ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು

Kerala : ಉತ್ಸಾಹದಿಂದ ಸಹಕಲಾವಿದರೊಂದಿಗೆ ಈ ವಧು ಚಂಡೆ ನುಡಿಸುವುದನ್ನು ನೋಡುತ್ತಿದ್ದರೆ ಎಂಥವರಿಗೂ ಉಮೇದು ಬರುತ್ತದೆ. ನಿನ್ನೆಯಷ್ಟೇ ಈ ವಿವಾಹ ಕೇರಳದಲ್ಲಿ ನೆರವೇರಿದೆ. ನೋಡಿ ವೈರಲ್ ಆದ ಈ ವಿಡಿಯೋ.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು
ತನ್ನ ಮದುವೆಯಲ್ಲಿ ಚಂಡೆವಾದನ ನುಡಿಸಿದ ವಧು
Follow us
| Updated By: ಶ್ರೀದೇವಿ ಕಳಸದ

Updated on:Dec 27, 2022 | 5:57 PM

Viral Video : ವಧುವೆಂದರೆ ನಾಚಿ ನೀರಾಗಿ ನೆಲ ನೋಡುತ್ತ ಕುಳಿತುಕೊಳ್ಳುವ ಕಾಲ ಇದಲ್ಲ ಎನ್ನುವುದಕ್ಕೆ ಈ ತಾಣದಲ್ಲಿಯೇ ಅನೇಕ ವಿಡಿಯೋಗಳನ್ನು ನೋಡಿದ್ದೀರಿ. ಅನೇಕ ಬಗೆಯಲ್ಲಿ ವಧುವರರು ಮದುವೆ ಮಂಟಪಕ್ಕೆ ಪ್ರವೇಶ ನೀಡುವುದನ್ನು ನೋಡಿ ಅಚ್ಚರಿಗೆ ಒಳಗಾಗಿದ್ದೀರಿ. ಕೇರಳದ ಗುರುವಾಯೂರ್ ದೇವಾಲಯದಲ್ಲಿ ನಡೆದ ಈ ಮದುವೆಯ ವಿಶೇಷ ಏನೆಂದು ನೀವೇ ನೋಡಿ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಮನಸ್ಸು ಗರಿಗೆದರಿದ ನವಿಲಿನಂತಾಗದಿದ್ದರೆ ಹೇಳಿ!

ವಧು ಚಂಡೆ ವಾದನದಲ್ಲಿ ಪರಿಣಿತೆ. ತನ್ನ ಮದುವೆ ಸಂದರ್ಭದಲ್ಲಿ ಪುಟ್ಟದೊಂದು ಕಛೇರಿಯನ್ನೇ ಕೊಟ್ಟಿದ್ದಾಳೆ. ಈ ವಿಡಿಯೋದ ನೋಟ್ ಹೀಗಿದೆ, ‘ಇಂದು ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ಈ ಮದುವೆ ನಡೆದಿದೆ. ವಧುವಿನ ತಂದೆ ಚಂಡೆ ಪರಿಣತರು. ಮಗಳೂ ಕೂಡ ಚಂಡೆ ಕಲಾವಿದೆ. ವಧು ವರರ ಮುಖದಲ್ಲಿರುವ ಸಂತೋಷ ಯಾರನ್ನೂ ಸಮ್ಮೋಹನಗೊಳಿಸುವಂತಿದೆ.’

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನೆಟ್ಟಿಗರು ಈ ವಿಡಿಯೋ ನೋಡಿ ಮಹಾ ಅಚ್ಚರಿಗೆ ಒಳಗಾಗಿದ್ದಾರೆ. ಸಾಕಷ್ಟು ಉಲ್ಲಸಿತರಾಗಿದ್ದಾರೆ. ಆಹಾ ಇಂತ ಚಂಡೆವಾದನವನ್ನು ನೋಡಿಯೇ ಇರಲಿಲ್ಲ, ಅದರಲ್ಲೂ ವಧು ಹೀಗೆ ಉತ್ಸಾಹದಿಂದ ನುಡಿಸುತ್ತಿರುವುದನ್ನು ನೋಡಲು ಬಹಳ ಸಂತೋಷವೆನ್ನಿಸುತ್ತಿದೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವಧುವರರು ಬಹಳ ಸುಂದರವಾಗಿ ಬದುಕನ್ನು ಕಟ್ಟಿಕೊಳ್ಳುತ್ತಾರೆ ಎನ್ನುವುದು ನನಗೆ ಖಾತ್ರಿ ಇದೆ ಎಂದಿದ್ದಾರೆ ಮತ್ತೊಬ್ಬರು. ಕಲೆಯ ಬೇರುಗಳು ಇಲ್ಲಿ ಒಂದಾಗಿವೆ ಇವರಿಗೆ ಒಳ್ಳೆಯದಾಗಲಿ ಎಂದು ಅನೇಕರು ಹಾರೈಸಿದ್ದಾರೆ. ವಧು ಈ ವಿಡಿಯೋದ ಶೈನಿಂಗ್ ಸ್ಟಾರ್ ಎಂದಿದ್ದಾರೆ ಕೆಲವರು.

ಅಂದಹಾಗೆ ಈ ವಧು ಚೆಂಡೆವಾದನದಲ್ಲಿ ಪರಿಣತಿ ಪಡೆದ ಕಲಾವಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:56 pm, Tue, 27 December 22

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ