AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಾಸುದೇವ…. ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ

ಕೇರಳದ ದೇವಾಲಯಗಳು ತಮ್ಮ ಹಳೆಯ ಪೂಜಾ ಸಂಪ್ರದಾಯಗಳ ಪಾಲನೆಗೆ ಹೆಸರುವಾಸಿಯಾಗಿದೆ. ಹೀಗೆ ಹಿಂದಿನ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ದೇವಾಲಯಗಳಲ್ಲಿ ಶ್ರೀ ಕೃಷ್ಣನ ವಿಶೇಷ ದೇವಾಲಯವೂ ಒಂದು. ಈ ದೇವಾಲಯದಲ್ಲಿ ಪ್ರತಿದಿನ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ವಿಶೇಷ ವಿಡಿಯೊವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: ವಾಸುದೇವ.... ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ
ಅಂಬಲಪುಳ ಕೃಷ್ಣ
ಮಾಲಾಶ್ರೀ ಅಂಚನ್​
| Edited By: |

Updated on:Jul 08, 2024 | 2:10 PM

Share

ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಹಲವಾರು ದೇವಾಲಯಗಳು ಕಾಣಸಿಗುತ್ತವೆ. ಈ ಪ್ರಖ್ಯಾತ ದೇವಸ್ಥಾನಗಳ ಪೈಕಿ ಅಂಬಲಪುಳ ಕೃಷ್ಣ ದೇವಾಲಯವೂ ಒಂದು. ಇಲ್ಲಿ ಪಾರ್ಥಸಾರಥಿಯ ರೂಪದಲ್ಲಿ ಒಂದು ಕೈಯಲ್ಲಿ ಶಂಖ ಹಾಗೂ ಮತ್ತೊಂದು ಕೈಯಲ್ಲಿ ಚವಟಿಯನ್ನು ಹಿಡಿದಿರುವ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನದ ಮತ್ತೊಂದು ವಿಶೇಷವೆಂದರೆ ಪಾಲ್ಪಾಯಸಂ. ಹಾಲು, ಅಕ್ಕಿ ಹಾಗೂ ಸಕ್ಕರೆಯಿಂದ ತಯಾರಿಸಿದ ಶ್ರೀ ಕೃಷ್ಣನಿಗೆ ಪ್ರಿಯವಾದ ಈ ನೈವೇದ್ಯವನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ನೀಡಲಾಗುತ್ತದೆ. ಈ ನೈವೇದ್ಯದ ಇನ್ನೊಂದು ವಿಶೇಷವೆಂದರೆ, ಪ್ರತಿದಿನ ಇಲ್ಲಿ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ಸುಂದರ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಅಂಬಲಪುಳ ಕೃಷ್ಣ ಈ ದೇವಾಲಯವು ಆಧ್ಯಾತ್ಮಿಕ ಮಹತ್ವದ ಜೊತೆಗೆ ಭಕ್ತರಿಗೆ ವಿತರಿಸುವ ರುಚಿಕರವಾದ ಪ್ರಸಾದಕ್ಕೂ ಹೆಸರುವಾಸಿಯಾಗಿದೆ. ಹೌದು ಈ ದೇವಾಲಯವು ಅಕ್ಕಿ, ಹಾಲು ಮತ್ತು ಸಕ್ಕರೆಯಿಂದ ತಯಾರಿಸಿದ ಪಲ್ಪಾಯಸಂ ಎಂಬ ವಿಶೇಷ ಪ್ರಸಾದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರತಿದಿನ 100 ಲೀ ಗಳಷ್ಟು ಪ್ರಸಾದವನ್ನು ತಯಾರಿಸಲಾಗುತ್ತದೆ. ಹಳೆಯ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ಈ ದೇವಾಲಯದಲ್ಲಿ ನೈವೇದ್ಯ ತಯಾರಿಸುವಾಗ ಕೊನೆಯಲ್ಲಿ ಆ ಪ್ರಸಾದಕ್ಕೆ ಸಕ್ಕರೆಯನ್ನು ಸೇರಿಸುವ ಸಂದರ್ಭದಲ್ಲಿ ಬಾಗಿಲ ಬಳಿ ನಿಂತು ಅಡುಗೆ ಭಟ್ಟರು “ವಾಸುದೇವೋ” ಎಂದು ಜೋರಾಗಿ ಕೂಗುವ ಮೂಲಕ ಶ್ರೀ ಕೃಷ್ಣನ ಅನುಮತಿಯನ್ನು ಪಡೆಯುತ್ತಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ( ಫೇಸ್​​​ಬುಕ್​​​ ವಿಡಿಯೋ)

ಈ ಕುರಿತ ಪೋಸ್ಟ್‌ ಒಂದನ್ನು Team Hindu United ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ದೇವಾಲಯದ ಬಾಗಿಲ ಬಳಿ ನಿಂತು ಅರ್ಚಕರೊಬ್ಬರು ವಾಸುದೇವೋ…… ಎಂದು ಕೂಗಿ ಹೇಳುವ ರೋಮಾಂಚನಕಾರಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ಈ ದೃಶ್ಯ ನಿಜಕ್ಕೂ ರೋಮಾಂಚನಕಾರಿಯಾಗಿದೆ ಎಂದು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 8 July 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ