AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ; ವಿಡಿಯೋ ವೈರಲ್‌

ರಸ್ತೆ ಅಪಘಾತಗಳು ಹಾಗೂ ಅದರಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಸರ್ಕಾರ ಮದ್ಯಪಾನ ಸೇವಿಸಿ ವಾಹನ ಚಲಾಯಿಸಬಾರದು ಎಂಬ ರೂಲ್ಸ್‌ ತಂದಿದೆ. ಆದ್ರೆ ಕೆಲವೊಂದಿಷ್ಟು ಜನ ಇದಕ್ಕೆಲ್ಲಾ ಕ್ಯಾರೇ ಅನ್ನದೇ ಇಂದಿಗೂ ಕುಡಿದು ವಾಹನ ಚಲಾಯಿಸುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಎಣ್ಣೆ ಏಟಲ್ಲಿ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಭಯಾನಕ ಆಕ್ಸಿಡೆಂಟ್‌ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 13, 2024 | 4:49 PM

Share

ರಸ್ತೆ ಅಪಘಾತಗಳು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಕುಡಿದು ವಾಹನ ಚಲಾಯಿಸುವಂತಿಲ್ಲ, ವಾಹನ ಚಲಾಯಿಸುವಾಗ ಸೀಟ್‌ ಬೆಲ್ಟ್‌ ಹಾಕಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಹಾಕಬೇಕು ಎಂಬೆಲ್ಲಾ ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ಜಾರಿಗೊಳಿಸಿವೆ. ಹೀಗಿದ್ದರೂ ಈ ರೂಲ್ಸ್‌ಗಳನ್ನೆಲ್ಲಾ ಗಾಳಿಗೆ ತೂರಿ ಅಡ್ಡಾದಿಡ್ಡಿ ವಾಹನ ಚಲಾಯಿಸುವ ಅದೆಷ್ಟೋ ಜನರಿದ್ದಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದ್ದು, ಪಾನಮತ್ತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗಿ ಬೈಕ್‌ ಸವಾರನಿಗೆ ಗುದ್ದಿದ್ದು ಮಾತ್ರವಲ್ಲದೆ, ಸೀದಾ ಹೋಗಿ ಕರೆಂಟ್‌ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಕರೆಂಟ್‌ ಕಂಬ ನೆಲಕ್ಕುರುಳಿದೆ. gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಎಣ್ಣೆ ಏಟಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು. ಹೀಗೆ ಅಡ್ಡಾದಿಡ್ಡಿ ಕಾರ್‌ ಓಡಿಸಿ ಬೈಕ್‌ ಸವಾರನೊಬ್ಬನಿಗೆ ಗುದ್ದಿ ನಂತರ ಸೀದಾ ಹೋಗಿ ಆ ಕಾರ್‌ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಗುಡ್ ಕಿಸ್ಸರ್… ಉಬರ್ ಡ್ರೈವರ್‌ಗೆ ವಿಚಿತ್ರ ಕಾಂಪ್ಲಿಮೆಂಟ್ ನೀಡಿದ ಪ್ಯಾಸೆಂಜರ್‌

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 1.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಡ್ರೈವರ್‌ ತನ್ನ ಜೀವ ಮಾತ್ರವಲ್ಲದೆ ಇತರರ ಜೀವದ ಜೊತೆಗೂ ಆಟವಾಡುತ್ತಿದ್ದಾನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಹೀಗೆ ಕುಡಿದು ವಾಹನ ಚಲಾಯಿಸಿ ಇನ್ನೊಬ್ಬರ ಜೀವಕ್ಕೆ ಅಪಾಯ ತಂದೊಡ್ಡುವವರ ಲೈಸನ್ಸ್‌ ರದ್ದು ಮಾಡಬೇಕುʼ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ