AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು

Kerala : ಉತ್ಸಾಹದಿಂದ ಸಹಕಲಾವಿದರೊಂದಿಗೆ ಈ ವಧು ಚಂಡೆ ನುಡಿಸುವುದನ್ನು ನೋಡುತ್ತಿದ್ದರೆ ಎಂಥವರಿಗೂ ಉಮೇದು ಬರುತ್ತದೆ. ನಿನ್ನೆಯಷ್ಟೇ ಈ ವಿವಾಹ ಕೇರಳದಲ್ಲಿ ನೆರವೇರಿದೆ. ನೋಡಿ ವೈರಲ್ ಆದ ಈ ವಿಡಿಯೋ.

ತನ್ನ ಮದುವೆಯಲ್ಲಿ ಚಂಡೆವಾದ್ಯ ನುಡಿಸಿ ನೆಟ್ಟಿಗರ ಗಮನ ಸೆಳೆದ ಕೇರಳದ ವಧು
ತನ್ನ ಮದುವೆಯಲ್ಲಿ ಚಂಡೆವಾದನ ನುಡಿಸಿದ ವಧು
TV9 Web
| Edited By: ಶ್ರೀದೇವಿ ಕಳಸದ|

Updated on:Dec 27, 2022 | 5:57 PM

Share

Viral Video : ವಧುವೆಂದರೆ ನಾಚಿ ನೀರಾಗಿ ನೆಲ ನೋಡುತ್ತ ಕುಳಿತುಕೊಳ್ಳುವ ಕಾಲ ಇದಲ್ಲ ಎನ್ನುವುದಕ್ಕೆ ಈ ತಾಣದಲ್ಲಿಯೇ ಅನೇಕ ವಿಡಿಯೋಗಳನ್ನು ನೋಡಿದ್ದೀರಿ. ಅನೇಕ ಬಗೆಯಲ್ಲಿ ವಧುವರರು ಮದುವೆ ಮಂಟಪಕ್ಕೆ ಪ್ರವೇಶ ನೀಡುವುದನ್ನು ನೋಡಿ ಅಚ್ಚರಿಗೆ ಒಳಗಾಗಿದ್ದೀರಿ. ಕೇರಳದ ಗುರುವಾಯೂರ್ ದೇವಾಲಯದಲ್ಲಿ ನಡೆದ ಈ ಮದುವೆಯ ವಿಶೇಷ ಏನೆಂದು ನೀವೇ ನೋಡಿ. ಈ ವಿಡಿಯೋ ನೋಡುತ್ತಿದ್ದಂತೆ ನಿಮ್ಮ ಮನಸ್ಸು ಗರಿಗೆದರಿದ ನವಿಲಿನಂತಾಗದಿದ್ದರೆ ಹೇಳಿ!

ವಧು ಚಂಡೆ ವಾದನದಲ್ಲಿ ಪರಿಣಿತೆ. ತನ್ನ ಮದುವೆ ಸಂದರ್ಭದಲ್ಲಿ ಪುಟ್ಟದೊಂದು ಕಛೇರಿಯನ್ನೇ ಕೊಟ್ಟಿದ್ದಾಳೆ. ಈ ವಿಡಿಯೋದ ನೋಟ್ ಹೀಗಿದೆ, ‘ಇಂದು ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ಈ ಮದುವೆ ನಡೆದಿದೆ. ವಧುವಿನ ತಂದೆ ಚಂಡೆ ಪರಿಣತರು. ಮಗಳೂ ಕೂಡ ಚಂಡೆ ಕಲಾವಿದೆ. ವಧು ವರರ ಮುಖದಲ್ಲಿರುವ ಸಂತೋಷ ಯಾರನ್ನೂ ಸಮ್ಮೋಹನಗೊಳಿಸುವಂತಿದೆ.’

ಇದನ್ನೂ ಓದಿ : ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

ನೆಟ್ಟಿಗರು ಈ ವಿಡಿಯೋ ನೋಡಿ ಮಹಾ ಅಚ್ಚರಿಗೆ ಒಳಗಾಗಿದ್ದಾರೆ. ಸಾಕಷ್ಟು ಉಲ್ಲಸಿತರಾಗಿದ್ದಾರೆ. ಆಹಾ ಇಂತ ಚಂಡೆವಾದನವನ್ನು ನೋಡಿಯೇ ಇರಲಿಲ್ಲ, ಅದರಲ್ಲೂ ವಧು ಹೀಗೆ ಉತ್ಸಾಹದಿಂದ ನುಡಿಸುತ್ತಿರುವುದನ್ನು ನೋಡಲು ಬಹಳ ಸಂತೋಷವೆನ್ನಿಸುತ್ತಿದೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವಧುವರರು ಬಹಳ ಸುಂದರವಾಗಿ ಬದುಕನ್ನು ಕಟ್ಟಿಕೊಳ್ಳುತ್ತಾರೆ ಎನ್ನುವುದು ನನಗೆ ಖಾತ್ರಿ ಇದೆ ಎಂದಿದ್ದಾರೆ ಮತ್ತೊಬ್ಬರು. ಕಲೆಯ ಬೇರುಗಳು ಇಲ್ಲಿ ಒಂದಾಗಿವೆ ಇವರಿಗೆ ಒಳ್ಳೆಯದಾಗಲಿ ಎಂದು ಅನೇಕರು ಹಾರೈಸಿದ್ದಾರೆ. ವಧು ಈ ವಿಡಿಯೋದ ಶೈನಿಂಗ್ ಸ್ಟಾರ್ ಎಂದಿದ್ದಾರೆ ಕೆಲವರು.

ಅಂದಹಾಗೆ ಈ ವಧು ಚೆಂಡೆವಾದನದಲ್ಲಿ ಪರಿಣತಿ ಪಡೆದ ಕಲಾವಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:56 pm, Tue, 27 December 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?