AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು

Kerala : ಉತ್ಸಾಹದಿಂದ ಸಹಕಲಾವಿದರೊಂದಿಗೆ ಈ ವಧು ಚಂಡೆ ನುಡಿಸುವುದನ್ನು ನೋಡುತ್ತಿದ್ದರೆ ಎಂಥವರಿಗೂ ಉಮೇದು ಬರುತ್ತದೆ. ನಿನ್ನೆಯಷ್ಟೇ ಈ ವಿವಾಹ ಕೇರಳದಲ್ಲಿ ನೆರವೇರಿದೆ. ನೋಡಿ ವೈರಲ್ ಆದ ಈ ವಿಡಿಯೋ.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು
ತನ್ನ ಮದುವೆಯಲ್ಲಿ ಚಂಡೆವಾದನ ನುಡಿಸಿದ ವಧು
TV9 Web
| Edited By: |

Updated on:Dec 27, 2022 | 5:57 PM

Share

Viral Video : ವಧುವೆಂದರೆ ನಾಚಿ ನೀರಾಗಿ ನೆಲ ನೋಡುತ್ತ ಕುಳಿತುಕೊಳ್ಳುವ ಕಾಲ ಇದಲ್ಲ ಎನ್ನುವುದಕ್ಕೆ ಈ ತಾಣದಲ್ಲಿಯೇ ಅನೇಕ ವಿಡಿಯೋಗಳನ್ನು ನೋಡಿದ್ದೀರಿ. ಅನೇಕ ಬಗೆಯಲ್ಲಿ ವಧುವರರು ಮದುವೆ ಮಂಟಪಕ್ಕೆ ಪ್ರವೇಶ ನೀಡುವುದನ್ನು ನೋಡಿ ಅಚ್ಚರಿಗೆ ಒಳಗಾಗಿದ್ದೀರಿ. ಕೇರಳದ ಗುರುವಾಯೂರ್ ದೇವಾಲಯದಲ್ಲಿ ನಡೆದ ಈ ಮದುವೆಯ ವಿಶೇಷ ಏನೆಂದು ನೀವೇ ನೋಡಿ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಮನಸ್ಸು ಗರಿಗೆದರಿದ ನವಿಲಿನಂತಾಗದಿದ್ದರೆ ಹೇಳಿ!

ವಧು ಚಂಡೆ ವಾದನದಲ್ಲಿ ಪರಿಣಿತೆ. ತನ್ನ ಮದುವೆ ಸಂದರ್ಭದಲ್ಲಿ ಪುಟ್ಟದೊಂದು ಕಛೇರಿಯನ್ನೇ ಕೊಟ್ಟಿದ್ದಾಳೆ. ಈ ವಿಡಿಯೋದ ನೋಟ್ ಹೀಗಿದೆ, ‘ಇಂದು ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ಈ ಮದುವೆ ನಡೆದಿದೆ. ವಧುವಿನ ತಂದೆ ಚಂಡೆ ಪರಿಣತರು. ಮಗಳೂ ಕೂಡ ಚಂಡೆ ಕಲಾವಿದೆ. ವಧು ವರರ ಮುಖದಲ್ಲಿರುವ ಸಂತೋಷ ಯಾರನ್ನೂ ಸಮ್ಮೋಹನಗೊಳಿಸುವಂತಿದೆ.’

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನೆಟ್ಟಿಗರು ಈ ವಿಡಿಯೋ ನೋಡಿ ಮಹಾ ಅಚ್ಚರಿಗೆ ಒಳಗಾಗಿದ್ದಾರೆ. ಸಾಕಷ್ಟು ಉಲ್ಲಸಿತರಾಗಿದ್ದಾರೆ. ಆಹಾ ಇಂತ ಚಂಡೆವಾದನವನ್ನು ನೋಡಿಯೇ ಇರಲಿಲ್ಲ, ಅದರಲ್ಲೂ ವಧು ಹೀಗೆ ಉತ್ಸಾಹದಿಂದ ನುಡಿಸುತ್ತಿರುವುದನ್ನು ನೋಡಲು ಬಹಳ ಸಂತೋಷವೆನ್ನಿಸುತ್ತಿದೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವಧುವರರು ಬಹಳ ಸುಂದರವಾಗಿ ಬದುಕನ್ನು ಕಟ್ಟಿಕೊಳ್ಳುತ್ತಾರೆ ಎನ್ನುವುದು ನನಗೆ ಖಾತ್ರಿ ಇದೆ ಎಂದಿದ್ದಾರೆ ಮತ್ತೊಬ್ಬರು. ಕಲೆಯ ಬೇರುಗಳು ಇಲ್ಲಿ ಒಂದಾಗಿವೆ ಇವರಿಗೆ ಒಳ್ಳೆಯದಾಗಲಿ ಎಂದು ಅನೇಕರು ಹಾರೈಸಿದ್ದಾರೆ. ವಧು ಈ ವಿಡಿಯೋದ ಶೈನಿಂಗ್ ಸ್ಟಾರ್ ಎಂದಿದ್ದಾರೆ ಕೆಲವರು.

ಅಂದಹಾಗೆ ಈ ವಧು ಚೆಂಡೆವಾದನದಲ್ಲಿ ಪರಿಣತಿ ಪಡೆದ ಕಲಾವಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:56 pm, Tue, 27 December 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ