AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿಯಲ್ಲಿ ಬಿರಿಯಾನಿ, ಚಿಕನ್‌ ಫ್ರೈ ಕೊಡ್ಬೇಕೆಂದು ಮನವಿ ಮಾಡಿದ ಪುಟ್ಟ ಪೋರ; ಇದಕ್ಕೆ ಸಚಿವರ ಪ್ರತಿಕ್ರಿಯೆ ಹೇಗಿತ್ತು ನೋಡಿ…

ಪುಟಾಣಿ ಮಕ್ಕಳು ನನ್ಗೆ ಅದು ಬೇಕು, ನನ್ಗೆ ಇದು ಬೇಕು ಅಂತೆಲ್ಲಾ ತಮ್ಮ ಸಣ್ಣಪುಟ್ಟ ಆಸೆಗಳನ್ನು ಹೇಳಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಕೇರಳದ ಬಾಲಕ ಉಪ್ಪಿಟ್ಟು ಬೇಡ ಅಂಗನವಾಡಿಯಲ್ಲಿ ನಮ್ಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ಕೊಡ್ಬೇಕು ಎಂದು ಕೇಳಿಕೊಂಡಿದ್ದಾನೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಪೋರನಿಗಾಗಿ ಅಂಗನವಾಡಿಯ ಮೆನುವನ್ನು ಬದಲಾಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಗನವಾಡಿಯಲ್ಲಿ ಬಿರಿಯಾನಿ, ಚಿಕನ್‌ ಫ್ರೈ ಕೊಡ್ಬೇಕೆಂದು ಮನವಿ ಮಾಡಿದ ಪುಟ್ಟ ಪೋರ; ಇದಕ್ಕೆ ಸಚಿವರ ಪ್ರತಿಕ್ರಿಯೆ ಹೇಗಿತ್ತು ನೋಡಿ…
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Feb 04, 2025 | 5:38 PM

Share

ಕೆಲ ಮಂತ್ರಿಗಳು, ರಾಜಕಾರಣಿಗಳು ವರ್ಷಗಳಾದ್ರೂ ಜನರ ಸಮಸ್ಯೆಯನ್ನು ಪರಿಹರಿಸಲು, ಜನರ ಬೇಡಿಕೆಗಳನ್ನು ಈಡೇರಿಸಲು ಹಿಂದೆ ಮುಂದೆ ನೋಡುತ್ತಾರೆ. ಅಂತಹವರ ಮಧ್ಯೆ ಇಲ್ಲೊಬ್ರು ಸಚಿವೆ ಪುಟ್ಟ ಪೋರನೊಬ್ಬನ ಪುಟಾಣಿ ಆಸೆಯನ್ನು ನೆರವೇರಿಸುವ ಭರವಸೆಯನ್ನು ನೀಡಿದ್ದಾರೆ. ಹೌದು ಕೇರಳ ಮೂಲದ ಬಾಲಕನೊಬ್ಬ ಉಪ್ಪಿಟ್ಟು ಬೇಡ, ಅಂಗನವಾಡಿಯಲ್ಲಿ ನಮ್ಗೆ ಚಿಕನ್‌ ಫ್ರೈ ಮತ್ತು ಬಿರಿಯಾನಿಯೇ ಕೊಡ್ಬೇಕೆಂದು ಕೇಳಿಕೊಂಡಿದ್ದಾನೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಪೋರನಿಗಾಗಿ ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೇರಳದ ಶಂಕು (ರಿಜುಲ್‌ ಎಸ್.‌ ಸುಂದರ್‌) ಎಂಬ ಪುಟ್ಟ ಪೋರ ಉಪ್ಪಿಟ್ಟು ಬೇಡ ಅಂಗನವಾಡಿಯಲ್ಲಿ ಬಿರಿಯಾನಿ ಮತ್ತು ಚಿಕನ್‌ ಫ್ರೈ ಕೊಡ್ಬೇಕು ಎಂದು ತಾಯಿಯ ಬಳಿ ಹೇಳಿದ್ದಾನೆ. ಈತನ ಮುದ್ದಾದ ಬೇಡಿಕೆಯ ವಿಡಿಯೋವನ್ನು ಆತನ ತಾಯಿ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯಿಸಿದ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್‌ ಪುಟ್ಟ ಬಾಲಕನ ಬೇಡಿಕೆಯನ್ನು ಪರಿಗಣನೆಗೆ ತೆಗೆದುಕೊಂಡು, ಶಂಕುವಿಗಾಗಿ ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ (ಕೃಪೆ: Veena George)

ಈ ಕುರಿತ ವಿಡಿಯೋವನ್ನು ವೀಣಾ ಜಾರ್ಜ್‌ (Veena George) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಶುಂಕುವಿನ ಮನವಿಯನ್ನು ಪರಿಗಣಿಸಿ, ಅಂಗನವಾಡಿ ಮೆನು ಮಾರ್ಪಾಡು ಕುರಿತು ಚರ್ಚಿಸಲಾಗುವುದು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೇರಳ ಸರ್ಕಾರವು ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಉಪ್ಪಿಟ್ಟು ಜೊತೆಗೆ ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ವಿವಿಧ ಊಟದ ಆಯ್ಕೆಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಮೊಟ್ಟೆ ಮತ್ತು ಹಾಲು ಒದಗಿಸುವ ಯೋಜನೆ ಯಶಸ್ವಿಯಾಗಿದೆ. ಇನ್ನೂ ಶಂಕುವಿನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಅಂಗನವಾಡಿಯ ಮೆನುವನ್ನು ಮಾರ್ಪಾಡು ಮಾಡುವ ಬಗ್ಗೆ ಚರ್ಚಿಸಲಾಗುವುದು ಎಂದು ವೀಣಾ ಜಾರ್ಜ್‌ ಹೇಳಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮನೆಯಲ್ಲಿ ಹಾಲು ಮಿಕ್ಕರೆ ಅದನ್ನು ವೇಸ್ಟ್‌ ಮಾಡುವ ಬದಲು ಹೀಗೆ ಉಪಯೋಗಿಸಿ

ಒಂದು ದಿನದ ಹಿಂದೆ ಶೇರ್‌ ಮಾಡಲಾದ ಈ ವಿಡಿಯೋ 4.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಮುಗ್ಧ ಮಗುವಿನ ಬೇಡಿಕೆಯನ್ನು ಪರಿಗಣಿಸಿದ ನಿಮಗೆ ಧನ್ಯವಾದಗಳುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾವು ಅಂಗನವಾಡಿಯಲ್ಲಿದ್ದಾಗ ಈ ಸಚಿವೆ ಇರಬೇಕಿತ್ತುʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 4 February 25

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್