AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಬೆರಳಿನ ಶಸ್ತ್ರಚಿಕಿತ್ಸೆ ಬದಲಿಗೆ ತಪ್ಪಾಗಿ ಮಗುವಿನ ನಾಲಿಗೆ ಆಪರೇಷನ್​ ಮಾಡಿದ ವೈದ್ಯರು

ಮಗುವಿನ ಸಂಬಂಧಿಕರ ಹೇಳಿಕೆಯ ಪ್ರಕಾರ, ಮಗುವಿನ ಒಂದು ಕೈಯಲ್ಲಿ ಆರು ಬೆರಳುಗಳಿದ್ದ ಕಾರಣ ಅದನ್ನು ತೆಗೆಸಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಂತೆ ಮಗುವಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಶಸ್ತ್ರಚಿಕಿತ್ಸೆಯ ಕೆಲ ಹೊತ್ತಿನ ಬಳಿಕ ಮಗುವನ್ನು ನೋಡಲು ಹೋದ ಪೋಷಕರಿಗೆ ಆಘಾತವಾಗಿದೆ.

Kerala: ಬೆರಳಿನ ಶಸ್ತ್ರಚಿಕಿತ್ಸೆ ಬದಲಿಗೆ ತಪ್ಪಾಗಿ ಮಗುವಿನ ನಾಲಿಗೆ ಆಪರೇಷನ್​ ಮಾಡಿದ ವೈದ್ಯರು
ಅಕ್ಷತಾ ವರ್ಕಾಡಿ
|

Updated on:May 16, 2024 | 4:13 PM

Share

ಕೋಝಿಕ್ಕೋಡ್, ಕೇರಳ: ಕೈ ಬೆರಳಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ತಪ್ಪಾಗಿ ನಾಲಿಗೆಗೆ ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯರ ಎಡವಟ್ಟಿನ ಘಟನೆ ಕೋಝಿಕ್ಕೋಡ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ನಡೆದಿದೆ. ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರ ಈ ನಿರ್ಲಕ್ಷ್ಯಕ್ಕೆ ಮಗುವಿನ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಗುವಿನ ಸಂಬಂಧಿಕರ ಹೇಳಿಕೆಯ ಪ್ರಕಾರ, ಮಗುವಿನ ಒಂದು ಕೈಯಲ್ಲಿ ಆರು ಬೆರಳುಗಳಿದ್ದ ಕಾರಣ ಅದನ್ನು ತೆಗೆಸಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಂತೆ ಮಗುವಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಶಸ್ತ್ರಚಿಕಿತ್ಸೆಯ ಕೆಲ ಹೊತ್ತಿನ ಬಳಿಕ ಮಗುವನ್ನು ನೋಡಲು ಹೋದ ಪೋಷಕರಿಗೆ ಆಘಾತವಾಗಿದೆ. ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸುವ ಬದಲಾಗಿ ವೈದ್ಯರು ಮಗುವಿನ ಬಾಯಿಗೆ ಪ್ಲಾಸ್ಟರ್‌ ಹಾಕಿ ಕಳುಹಿಸಿದ್ದಾರೆ. ಮಗುವಿನ ಕೈಯನ್ನು ಪರೀಕ್ಷಿಸಿದಾಗ ಆರನೇ ಬೆರಳು ಹಾಗೆಯೇ ಇತ್ತು. ಕೆಲ ಹೊತ್ತಿನ ಬಳಿಕ ಬೆರಳಿನ ಆಪರೇಷನ್​​ ಬದಲಾಗಿ ತಪ್ಪಾಗಿ ವೈದ್ಯರು ನಾಲಿಗೆ ಆಪರೇಷನ್​ ಮಾಡಿರುವುದು ತಿಳಿದುಬಂದಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಅಸಮಾಧಾನ ಹೊರ ಹಾಕುತ್ತಿದ್ದಂತೆ ವೈದ್ಯರು ಬಂದು ತಪ್ಪಿಗೆ ಕ್ಷಮೆಯಾಚಿಸಿದ್ದು, ಮತ್ತೆ ಮಗುವನ್ನು ಕರೆದುಕೊಂಡು ಹೋಗಿ ಬೆರಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ದ ಪೋಷಕರು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:12 pm, Thu, 16 May 24

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!