AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಕೇರಳದ ಸುಸಜ್ಜಿತ ಹವಾನಿಯಂತ್ರಿತ ಈ ಸರ್ಕಾರಿ ಶಾಲೆ

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲ. ಇದಕ್ಕೆ ಉದಾಹರಣೆಯಂತೆ ಕೇರಳದ ಈ ಶಾಲೆ. ಇದು ಸಂರ್ಪೂಣ ಹವಾನಿಯಂತ್ರಿತವಾಗಿದೆ. ಕೇರಳದ ಮುತ್ತಿಪ್ಪಾಡಿಯಲ್ಲಿ ಆಧುನಿಕ ಹೈಟೆಕ್ ಶಾಲೆಯೂ ನಿರ್ಮಾಣಗೊಂಡಿದ್ದು, ಅಕ್ಟೋಬರ್ 19 ರಂದು ಉದ್ಘಾಟನೆ ನಡೆಯಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಕೇರಳದ ಸುಸಜ್ಜಿತ ಹವಾನಿಯಂತ್ರಿತ ಈ ಸರ್ಕಾರಿ ಶಾಲೆ
ಕೇರಳದ ಸುಸಜ್ಜಿತ ಹವಾನಿಯಂತ್ರಿತ ಸರ್ಕಾರಿ ಶಾಲೆImage Credit source: Social Media
ಸಾಯಿನಂದಾ
|

Updated on:Oct 13, 2025 | 3:54 PM

Share

ಕೇರಳ, ಅಕ್ಟೋಬರ್ 13: ಇಂದಿನ ಪೋಷಕರು ತಮ್ಮ ಮಕ್ಕಳನ್ನು ಎಷ್ಟೇ ಕಷ್ಟ ಇರಲಿ ಖಾಸಗಿ ಶಾಲೆಗೆ ಸೇರಿಸುತ್ತಾರೆ, ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದು ಕಡಿಮೆಯೇ. ಆದರೆ ಕೆಲ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಕಮ್ಮಿಯಿಲ್ಲ ಎನ್ನುವಂತಿದೆ. ಕೇರಳದ ಮಲಪ್ಪುರಂನ ಮೇಲ್ಮುರಿ ಮುತ್ತಿಪ್ಪಾಡಿ ಸರ್ಕಾರಿ ಎಲ್‌ಪಿ ಶಾಲೆಯೂ (Melmuri Muttipadi Govt LP School) ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಸರಿಸುಮಾರು 100 ವರ್ಷ ಹಳೆಯದಾದ ಈ ಕಟ್ಟಡವು ತುಂಬಾ ಶಿಥಿಲಾವಸ್ಥೆಯಲ್ಲಿತ್ತು. ತರುವಾಯ, ಶಿಕ್ಷಣ ಇಲಾಖೆ ಈ ಶಾಲೆಗೆ ಪ್ರವೇಶ ಅನುಮತಿ ನೀಡಲಿಲ್ಲ. ಆದರೆ ಇದೀಗ ಆಧುನಿಕ ಹೈಟೆಕ್ ಶಾಲೆಯಾಗಿ (modern hi-tech school) ನಿರ್ಮಾಣಗೊಂಡಿದೆ.

ಅಕ್ಟೋಬರ್ 19 ಉದ್ಘಾಟನೆಗೆ ಸಜ್ಜಾದ ಸರ್ಕಾರಿ ಶಾಲೆ

ಮುತ್ತಿಪಾಡಿಯಲ್ಲಿ ಆಧುನಿಕ ಹೈಟೆಕ್ ಶಾಲೆಯ ನಿರ್ಮಾಣ ಪೂರ್ಣಗೊಂಡಿದೆ. ಅಕ್ಟೋಬರ್ 19 ರಂದು ಉದ್ಘಾಟನೆ ನಡೆಯಲಿದ್ದು, ಸಂಸದ ಇ ಟಿ ಮುಹಮ್ಮದ್ ಬಶೀರ್ ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ. ಈ ಶಾಲೆಯಲ್ಲಿ ಎಂಟು ತರಗತಿ ಕೊಠಡಿಗಳು, ಸಿಬ್ಬಂದಿ ಕೊಠಡಿ, ಕಂಪ್ಯೂಟರ್ ಲ್ಯಾಬ್, ಹೆಚ್ ಎಂ ಕಚೇರಿ ಮತ್ತು ಗ್ರಂಥಾಲಯವನ್ನು ಒಳಗೊಂಡಿದ್ದು, ಇಡೀ ಶಾಲೆಯನ್ನು ಹವಾನಿಯಂತ್ರಣಗೊಳಿಸಲಾಗಿದೆ. ನೆಲ ಮಹಡಿ ಸುಮಾರು 10,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಇದರ ಜೊತೆಗೆ ಎರಡು ಮಹಡಿಗಳಲ್ಲಿ ಸಂಪೂರ್ಣ ಹವಾನಿಯಂತ್ರಿತ ತರಗತಿ ಕೊಠಡಿಗಳನ್ನು ಜೋಡಿಸಲಾಗಿದೆ.

ಇದನ್ನೂ ಓದಿ: Viral: ನರ್ಸರಿ ಸ್ಕೂಲ್ ಫೀಸ್ 2.5 ಲಕ್ಷ ರೂ: ಇದು ವಿದ್ಯಾದೇಗುಲವೋ, ವ್ಯಾಪಾರ ಕೇಂದ್ರವೋ?

ಇದನ್ನೂ ಓದಿ
Image
ಕನ್ನಡಾಕ್ಷರವನ್ನು ಜೋಡಿಸಿ ಪಟಪಟನೇ ಓದುತ್ತಿರುವ ಪುಟಾಣಿ
Image
ಪ್ರಕೃತಿಯ ನಡುವೆ ಹುಲಿದನ ಆಟವಾಡಿ ಸಂಭ್ರಮಿಸಿದ ಪುಟಾಣಿಗಳು
Image
ಉಪಾಯದಿಂದ ಪುಟಾಣಿಯನ್ನು ಶಾಲಾ ಬಸ್‌ ಹತ್ತಿಸಿದ ತಂದೆ
Image
ನರ್ಸರಿ ಸ್ಕೂಲ್ ಫೀಸ್ 2.5 ಲಕ್ಷ ರೂ: ವೈರಲ್‌ ಆಯ್ತು ಪೋಸ್ಟ್

ಏನೆಲ್ಲಾ ವಿಶೇಷತೆಗಳಿವೆ?

ಶಾಲೆಯ ಬೆಂಚುಗಳು ಮತ್ತು ಮೇಜುಗಳು ಸಹ ವಿಶೇಷವಾಗಿದ್ದು, ಸಾಮಾನ್ಯ ಬೆಂಚುಗಳ ಬದಲಿಗೆ, ಆಧುನಿಕ FRP ಬೆಂಚುಗಳು ಮತ್ತು ಮೇಜುಗಳಿವೆ. ಇದಲ್ಲದೆ, ಎಲ್ಲಾ ತರಗತಿಗಳು ಡಿಜಿಟಲ್ ಪರದೆಗಳು, ಪ್ರತಿ ಮಹಡಿಯಲ್ಲಿ ಶುದ್ಧೀಕರಿಸಿದ ನೀರಿನ ಕಿಯೋಸ್ಕ್‌ಗಳನ್ನು ಒಳಗೊಂಡಿದೆ. ಈ ಕಟ್ಟಡದ ಮತ್ತೊಂದು ವಿಶೇಷವೆಂದರೆ ಸಂಯೋಜಿತ ಧ್ವನಿ ವ್ಯವಸ್ಥೆ. ಇನ್ನು, ತರಗತಿ ಕೋಣೆಗಳಲ್ಲಿ ಪ್ರತ್ಯೇಕ ಗ್ರಂಥಾಲಯಗಳು ಮತ್ತು ಮಕ್ಕಳಿಗಾಗಿ ಪಾದರಕ್ಷೆಗಳನ್ನು ಇಡಲು ವಿಶೇಷ ಶೂ ರ್ಯಾಕ್ ಗಳಿವೆ. ಪುರಸಭೆಯು 5 ಕೋಟಿ ರೂ.ಗಳನ್ನು ಖರ್ಚು ನೀಡಿದೆ. ಶಾಸಕ ಪಿ. ಉಬೈದುಲ್ಲಾ ಅವರ ಆಸ್ತಿ ಅಭಿವೃದ್ಧಿ ನಿಧಿಯಿಂದ 50 ಲಕ್ಷ ರೂ.ಗಳನ್ನು ದೇಣಿಗೆಯನ್ನು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Mon, 13 October 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?