AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಪಾಳಾ ಪಳ್ಳಿ ತಿರುಪಳ್ಳಿ’ ಹಾಡಿಗೆ ಹೆಜ್ಜೆ ಹಾಕಿದ ಕೇರಳದ ವೈದ್ಯರ ವಿಡಿಯೋ

Kerala Doctors Dance : ಕೇರಳದ ಟ್ರೈಬಲ್ ಆಸ್ಪತ್ರೆಯ ವೈದ್ಯರು ನರ್ತಿಸಿದ ವಿಡಿಯೋವನ್ನು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

Viral Video: ‘ಪಾಳಾ ಪಳ್ಳಿ ತಿರುಪಳ್ಳಿ’ ಹಾಡಿಗೆ ಹೆಜ್ಜೆ ಹಾಕಿದ ಕೇರಳದ ವೈದ್ಯರ ವಿಡಿಯೋ
ಕೇರಳದ ವೈದ್ಯರಿಬ್ಬರು ನೃತ್ಯ ಮಾಡುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Aug 16, 2022 | 10:52 AM

Share

Pala Palli Tirupalli : ಕೇರಳದ ಇಬ್ಬರು ವೈದ್ಯರು ಪೃಥ್ವಿರಾಜ್ ಸುಕುಮಾರನ್ ಅಭಿನಯದ ಮಲಯಾಳಂ ಸಿನೆಮಾ ‘ಕಡುವಾ’ (Kaduva)ದ ಜನಪ್ರಿಯ ಹಾಡು ‘ಪಾಳಾ ಪಳ್ಳಿ ತಿರುಪಳ್ಳಿ’ಗೆ ನರ್ತಿಸಿದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ವಯನಾಡಿನ ಟ್ರೈಬಲ್  ಆಸ್ಪತ್ರೆಯ ವೈದ್ಯರಾದ ಇವರಿಬ್ಬರ ಈ ವಿಡಿಯೋವನ್ನು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಇದು ವೈರಲ್ ಆಗಿದೆ. ಈ ವಿಡಿಯೋದಲ್ಲಿರುವ ನಲ್ಲೂರ್ನಾಡ್ ಕ್ಯಾನ್ಸರ್ ಚಿಕಿತ್ಸಾ ಕೇಂದ್ರದ ಅಧೀಕ್ಷಕ ಡಾ. ಸಾವನ್ ಸಾರಾ ಮ್ಯಾಥ್ಯೂ ಮತ್ತು ವೈದ್ಯಾಧಿಕಾರಿ ಡಾ. ಸಫೀಜ್ ಅಲಿ ಅವರನ್ನು ವೀಣಾ ಜಾರ್ಜ್ ಶ್ಲಾಘಿಸಿ, ‘ಈ ಆಸ್ಪತ್ರೆಯ ತಂಡವು ಸಾವಿರಾರು ರೋಗಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುತ್ತಿದೆ’ ಎಂದಿದ್ದಾರೆ.

ಕಳೆದ ತಿಂಗಳು ಬಿಡುಗಡೆಯಾದ ‘ಕಡುವಾ’ ಚಿತ್ರದಲ್ಲಿರುವ ಒಂದು ದೃಶ್ಯವು ವಿಶೇಷ ಚೇತನ ಮಕ್ಕಳ ವಿಷಯವಾಗಿ ಸಂವೇದನಾರಹಿತವಾಗಿ ಚಿತ್ರಿಸಲಾಗಿದೆ ಎಂಬ ಕಟುವಿಮರ್ಶೆಗೆ ಒಳಗಾಗಿತ್ತು. ನಟ ಪೃಥ್ವಿರಾಜ ಸುಕುಮಾರನ್ ಕ್ಷಮೆಯಾಚಿಸಿ ಆ ದೃಶ್ಯವನ್ನು ಸಿನೆಮಾದಿಂದ ಕೈಬಿಟ್ಟಿದ್ದರು. ಈ ಚಿತ್ರವು ಪ್ರಥ್ವಿರಾಜ ಪ್ರೊಡಕ್ಷನ್​ನಿಂದ ನಿರ್ಮಾಣವಾಗಿದ್ದು ನಿರ್ಮಾಪಕಿ ಸುಪ್ರಿಯಾ ಮೆನನ್. ವಿವೇಕ ಒಬೆರಾಯ್ ಮತತು ಸಂಯಕ್ತಾ ಮೆನನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:48 am, Tue, 16 August 22

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ