AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಾಸುದೇವ…. ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ

ಕೇರಳದ ದೇವಾಲಯಗಳು ತಮ್ಮ ಹಳೆಯ ಪೂಜಾ ಸಂಪ್ರದಾಯಗಳ ಪಾಲನೆಗೆ ಹೆಸರುವಾಸಿಯಾಗಿದೆ. ಹೀಗೆ ಹಿಂದಿನ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ದೇವಾಲಯಗಳಲ್ಲಿ ಶ್ರೀ ಕೃಷ್ಣನ ವಿಶೇಷ ದೇವಾಲಯವೂ ಒಂದು. ಈ ದೇವಾಲಯದಲ್ಲಿ ಪ್ರತಿದಿನ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ವಿಶೇಷ ವಿಡಿಯೊವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: ವಾಸುದೇವ.... ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ
ಅಂಬಲಪುಳ ಕೃಷ್ಣ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 08, 2024 | 2:10 PM

Share

ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಹಲವಾರು ದೇವಾಲಯಗಳು ಕಾಣಸಿಗುತ್ತವೆ. ಈ ಪ್ರಖ್ಯಾತ ದೇವಸ್ಥಾನಗಳ ಪೈಕಿ ಅಂಬಲಪುಳ ಕೃಷ್ಣ ದೇವಾಲಯವೂ ಒಂದು. ಇಲ್ಲಿ ಪಾರ್ಥಸಾರಥಿಯ ರೂಪದಲ್ಲಿ ಒಂದು ಕೈಯಲ್ಲಿ ಶಂಖ ಹಾಗೂ ಮತ್ತೊಂದು ಕೈಯಲ್ಲಿ ಚವಟಿಯನ್ನು ಹಿಡಿದಿರುವ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನದ ಮತ್ತೊಂದು ವಿಶೇಷವೆಂದರೆ ಪಾಲ್ಪಾಯಸಂ. ಹಾಲು, ಅಕ್ಕಿ ಹಾಗೂ ಸಕ್ಕರೆಯಿಂದ ತಯಾರಿಸಿದ ಶ್ರೀ ಕೃಷ್ಣನಿಗೆ ಪ್ರಿಯವಾದ ಈ ನೈವೇದ್ಯವನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ನೀಡಲಾಗುತ್ತದೆ. ಈ ನೈವೇದ್ಯದ ಇನ್ನೊಂದು ವಿಶೇಷವೆಂದರೆ, ಪ್ರತಿದಿನ ಇಲ್ಲಿ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ಸುಂದರ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಅಂಬಲಪುಳ ಕೃಷ್ಣ ಈ ದೇವಾಲಯವು ಆಧ್ಯಾತ್ಮಿಕ ಮಹತ್ವದ ಜೊತೆಗೆ ಭಕ್ತರಿಗೆ ವಿತರಿಸುವ ರುಚಿಕರವಾದ ಪ್ರಸಾದಕ್ಕೂ ಹೆಸರುವಾಸಿಯಾಗಿದೆ. ಹೌದು ಈ ದೇವಾಲಯವು ಅಕ್ಕಿ, ಹಾಲು ಮತ್ತು ಸಕ್ಕರೆಯಿಂದ ತಯಾರಿಸಿದ ಪಲ್ಪಾಯಸಂ ಎಂಬ ವಿಶೇಷ ಪ್ರಸಾದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರತಿದಿನ 100 ಲೀ ಗಳಷ್ಟು ಪ್ರಸಾದವನ್ನು ತಯಾರಿಸಲಾಗುತ್ತದೆ. ಹಳೆಯ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ಈ ದೇವಾಲಯದಲ್ಲಿ ನೈವೇದ್ಯ ತಯಾರಿಸುವಾಗ ಕೊನೆಯಲ್ಲಿ ಆ ಪ್ರಸಾದಕ್ಕೆ ಸಕ್ಕರೆಯನ್ನು ಸೇರಿಸುವ ಸಂದರ್ಭದಲ್ಲಿ ಬಾಗಿಲ ಬಳಿ ನಿಂತು ಅಡುಗೆ ಭಟ್ಟರು “ವಾಸುದೇವೋ” ಎಂದು ಜೋರಾಗಿ ಕೂಗುವ ಮೂಲಕ ಶ್ರೀ ಕೃಷ್ಣನ ಅನುಮತಿಯನ್ನು ಪಡೆಯುತ್ತಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ( ಫೇಸ್​​​ಬುಕ್​​​ ವಿಡಿಯೋ)

ಈ ಕುರಿತ ಪೋಸ್ಟ್‌ ಒಂದನ್ನು Team Hindu United ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ದೇವಾಲಯದ ಬಾಗಿಲ ಬಳಿ ನಿಂತು ಅರ್ಚಕರೊಬ್ಬರು ವಾಸುದೇವೋ…… ಎಂದು ಕೂಗಿ ಹೇಳುವ ರೋಮಾಂಚನಕಾರಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ಈ ದೃಶ್ಯ ನಿಜಕ್ಕೂ ರೋಮಾಂಚನಕಾರಿಯಾಗಿದೆ ಎಂದು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 8 July 24

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು