AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೇರಳದ ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಬೆರಗು ಮೂಡಿಸಿದ ಪೋಲಿಷ್ ಮಹಿಳೆ

ವಿದೇಶಿಗರು ಭಾರತಕ್ಕೆ ಬಂದು ಇಲ್ಲಿನ ಸಂಸ್ಕೃತಿ ಆಚಾರ ವಿಚಾರಗಳನ್ನು ಇಷ್ಟ ಪಟ್ಟು ಅನುಸರಿಸುವುದನ್ನು ನೀವು ನೋಡಿರುತ್ತೀರಿ. ಇನ್ನು, ಕನ್ನಡ ಸೇರಿದಂತೆ ಆಯಾಯ ಪ್ರಾಂತ್ಯದ ಭಾಷೆಗಳನ್ನು ಕಲಿಯುತ್ತಾರೆ. ಆದರೆ ಇಲ್ಲೊಬ್ಬರು ಪೋಲಿಷ್ ಮಹಿಳೆ ಕೇರಳದಲ್ಲಿ ನಡೆದ ಮದುವೆಯಲ್ಲಿ ಭಾಗಿಯಾಗಿ ಕೇರಳದ ಮಕ್ಕಳೊಂದಿಗೆ ಮಲಯಾಳಂನಲ್ಲಿ ಮಾತನಾಡುವ ಮೂಲಕ ಅಚ್ಚರಿ ಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೇರಳದ ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಬೆರಗು ಮೂಡಿಸಿದ ಪೋಲಿಷ್ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 02, 2025 | 7:27 PM

Share

ಭಾರತವೆಂದರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ಪ್ರತಿ ವರ್ಷವು ಲೆಕ್ಕವಿಲ್ಲದಷ್ಟು ವಿದೇಶಿಗರು ಇಲ್ಲಿಗೆ ಭೇಟಿ ನೀಡ್ತಾರೆ. ಇಲ್ಲಿ ಆಹಾರ, ಉಡುಗೆ ತೊಡುಗೆಯನ್ನು ಇಷ್ಟ ಪಟ್ಟು ಧರಿಸುತ್ತಾರೆ. ಕೆಲವರು ಇಲ್ಲಿನ ಸಂಸ್ಕೃತಿ ಆಚಾರ ವಿಚಾರಗಳಿಗೆ ಮನಸೋತು ಇಲ್ಲಿಯೇ ಉಳಿದುಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿಯೆನ್ನುವಂತಹ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ಪೋಲಿಷ್ ಕಂಟೆಂಟ್ ಕ್ರಿಯೇಟರ್ ಎಮಿಲಿಯಾ ಪೀಟ್ರ್ಜಿಕ್ (Polish Content Creator Emilia Pietrzyk) ಕೇರಳದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು, ಅಲ್ಲಿನ ಮಕ್ಕಳೊಂದಿಗೆ ಮಲಯಾಳಂನಲ್ಲಿ ಮಾತನಾಡಿ ಅಚ್ಚರಿ ಮೂಡಿಸಿದ್ದು, ವಿದೇಶಿ ಮಹಿಳೆಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಲಯಾಳಂ ಮಾತನಾಡಿ ಅಚ್ಚರಿ ಮೂಡಿಸಿದ ವಿದೇಶಿ ಮಹಿಳೆ

ಇದನ್ನೂ ಓದಿ
Image
ಭಾರತ ಬಿಟ್ಟು ಹೊರಡುವಾಗ ಅಮೆರಿಕನ್ ಮಹಿಳೆ ಭಾವುಕ
Image
ಭಾರತ ಎಷ್ಟು ಸುಂದರವಾಗಿದೆ ಎಂದು ತೋರಿಸಿಕೊಟ್ಟ ವಿದೇಶಿ ವ್ಲಾಗರ್
Image
ವಿದ್ಯಾರ್ಥಿ ಭವನದ ಊಟ ಸವಿದು ಪ್ರಾಮಾಣಿಕ ರೇಟಿಂಗ್ಸ್‌ ನೀಡಿದ ವ್ಲಾಗರ್
Image
ವಿದೇಶಿ ಸೊಸೆಗೆ ಅದ್ದೂರಿ ಸ್ವಾಗತ ನೀಡಿದ ಭಾರತದ ಅತ್ತೆ ಮಾವ

emiliainkerala ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ ಕೇರಳದ ಮದುವೆಯಲ್ಲಿ ಭಾಗಿಯಾಗಿರುವ ಪೋಲಿಷ್ ಮಹಿಳೆಯೂ ಕೇರಳದ ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ. ವಿದೇಶಿ ಮಹಿಳೆ ಮಲಯಾಳಂ ಮಾತನಾಡುವುದನ್ನು ನೋಡಿ ಮಕ್ಕಳು ಶಾಕ್ ಆಗಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಕೇರಳದ ಸಂಸ್ಕೃತಿಯನ್ನು ಅನ್ವೇಷಿಸುವ, ಅದರ ಸೌಂದರ್ಯವನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳುವ ಪೋಲಿಷ್ ಹುಡುಗಿ ಎಂದು ಶೀರ್ಷಿಕೆಯಲ್ಲಿ ವಿವರಿಸುತ್ತಾ ಮದುವೆಯಲ್ಲಿ ಮಕ್ಕಳೊಂದಿಗೆ ಮಲಯಾಳಂನಲ್ಲಿ ಮಾತನಾಡುವ ಮೂಲಕ ಅವರನ್ನು ಅಚ್ಚರಿಗೊಳಿಸಲು ನಿರ್ಧರಿಸಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮೊದಲು ಆಘಾತ, ನಂತರ ನಗು, ನಂತರ ಹಲವು ಪ್ರಶ್ನೆಗಳು. ಈ ಮಕ್ಕಳ ಮುಖದಲ್ಲಿನ ಭಾವನೆ ಅಮೂಲ್ಯವಾಗಿತ್ತು ಎಂದಿದ್ದಾರೆ.

ವಿದೇಶಿಯರಾಗಿ, ಇಂತಹ ಕ್ಷಣಗಳು ಭಾಷೆಯನ್ನು ಕಲಿಯಲು ಮುಂದಿನ ಪೀಳಿಗೆಯೊಂದಿಗೆ ತಮ್ಮದೇ ಆದ ಮಾತೃಭಾಷೆಯಲ್ಲಿ ಸಂಪರ್ಕ ಸಾಧಿಸುವುದನ್ನು ಅರ್ಥೈಸುತ್ತವೆ. ಈ ಮಕ್ಕಳಿಂದ ಬಂದ ಆತ್ಮೀಯ ಪ್ರತಿಕ್ರಿಯೆಯು ಯಾವುದೇ ತರಗತಿಯ ಪಾಠಕ್ಕಿಂತ ಹೆಚ್ಚಾಗಿ ತನಗೆ ಪ್ರೇರಣೆ ನೀಡಿತು. ಕೇರಳದ ಸಂಸ್ಕೃತಿಯ ನಿಜವಾದ ಭಾಗವೆಂದು ತಾನು ಭಾವಿಸುವಂತೆ ಮಾಡಿತು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಮಕ್ಕಳು ಯಾವುದೇ ತರಗತಿಗಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ನನಗೆ ನೀಡಿದರು. ಅವರ ಮುಖದಲ್ಲಿದ್ದ ಸಂತೋಷವು ಪ್ರತಿದಿನ ಮಲಯಾಳಂ ಕಲಿಯುವುದನ್ನು ಮುಂದುವರಿಸಲು ಅತ್ಯುತ್ತಮ ಪ್ರೇರಣೆಯಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ:Video: ತನ್ನ ಕುಟುಂಬದೊಂದಿಗೆ ಅಮೆರಿಕಕ್ಕೆ ಮರಳುವ ಸಮಯ ಬಂತು, ಭಾರತ ಬಿಟ್ಟು ಹೊರಡುವಾಗ ಅಮೆರಿಕನ್ ಮಹಿಳೆ ಭಾವುಕ

ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ಹೀಗೆ ಕಾಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು ಒಳ್ಳೆಯ ಪ್ರಯತ್ನ ಎಂದಿದ್ದಾರೆ. ಇನ್ನೊಬ್ಬರು ಅದ್ಭುತವಾದ ಸಂಭಾಷಣೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ವಿದೇಶಿಗರು ನಮ್ಮ ಮಾತೃಭಾಷೆಯನ್ನು ಮಾತನಾಡುವುದನ್ನು ಕೇಳುವ ಖುಷಿಯೇ ಬೇರೆ. ಈ ವಿಡಿಯೋ ನೋಡಿ ನಿಜಕ್ಕೂ ಖುಷಿಯಾಗುತ್ತಿದೆ ಎಂದು ಕಾಮೆಂಟ್ ಮಾಡಿ ಹೇಳಿದ್ದಾರೆ. ಇನ್ನು ಕೆಲವು ಬಳಕೆದಾರರು ಹಾರ್ಟ್ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ