AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿಯಲ್ಲಿ ಸಿಲುಕಿದ ಕಾರನ್ನು ಕ್ಷಣಾರ್ಧದಲ್ಲಿ ಹೊರತೆಗೆದ ಗಜರಾಜ, ವಿಡಿಯೋ ವೈರಲ್

ಆನೆಗಳು ಬಲಿಷ್ಠ ಹಾಗೂ ಶಕ್ತಿಯುತವಾದ ಪ್ರಾಣಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಆನೆಗಳ ಶಕ್ತಿ ಎಂತಹದ್ದು ಎನ್ನುವುದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ವೈರಲ್ ಆಗಿದೆ. ಹೌದು, ನದಿಯಲ್ಲಿ ಸಿಲುಕಿದ ಟೊಯೋಟೊ ಫಾರ್ಚುನರ್ ಕಾರನ್ನು ಆನೆಯೊಂದು ಕ್ಷಣಾರ್ಧದಲ್ಲಿ ಎಳೆದು ಹೊರತೆಗೆದ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ಇದರ ಶಕ್ತಿ ಸಾಮರ್ಥ್ಯವನ್ನು ಹಾಡಿ ಹೊಗಳಿದ್ದಾರೆ.

ನದಿಯಲ್ಲಿ ಸಿಲುಕಿದ ಕಾರನ್ನು ಕ್ಷಣಾರ್ಧದಲ್ಲಿ ಹೊರತೆಗೆದ ಗಜರಾಜ, ವಿಡಿಯೋ ವೈರಲ್
ವೈರಲ್ ವಿಡಿಯೋ Image Credit source: Twitter
ಸಾಯಿನಂದಾ
|

Updated on: May 30, 2025 | 10:38 AM

Share

ಕೇರಳ, ಮೇ 30: ಆನೆ (Elephant) ಗಳು ನೋಡುವುದಕ್ಕೆ ಮಾತ್ರ ದೈತ್ಯಾಕಾರವಾಗಿಲ್ಲ, ಶಕ್ತಿ ಹಾಗೂ ಬಲಿಷ್ಠತೆಯಲ್ಲಿಯೂ ಉಳಿದ ಪ್ರಾಣಿಗಳನ್ನು ಮೀರಿಸುತ್ತದೆ. ಎಷ್ಟೇ ತೂಕದ ವಸ್ತುವಿರಲಿ ಎತ್ತಿ ಬಿಸಾಡುವ ಸಾಮರ್ಥ್ಯ ಈ ಗಜರಾಜನಿಗೆ ಇದೆ. ಇದೀಗ ನದಿಯಲ್ಲಿ ಸಿಲುಕಿದ ಟೊಯೋಟೊ ಫಾರ್ಚುನರ್ (Toyota Fortuner) ಕಾರನ್ನು ಎಳೆದು ರಕ್ಷಿಸಿದ ಘಟನೆಯೂ ಕೇರಳದ ಪಾಲಕ್ಕಾಡ್ ಜಿಲ್ಲೆಯ ಒಟ್ಟಪ್ಪಲಂ (Ottappalam, Palakkad District of Kerala) ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ.

@ImtiazMadmood ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ನದಿಯಲ್ಲಿ ಸಿಲುಕಿದ್ದ ಕಾರಿನ ಹಿಂಭಾಗಕ್ಕೆ ಹಗ್ಗವನ್ನು ಕಟ್ಟಿರುವುದನ್ನು ಕಾಣಬಹುದು. ಆನೆಯು ಈ ಹಗ್ಗವನ್ನು ತನ್ನ ಸೊಂಡಿಲಿನಲ್ಲಿ ಗಟ್ಟಿಯಾಗಿ ಹಿಡಿದು ಕ್ಷಣಾರ್ಧದಲ್ಲಿ ಕಾರನ್ನು ಎಳೆದು ಹೊರ ತೆಗೆಯುತ್ತಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
Image
ಪುಟ್ಟ ಯಕ್ಷ ಕನ್ಯೆ, ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕುಣಿದ ಕಂದಮ್ಮ
Image
ಟೀ ಎಸ್ಟೇಟ್‌ನಲ್ಲಿ ಮರಿಗಳೊಂದಿಗೆ ಪ್ರತ್ಯಕ್ಷವಾದ ಹುಲಿ
Image
ಕಮಲ್ ಹಾಸನ್ ಹೇಳಿದ್ದು ಸುಳ್ಳು, ಕನ್ನಡವು ಸಂಸ್ಕೃತ ಆಧಾರಿತ

ಹೌದು, ಅಷ್ಟೇನು ಆಳವಿಲ್ಲದ ನದಿಯಲ್ಲಿ ಟೊಯೋಟೊ ಫಾರ್ಚುನರ್ ಕಾರೊಂದು ಸಿಲುಕಿಕೊಂಡಿದೆ. ಕಾರಿನ ಚಕ್ರಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ಎಷ್ಟೇ ಹೊರ ತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಲೇ ಇಲ್ಲ. ಮುಂದೇನು ಮಾಡುವುದು ಎಂದು ಕಾರು ಮಾಲೀಕ ಯೋಚಿಸುತ್ತಿರುವಾಗಲೇ ನೆನಪಿಗೆ ಬಂದದ್ದು ಈ ಗಜರಾಜ. ಈ ಕಾರು ಮಾಲೀಕ ತಿರುವೇಗಪುರದ ಶಂಕರನಾರಾಯಣನ್ ಎಂಬ ಆನೆಯ ಮಾಲೀಕನನ್ನು ಸಂಪರ್ಕಿಸಿದ್ದು ಸಹಾಯವನ್ನು ಯಾಚಿಸಿದ್ದಾರೆ. ಈ ವೇಳೆಯಲ್ಲಿ ಆನೆಯ ಮಾಲೀಕನು ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಕೊನೆಗೆ ನದಿಯಲ್ಲಿ ಸಿಲುಕಿದ್ದ ಕಾರನ್ನು ಆನೆಯು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ : ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಗುಣಪಡಿಸಬಹುದಂತೆ

ಈ ವಿಡಿಯೋವೊಂದು ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದ್ದು ಬಳಕೆದಾರರು ಕಾಮೆಂಟ್ ಗಳನ್ನು ಮಾಡಿದ್ದಾರೆ. ವೈರಲ್ ಆಗಿರುವ ಈ ವಿಡಿಯೋಗೆ ಬಳಕೆದಾರರೊಬ್ಬರು, ಮನುಷ್ಯನು ತನ್ನ ಸಹಾಯಕ್ಕಾಗಿ ಈ ದೈತ್ಯ ಶಕ್ತಿಶಾಲಿ ಪ್ರಾಣಿಯನ್ನು ಹೇಗೆ ಪಳಗಿಸುತ್ತಾರೆ ಎಂಬುವ ಬಗ್ಗೆ ನನಗೆ ತಿಳಿದಿಲ್ಲ. ಆದರೆ ನನ್ನ ಪ್ರಕಾರ ಈ ದೊಡ್ಡ ಪ್ರಾಣಿ ಬಯಸಿದರೆ ಕ್ಷಣಾರ್ದದಲ್ಲಿ ಪುಡಿ ಮಾಡಬಲ್ಲದು. ಆದರೆ ನಾವು ಈ ಪ್ರಾಣಿಗಳನ್ನು ಸಹಾಯಕ್ಕಾಗಿ ಬಳಸಿಕೊಳ್ಳುತ್ತೇವೆ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಮತ್ತೊಬ್ಬರು, ಆನೆಗಳು ಅತ್ಯುತ್ತಮ ಸ್ಮರಣ ಶಕ್ತಿಯನ್ನು ಹೊಂದಿದೆ. ಹಲವು ವರ್ಷಗಳ ನಂತರವು ಅವು ಮನುಷ್ಯರನ್ನು ಹಾಗೂ ಸ್ಥಳಗಳನ್ನು ಗುರುತಿಸಬಲ್ಲದು ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು, ವಿದೇಶಿಗರು ಕಾರನ್ನು ಎತ್ತಲು ಕ್ರೇನ್ ಬಳಸುತ್ತಾರೆ. ಆದರೆ ಭಾರತೀಯರು ಸಹಾಯಕ್ಕಾಗಿ ಪ್ರಕೃತಿಯನ್ನು ಕರೆಯುತ್ತೇವೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್