AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ; ವಿಡಿಯೋ ವೈರಲ್‌

ರಸ್ತೆ ಅಪಘಾತಗಳು ಹಾಗೂ ಅದರಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಸರ್ಕಾರ ಮದ್ಯಪಾನ ಸೇವಿಸಿ ವಾಹನ ಚಲಾಯಿಸಬಾರದು ಎಂಬ ರೂಲ್ಸ್‌ ತಂದಿದೆ. ಆದ್ರೆ ಕೆಲವೊಂದಿಷ್ಟು ಜನ ಇದಕ್ಕೆಲ್ಲಾ ಕ್ಯಾರೇ ಅನ್ನದೇ ಇಂದಿಗೂ ಕುಡಿದು ವಾಹನ ಚಲಾಯಿಸುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಎಣ್ಣೆ ಏಟಲ್ಲಿ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಭಯಾನಕ ಆಕ್ಸಿಡೆಂಟ್‌ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 13, 2024 | 4:49 PM

Share

ರಸ್ತೆ ಅಪಘಾತಗಳು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಕುಡಿದು ವಾಹನ ಚಲಾಯಿಸುವಂತಿಲ್ಲ, ವಾಹನ ಚಲಾಯಿಸುವಾಗ ಸೀಟ್‌ ಬೆಲ್ಟ್‌ ಹಾಕಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಹಾಕಬೇಕು ಎಂಬೆಲ್ಲಾ ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ಜಾರಿಗೊಳಿಸಿವೆ. ಹೀಗಿದ್ದರೂ ಈ ರೂಲ್ಸ್‌ಗಳನ್ನೆಲ್ಲಾ ಗಾಳಿಗೆ ತೂರಿ ಅಡ್ಡಾದಿಡ್ಡಿ ವಾಹನ ಚಲಾಯಿಸುವ ಅದೆಷ್ಟೋ ಜನರಿದ್ದಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದ್ದು, ಪಾನಮತ್ತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗಿ ಬೈಕ್‌ ಸವಾರನಿಗೆ ಗುದ್ದಿದ್ದು ಮಾತ್ರವಲ್ಲದೆ, ಸೀದಾ ಹೋಗಿ ಕರೆಂಟ್‌ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಕರೆಂಟ್‌ ಕಂಬ ನೆಲಕ್ಕುರುಳಿದೆ. gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಎಣ್ಣೆ ಏಟಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು. ಹೀಗೆ ಅಡ್ಡಾದಿಡ್ಡಿ ಕಾರ್‌ ಓಡಿಸಿ ಬೈಕ್‌ ಸವಾರನೊಬ್ಬನಿಗೆ ಗುದ್ದಿ ನಂತರ ಸೀದಾ ಹೋಗಿ ಆ ಕಾರ್‌ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಗುಡ್ ಕಿಸ್ಸರ್… ಉಬರ್ ಡ್ರೈವರ್‌ಗೆ ವಿಚಿತ್ರ ಕಾಂಪ್ಲಿಮೆಂಟ್ ನೀಡಿದ ಪ್ಯಾಸೆಂಜರ್‌

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 1.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಡ್ರೈವರ್‌ ತನ್ನ ಜೀವ ಮಾತ್ರವಲ್ಲದೆ ಇತರರ ಜೀವದ ಜೊತೆಗೂ ಆಟವಾಡುತ್ತಿದ್ದಾನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಹೀಗೆ ಕುಡಿದು ವಾಹನ ಚಲಾಯಿಸಿ ಇನ್ನೊಬ್ಬರ ಜೀವಕ್ಕೆ ಅಪಾಯ ತಂದೊಡ್ಡುವವರ ಲೈಸನ್ಸ್‌ ರದ್ದು ಮಾಡಬೇಕುʼ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?