AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಾಸುದೇವ…. ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ

ಕೇರಳದ ದೇವಾಲಯಗಳು ತಮ್ಮ ಹಳೆಯ ಪೂಜಾ ಸಂಪ್ರದಾಯಗಳ ಪಾಲನೆಗೆ ಹೆಸರುವಾಸಿಯಾಗಿದೆ. ಹೀಗೆ ಹಿಂದಿನ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ದೇವಾಲಯಗಳಲ್ಲಿ ಶ್ರೀ ಕೃಷ್ಣನ ವಿಶೇಷ ದೇವಾಲಯವೂ ಒಂದು. ಈ ದೇವಾಲಯದಲ್ಲಿ ಪ್ರತಿದಿನ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ವಿಶೇಷ ವಿಡಿಯೊವೊಂದು ಇದೀಗ ವೈರಲ್‌ ಆಗುತ್ತಿದೆ.

Viral Video: ವಾಸುದೇವ.... ನೈವೇದ್ಯ ತಯಾರಿಸಲು ಅನುಮತಿ ನೀಡು, ಕೃಷ್ಣನ ಅಪ್ಪಣೆ ಪಡೆದು ಪ್ರಸಾದ ಮಾಡುವ ವಿಶೇಷ ದೇವಾಲಯ
ಅಂಬಲಪುಳ ಕೃಷ್ಣ
ಮಾಲಾಶ್ರೀ ಅಂಚನ್​
| Edited By: |

Updated on:Jul 08, 2024 | 2:10 PM

Share

ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಹಲವಾರು ದೇವಾಲಯಗಳು ಕಾಣಸಿಗುತ್ತವೆ. ಈ ಪ್ರಖ್ಯಾತ ದೇವಸ್ಥಾನಗಳ ಪೈಕಿ ಅಂಬಲಪುಳ ಕೃಷ್ಣ ದೇವಾಲಯವೂ ಒಂದು. ಇಲ್ಲಿ ಪಾರ್ಥಸಾರಥಿಯ ರೂಪದಲ್ಲಿ ಒಂದು ಕೈಯಲ್ಲಿ ಶಂಖ ಹಾಗೂ ಮತ್ತೊಂದು ಕೈಯಲ್ಲಿ ಚವಟಿಯನ್ನು ಹಿಡಿದಿರುವ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನದ ಮತ್ತೊಂದು ವಿಶೇಷವೆಂದರೆ ಪಾಲ್ಪಾಯಸಂ. ಹಾಲು, ಅಕ್ಕಿ ಹಾಗೂ ಸಕ್ಕರೆಯಿಂದ ತಯಾರಿಸಿದ ಶ್ರೀ ಕೃಷ್ಣನಿಗೆ ಪ್ರಿಯವಾದ ಈ ನೈವೇದ್ಯವನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ನೀಡಲಾಗುತ್ತದೆ. ಈ ನೈವೇದ್ಯದ ಇನ್ನೊಂದು ವಿಶೇಷವೆಂದರೆ, ಪ್ರತಿದಿನ ಇಲ್ಲಿ ನೈವೇದ್ಯಕ್ಕೆ ಸಕ್ಕರೆಯನ್ನು ಸೇರಿಸುವ ಮೊದಲು ಅಡುಗೆ ಭಟ್ಟರು ಕೃಷ್ಣನ ಅನುಮತಿಯನ್ನು ಪಡೆಯಲು ವಾಸುದೇವೋ ಎಂದು ಜೋರಾಗಿ ಕೂಗುತ್ತಾರೆ. ಈ ಕುರಿತ ಸುಂದರ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಅಂಬಲಪುಳ ಕೃಷ್ಣ ಈ ದೇವಾಲಯವು ಆಧ್ಯಾತ್ಮಿಕ ಮಹತ್ವದ ಜೊತೆಗೆ ಭಕ್ತರಿಗೆ ವಿತರಿಸುವ ರುಚಿಕರವಾದ ಪ್ರಸಾದಕ್ಕೂ ಹೆಸರುವಾಸಿಯಾಗಿದೆ. ಹೌದು ಈ ದೇವಾಲಯವು ಅಕ್ಕಿ, ಹಾಲು ಮತ್ತು ಸಕ್ಕರೆಯಿಂದ ತಯಾರಿಸಿದ ಪಲ್ಪಾಯಸಂ ಎಂಬ ವಿಶೇಷ ಪ್ರಸಾದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರತಿದಿನ 100 ಲೀ ಗಳಷ್ಟು ಪ್ರಸಾದವನ್ನು ತಯಾರಿಸಲಾಗುತ್ತದೆ. ಹಳೆಯ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿರುವ ಈ ದೇವಾಲಯದಲ್ಲಿ ನೈವೇದ್ಯ ತಯಾರಿಸುವಾಗ ಕೊನೆಯಲ್ಲಿ ಆ ಪ್ರಸಾದಕ್ಕೆ ಸಕ್ಕರೆಯನ್ನು ಸೇರಿಸುವ ಸಂದರ್ಭದಲ್ಲಿ ಬಾಗಿಲ ಬಳಿ ನಿಂತು ಅಡುಗೆ ಭಟ್ಟರು “ವಾಸುದೇವೋ” ಎಂದು ಜೋರಾಗಿ ಕೂಗುವ ಮೂಲಕ ಶ್ರೀ ಕೃಷ್ಣನ ಅನುಮತಿಯನ್ನು ಪಡೆಯುತ್ತಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ( ಫೇಸ್​​​ಬುಕ್​​​ ವಿಡಿಯೋ)

ಈ ಕುರಿತ ಪೋಸ್ಟ್‌ ಒಂದನ್ನು Team Hindu United ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ದೇವಾಲಯದ ಬಾಗಿಲ ಬಳಿ ನಿಂತು ಅರ್ಚಕರೊಬ್ಬರು ವಾಸುದೇವೋ…… ಎಂದು ಕೂಗಿ ಹೇಳುವ ರೋಮಾಂಚನಕಾರಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ಈ ದೃಶ್ಯ ನಿಜಕ್ಕೂ ರೋಮಾಂಚನಕಾರಿಯಾಗಿದೆ ಎಂದು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 8 July 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ