ಮಗುವನ್ನು ಎತ್ತಿಕೊಂಡೇ ವೇದಿಕೆಯ ಮೇಲೆ ಭಾಷಣ ಮಾಡಿದ ಕೇರಳ ಐಎಎಸ್​ ಅಧಿಕಾರಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

Kerala : ಸಾಮಾಜಿಕ ಜಾಲತಾಣದಿಂದ ವಿಡಿಯೋ ಡಿಲೀಟ್ ಆದರೂ ಚರ್ಚೆ ಮಾತ್ರ ಜೀವಂತವಾಗಿದೆ. ನ್ಯೂಝಿಲೆಂಡ್​ನ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ವಿಶ್ವಸಂಸ್ಥೆಯ ಸಭೆಗೆ ತನ್ನ 3 ತಿಂಗಳ ಮಗುವನ್ನು ಕರೆದೊಯ್ದಿದ್ದನ್ನು ನೆಟ್ಟಿಗರು ನೆನಪಿಸಿದ್ದಾರೆ.

ಮಗುವನ್ನು ಎತ್ತಿಕೊಂಡೇ ವೇದಿಕೆಯ ಮೇಲೆ ಭಾಷಣ ಮಾಡಿದ ಕೇರಳ ಐಎಎಸ್​ ಅಧಿಕಾರಿ; ನೆಟ್ಟಿಗರ ಮಿಶ್ರಪ್ರತಿಕ್ರಿಯೆ
Kerala IAS officer holds son in arms while delivering speech sparks ethics debate
Edited By: ಶ್ರೀದೇವಿ ಕಳಸದ

Updated on: Nov 05, 2022 | 4:27 PM

Viral : ಸರ್ಕಾರಿ ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳ ಮೇಲೆ ಸಾರ್ವಜನಿಕ ವಲಯ ಸದಾ ಕಣ್ಣಿಟ್ಟಿರುತ್ತದೆ. ಅದರಲ್ಲೂ ಈಗ ನೆಟ್​ಯುಗ. ಹೀಗಾಗಿ ಕಣ್ಣುಗಳು ಇನ್ನೂ ಸೂಕ್ಷ್ಮವಾಗಿರುತ್ತವೆ! ಖಾಸಗೀ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭಕ್ಕೆ ಆಹ್ವಾನಿತರಾಗಿ ಹೋಗಿದ್ದ ಕೇರಳದ ಜಿಲ್ಲಾಧಿಕಾರಿ ದಿವ್ಯಾ ಎಸ್.​ ಅಯ್ಯರ್​ ತಮ್ಮ 3 ವರ್ಷದ ಮಗುವನ್ನು ಎತ್ತಿಕೊಂಡೇ ವೇದಿಕೆಯ ಮೇಲೆ ಭಾಷಣ ಮಾಡಿದ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ದಿವ್ಯಾ ಪತನಂತಿಟ್ಟ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಡೂರಿನ 6ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟಕರಲ್ಲಿ ಒಬ್ಬರಾದ ರಾಜ್ಯ ವಿಧಾನಸಭೆಯ ಉಪಸಭಾಪತಿ  ಚಿಟ್ಟಾಯಂ ಗೋಪಕುಮಾರ್ ಅವರು ದಿವ್ಯಾ ಅವರ ಭಾಷಣದ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ವಿವಾದದ ಸ್ವರೂಪ ಪಡೆದುಕೊಂಡಿದೆ. ಉನ್ನತಾಧಿಕಾರಿಗಳು ತಮ್ಮ ಕಾರ್ಯನೀತಿಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಕೆಲ ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ಧಾರೆ. ಆನಂತರ ಆ ವಿಡಿಯೋ ಇದ್ದ ಪೋಸ್ಟ್​ ಅನ್ನು ಡಿಲೀಟ್ ಮಾಡಲಾಗಿದೆ.

ಇದನ್ನೂ ಓದಿ
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ಮಾತ್ರ ಚರ್ಚೆ ಇನ್ನೂ ಜೀವಂತವಾಗಿದೆ. ಸಾಕಷ್ಟು ಜನರು ದಿವ್ಯಾ ಅವರಿಗೆ ಸಾಥ್​ ನೀಡಿದ್ದಾರೆ. ಅನೇಕ ಅಧಿಕಾರಿಗಳು, ರಾಜಕಾರಣಿಗಳು ಮಹತ್ವದ ಸಭೆಗೂ ಹಸುಗೂಸು ಮತ್ತು ಪುಟ್ಟಮಕ್ಕಳನ್ನು ಕರೆದೊಯ್ದುದನ್ನು ನೆನಪಿಸಿದ್ದಾರೆ. ನ್ಯೂಝಿಲೆಂಡ್​ನ ಪ್ರಧಾನಿ ಜೆಸಿಂಡಾ ಆರ್ಡೆರ್ನ್ ಕೂಡ ಇದಕ್ಕೆ ಹೊರತಾಗಿಲ್ಲ, 2018ರಲ್ಲಿ ಅವರು ವಿಶ್ವಸಂಸ್ಥೆಯ ಸಭೆಗೆ ತನ್ನ 3 ತಿಂಗಳ ಮಗುವನ್ನು ಕರೆದೊಯ್ದಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಅಯ್ಯರ್ ಅವರ ಪತಿ, ಮಾಜಿ ಶಾಸಕ ಮತ್ತು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಶಬರಿನಾಥನ್, ‘ಕಾರ್ಯಕ್ರಮ  ನಡೆದಿದ್ದು ಭಾನುವಾರ ಮತ್ತು ಕಚೇರಿ ಕೆಲಸಕ್ಕೆ ಸಂಬಂಧಿಸಿರಲಿಲ್ಲ’ ಎಂದು ಹೇಳಿಕೆ ನೀಡಿದ್ಧಾರೆ. ಆದರೆ ಈ ವಿವಾದದ ಕುರಿತು ದಿವ್ಯಾ ಯಾವುದೇ ರೀತಿಯ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ.

ಮತ್ತಷ್ಟು ವೈರಲ್​ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

 

Web contact

TV9 Kannada

Read More
Follow Us