AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ; ವಿಡಿಯೋ ವೈರಲ್‌

ರಸ್ತೆ ಅಪಘಾತಗಳು ಹಾಗೂ ಅದರಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಸರ್ಕಾರ ಮದ್ಯಪಾನ ಸೇವಿಸಿ ವಾಹನ ಚಲಾಯಿಸಬಾರದು ಎಂಬ ರೂಲ್ಸ್‌ ತಂದಿದೆ. ಆದ್ರೆ ಕೆಲವೊಂದಿಷ್ಟು ಜನ ಇದಕ್ಕೆಲ್ಲಾ ಕ್ಯಾರೇ ಅನ್ನದೇ ಇಂದಿಗೂ ಕುಡಿದು ವಾಹನ ಚಲಾಯಿಸುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಎಣ್ಣೆ ಏಟಲ್ಲಿ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಭಯಾನಕ ಆಕ್ಸಿಡೆಂಟ್‌ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 13, 2024 | 4:49 PM

Share

ರಸ್ತೆ ಅಪಘಾತಗಳು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳನ್ನು ತಡೆಯಲು ಕುಡಿದು ವಾಹನ ಚಲಾಯಿಸುವಂತಿಲ್ಲ, ವಾಹನ ಚಲಾಯಿಸುವಾಗ ಸೀಟ್‌ ಬೆಲ್ಟ್‌ ಹಾಕಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಹಾಕಬೇಕು ಎಂಬೆಲ್ಲಾ ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ಜಾರಿಗೊಳಿಸಿವೆ. ಹೀಗಿದ್ದರೂ ಈ ರೂಲ್ಸ್‌ಗಳನ್ನೆಲ್ಲಾ ಗಾಳಿಗೆ ತೂರಿ ಅಡ್ಡಾದಿಡ್ಡಿ ವಾಹನ ಚಲಾಯಿಸುವ ಅದೆಷ್ಟೋ ಜನರಿದ್ದಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸಿ ಕೊನೆಗೆ ಹೋಗಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದ್ದು, ಪಾನಮತ್ತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗಿ ಬೈಕ್‌ ಸವಾರನಿಗೆ ಗುದ್ದಿದ್ದು ಮಾತ್ರವಲ್ಲದೆ, ಸೀದಾ ಹೋಗಿ ಕರೆಂಟ್‌ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಕರೆಂಟ್‌ ಕಂಬ ನೆಲಕ್ಕುರುಳಿದೆ. gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಎಣ್ಣೆ ಏಟಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎರ್ರಾಬಿರ್ರಿ ಕಾರು ಚಲಾಯಿಸುತ್ತಾ ಹೋಗುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು. ಹೀಗೆ ಅಡ್ಡಾದಿಡ್ಡಿ ಕಾರ್‌ ಓಡಿಸಿ ಬೈಕ್‌ ಸವಾರನೊಬ್ಬನಿಗೆ ಗುದ್ದಿ ನಂತರ ಸೀದಾ ಹೋಗಿ ಆ ಕಾರ್‌ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಗುಡ್ ಕಿಸ್ಸರ್… ಉಬರ್ ಡ್ರೈವರ್‌ಗೆ ವಿಚಿತ್ರ ಕಾಂಪ್ಲಿಮೆಂಟ್ ನೀಡಿದ ಪ್ಯಾಸೆಂಜರ್‌

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 1.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಡ್ರೈವರ್‌ ತನ್ನ ಜೀವ ಮಾತ್ರವಲ್ಲದೆ ಇತರರ ಜೀವದ ಜೊತೆಗೂ ಆಟವಾಡುತ್ತಿದ್ದಾನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಹೀಗೆ ಕುಡಿದು ವಾಹನ ಚಲಾಯಿಸಿ ಇನ್ನೊಬ್ಬರ ಜೀವಕ್ಕೆ ಅಪಾಯ ತಂದೊಡ್ಡುವವರ ಲೈಸನ್ಸ್‌ ರದ್ದು ಮಾಡಬೇಕುʼ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ