AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು

Kerala : ಉತ್ಸಾಹದಿಂದ ಸಹಕಲಾವಿದರೊಂದಿಗೆ ಈ ವಧು ಚಂಡೆ ನುಡಿಸುವುದನ್ನು ನೋಡುತ್ತಿದ್ದರೆ ಎಂಥವರಿಗೂ ಉಮೇದು ಬರುತ್ತದೆ. ನಿನ್ನೆಯಷ್ಟೇ ಈ ವಿವಾಹ ಕೇರಳದಲ್ಲಿ ನೆರವೇರಿದೆ. ನೋಡಿ ವೈರಲ್ ಆದ ಈ ವಿಡಿಯೋ.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು
ತನ್ನ ಮದುವೆಯಲ್ಲಿ ಚಂಡೆವಾದನ ನುಡಿಸಿದ ವಧು
TV9 Web
| Updated By: ಶ್ರೀದೇವಿ ಕಳಸದ|

Updated on:Dec 27, 2022 | 5:57 PM

Share

Viral Video : ವಧುವೆಂದರೆ ನಾಚಿ ನೀರಾಗಿ ನೆಲ ನೋಡುತ್ತ ಕುಳಿತುಕೊಳ್ಳುವ ಕಾಲ ಇದಲ್ಲ ಎನ್ನುವುದಕ್ಕೆ ಈ ತಾಣದಲ್ಲಿಯೇ ಅನೇಕ ವಿಡಿಯೋಗಳನ್ನು ನೋಡಿದ್ದೀರಿ. ಅನೇಕ ಬಗೆಯಲ್ಲಿ ವಧುವರರು ಮದುವೆ ಮಂಟಪಕ್ಕೆ ಪ್ರವೇಶ ನೀಡುವುದನ್ನು ನೋಡಿ ಅಚ್ಚರಿಗೆ ಒಳಗಾಗಿದ್ದೀರಿ. ಕೇರಳದ ಗುರುವಾಯೂರ್ ದೇವಾಲಯದಲ್ಲಿ ನಡೆದ ಈ ಮದುವೆಯ ವಿಶೇಷ ಏನೆಂದು ನೀವೇ ನೋಡಿ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಮನಸ್ಸು ಗರಿಗೆದರಿದ ನವಿಲಿನಂತಾಗದಿದ್ದರೆ ಹೇಳಿ!

ವಧು ಚಂಡೆ ವಾದನದಲ್ಲಿ ಪರಿಣಿತೆ. ತನ್ನ ಮದುವೆ ಸಂದರ್ಭದಲ್ಲಿ ಪುಟ್ಟದೊಂದು ಕಛೇರಿಯನ್ನೇ ಕೊಟ್ಟಿದ್ದಾಳೆ. ಈ ವಿಡಿಯೋದ ನೋಟ್ ಹೀಗಿದೆ, ‘ಇಂದು ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ಈ ಮದುವೆ ನಡೆದಿದೆ. ವಧುವಿನ ತಂದೆ ಚಂಡೆ ಪರಿಣತರು. ಮಗಳೂ ಕೂಡ ಚಂಡೆ ಕಲಾವಿದೆ. ವಧು ವರರ ಮುಖದಲ್ಲಿರುವ ಸಂತೋಷ ಯಾರನ್ನೂ ಸಮ್ಮೋಹನಗೊಳಿಸುವಂತಿದೆ.’

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನೆಟ್ಟಿಗರು ಈ ವಿಡಿಯೋ ನೋಡಿ ಮಹಾ ಅಚ್ಚರಿಗೆ ಒಳಗಾಗಿದ್ದಾರೆ. ಸಾಕಷ್ಟು ಉಲ್ಲಸಿತರಾಗಿದ್ದಾರೆ. ಆಹಾ ಇಂತ ಚಂಡೆವಾದನವನ್ನು ನೋಡಿಯೇ ಇರಲಿಲ್ಲ, ಅದರಲ್ಲೂ ವಧು ಹೀಗೆ ಉತ್ಸಾಹದಿಂದ ನುಡಿಸುತ್ತಿರುವುದನ್ನು ನೋಡಲು ಬಹಳ ಸಂತೋಷವೆನ್ನಿಸುತ್ತಿದೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವಧುವರರು ಬಹಳ ಸುಂದರವಾಗಿ ಬದುಕನ್ನು ಕಟ್ಟಿಕೊಳ್ಳುತ್ತಾರೆ ಎನ್ನುವುದು ನನಗೆ ಖಾತ್ರಿ ಇದೆ ಎಂದಿದ್ದಾರೆ ಮತ್ತೊಬ್ಬರು. ಕಲೆಯ ಬೇರುಗಳು ಇಲ್ಲಿ ಒಂದಾಗಿವೆ ಇವರಿಗೆ ಒಳ್ಳೆಯದಾಗಲಿ ಎಂದು ಅನೇಕರು ಹಾರೈಸಿದ್ದಾರೆ. ವಧು ಈ ವಿಡಿಯೋದ ಶೈನಿಂಗ್ ಸ್ಟಾರ್ ಎಂದಿದ್ದಾರೆ ಕೆಲವರು.

ಅಂದಹಾಗೆ ಈ ವಧು ಚೆಂಡೆವಾದನದಲ್ಲಿ ಪರಿಣತಿ ಪಡೆದ ಕಲಾವಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:56 pm, Tue, 27 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ