AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವೈದ್ಯರ ತಂಡವು ರೋಗಿಯ ಶ್ವಾಸಕೋಶದಿಂದ ಜಿರಳೆಯನ್ನು ತೆಗೆದುಹಾಕಲು ಎಂಟು ಗಂಟೆಗಳ ಕಾಲ ಹರಸಾಹಸವನ್ನು ಮಾಡಿದ್ದಾರೆ. ಅದಾಗಲೇ ಸತ್ತಿದ್ದ ಜಿರಳೆ ಒಂದು ಸಣ್ಣ ಭಾಗವು ದೇಹದ ಒಳಗೆ ಉಳಿಯದಂತೆ ತೆಗೆದು ಹಾಕಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಂಟು ಗಂಟೆಗಳ ಕಾಲ ಹರಸಾಹಸ ಮಾಡಿ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಸಂಪೂರ್ಣವಾಗಿ ಹೊರತೆಗೆಯುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ
ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 01, 2024 | 10:50 AM

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆಯಾಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. 55 ವರ್ಷದ ವ್ಯಕ್ತಿ ಗುರುವಾರ (ಫೆ.29) ತನ್ನ ಶ್ವಾಸಕೋಶದಲ್ಲಿ ಏನೋ ಸಿಲುಕಿಕೊಂಡಿದ್ದ ಕಾರಣ ಉಸಿರಾಡಲ ಸಾಧ್ಯವಾಗುತ್ತಿಲ್ಲ ಎಂದು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಎಕ್ಸ್​​​ ರೇ ವೇಳೆ ಶ್ವಾಸಕೋಶದಲ್ಲಿ ಏನೋ ವಸ್ತು ಇರುವುದು ತಿಳಿದುಬಂದಿದೆ. ಇದಾದ ಬಳಿಕ ಬ್ರಾಂಕೋಸ್ಕೋಪಿ ಪರೀಕ್ಷೆಯಿಂದ ಶ್ವಾಸಕೋಶದಲ್ಲಿ ಜಿರಳೆ ಇರುವುದು ಪತ್ತೆಯಾಗಿದೆ. ಸುಮಾರು 8ಗಂಟೆಗಳ ಸತತ ಪ್ರಯತ್ನದ ನಂತರ ವೈದ್ಯರು ರೋಗಿಯ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಹೊರತೆಗೆದಿದ್ದಾರೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವೈದ್ಯರ ತಂಡವು ರೋಗಿಯ ಶ್ವಾಸಕೋಶದಿಂದ ಜಿರಳೆಯನ್ನು ತೆಗೆದುಹಾಕಲು ಎಂಟು ಗಂಟೆಗಳ ಕಾಲ ಹರಸಾಹಸವನ್ನು ಮಾಡಿದ್ದಾರೆ. ಅದಾಗಲೇ ಸತ್ತಿದ್ದ ಜಿರಳೆ ಒಂದು ಸಣ್ಣ ಭಾಗವು ದೇಹದ ಒಳಗೆ ಉಳಿಯದಂತೆ ತೆಗೆದು ಹಾಕಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಂಟು ಗಂಟೆಗಳ ಕಾಲ ಹರಸಾಹಸ ಮಾಡಿ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಸಂಪೂರ್ಣವಾಗಿ ಹೊರತೆಗೆಯುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.

ಇದನ್ನೂ ಓದಿ: ಮೊದ್ಲು ಮದುವೆ ಆಮೇಲೆ ಓದು, 13 ವರ್ಷಕ್ಕೆ ಮದುವೆಗೆ ರೆಡಿಯಾದ ಬಾಲಕ;ವಿಡಿಯೋ ವೈರಲ್

ರೋಗಿಯು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ.ಟಿಂಕು ಜೋಸೆಫ್ ತಿಳಿಸಿದ್ದಾರೆ. ಈ ಹಿಂದಿನಿಂದಲೂ ಈ ವ್ಯಕ್ತಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಕುತ್ತಿಗೆಯ ಮೂಲಕ ಉಸಿರಾಟದ ಕೊಳವೆಯನ್ನು ಸೇರಿಸಲಾಗಿತ್ತು. ಆದ್ದರಿಂದ ಈ ಕೊಳವೆಯ ಮೂಲಕ ಜಿರಳೆ ಶ್ವಾಸಕೋಶವನ್ನು ಪ್ರವೇಶಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​