AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರನಿಗೆ ಯಮನಾದ ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಿದ್ದ ಹಗ್ಗ; ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಗ್ಗವನ್ನು ಗಮನಿಸದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, 20 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Dec 06, 2024 | 5:05 PM

Share

ಕಾರು ಅಥವಾ ಬೈಕು ಚಲಾಯಿಸುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಕೆಲವೊಂದು ಪುಟ್ಟ ನಿರ್ಲಕ್ಷ್ಯ ಭಾರೀ ಅಪಘಾತಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಘಟನೆಯೊಂದು ಕೇರಳದಲ್ಲಿ ನಡೆದಿದೆ. ರಸ್ತೆಯಲ್ಲಿ ಅಡ್ಡಲಾಗಿ ಕಟ್ಟಲಾದ ಬಿಳಿ ಬಣ್ಣದ ಬ್ಯಾಂಡ್ ಒಂದನ್ನು ಗಮನಿಸದ ಬೈಕ್​ ಸವಾರ ವೇಗವಾಗಿ ಬಂದಿದ್ದಾನೆ. ಬಂದ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಮೂವರು ಪೊಲೀಸರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಚೆಕ್‌ಪಾಯಿಂಟ್ ಗೇಟ್ ರಸ್ತೆಗೆ ಅಡ್ಡಿಪಡಿಸುವ ರೀತಿಯಲ್ಲಿ ಹಗ್ಗವೊಂದನ್ನು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದು, ಇದನ್ನು ಗಮನಿಸದ ಬೈಕ್​ ಸವಾರ ಶರವೇಗದಲ್ಲಿ ಬಂದಿದ್ದಾನೆ. ವ್ಯಕ್ತಿ ಬೈಕಿನಿಂದ ರಸ್ತೆಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಜಾಯಿಂಟ್​ ವೀಲ್​ನಿಂದ ಹೊರಬಿದ್ದ ಬಾಲಕಿ, 60 ಅಡಿಯಲ್ಲಿ ನೇತಾಡುತ್ತಿದ್ದವಳ ರಕ್ಷಣೆಯೇ ರೋಚಕ

@SiddharthKG7 ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ಡಿಸೆಂಬರ್​ 05ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 2.1 ಮಿಲಿಯನ್​ ಅಂದರೆ 20ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ