ಎಂದಿದ್ದಾರೆ. ‘ನೈಸ್ ರೋಡ್’ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಅದು ರಸ್ತೆಯೇ? ಕೆಲವು ಮರಿ ಮೀನುಗಳನ್ನು ಖರೀದಿಸಿ ಇಲ್ಲಿಯೇ ಮೀನುಸಾಕಾಣಿಕೆ ಪ್ರಾರಂಭಿಸಬಹುದು’ ಎಂದಿದ್ದಾರೆ ಒಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:41 am, Wed, 21 September 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು