AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿದ್ಯಾರ್ಥಿಯ ಡೆಸ್ಕ್​ವಾದನಕ್ಕೆ ಶಿಕ್ಷಕಿಯ ಜಾನಪದ ಹಾಡಿನ ಸಾಥ್!

Wayanad : ನಾನು ಶಾಲೆಯಲ್ಲಿದ್ದಾಗ ಹೀಗೆಯೇ ಡೆಸ್ಕ್​ ನುಡಿಸಿದ್ದೆ, ಆಗ ನನ್ನ ಶಿಕ್ಷಕಿ ಏನು ಮಾಡಿದ್ದರು ಗೊತ್ತೇ? ಎಂದು ಒಬ್ಬರು ಕೇಳಿದ್ದಾರೆ. ಆದರೆ ಈ ಶಿಕ್ಷಕಿಯಂತೂ ಈ ಹುಡುಗನೊಂದಿಗೆ ಕುಳಿತು ಮಲಯಾಳದ ಛಂದನೆಯ ಜಾನಪದ ಗೀತೆ ಹಾಡಿದ್ದಾರೆ!

Viral Video: ವಿದ್ಯಾರ್ಥಿಯ ಡೆಸ್ಕ್​ವಾದನಕ್ಕೆ ಶಿಕ್ಷಕಿಯ ಜಾನಪದ ಹಾಡಿನ ಸಾಥ್!
ವಯನಾಡಿನ ಜಾನಪದ ಗೀತೆ ಹಾಡುತ್ತಿರುವ ಶಿಕ್ಷಕಿ ಮತ್ತು ಡೆಸ್ಕ್​ ನುಡಿಸುತ್ತಿರುವ ವಿದ್ಯಾರ್ಥಿ
Follow us
ಶ್ರೀದೇವಿ ಕಳಸದ
|

Updated on:Jul 06, 2023 | 5:33 PM

Kerala : ಪ್ರತಿಭೆ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಆದರೆ ಎಲ್ಲ ಪೋಷಕರಿಗೂ ಅಷ್ಟೊಂದು ಸೂಕ್ಷ್ಮವಾಗಿ ಗಮನಿಸಲು ಮತ್ತು ಪ್ರೋತ್ಸಾಹಿಸಲು ಸಮಯವಿರುತ್ತದೆಯೇ? ಅದರಲ್ಲೂ ಕೆಳವರ್ಗ ಮತ್ತು ದುಡಿಯುವ ವರ್ಗದ ಪೋಷಕರಿಗೆ ಮನೆಮಂದಿಯ ಹೊಟ್ಟೆ ತುಂಬಿಸುವುದೇ ಕಷ್ಟ. ಆದರೂ ಮಕ್ಕಳನ್ನು ಶಾಲೆಗೆ ಕಳಿಸುವ ಸಾಹಸಕ್ಕಂತೂ ಕೈಹಾಕುತ್ತಾರೆ. ಆದರೆ ಕಲೆ? ಅದು ಕಷ್ಟವೇ. ಹೀಗಿದ್ದಾಗ ಮಕ್ಕಳೊಳಗಿನ ಪ್ರತಿಭೆಯನ್ನು ಹೊರಜಗತ್ತಿಗೆ ಕಾಣಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎನ್ನಿಸಿಕೊಳ್ಳುತ್ತದೆ. ಈ ವಿಡಿಯೋ ನೋಡಿ. ಕೇರಳದ ಸರ್ಕಾರಿ ಶಾಲೆಯ ಶಿಕ್ಷಕಿ ಮಕ್ಕಳೊಂದಿಗೆ ಡೆಸ್ಕಿನಲ್ಲಿ ಕುಳಿತು ವಯನಾಡಿನ (Wayanad) ಜಾನಪದ ಹಾಡೊಂದನ್ನು ಹಾಡಿದ್ದಾರೆ. ಈ ಪುಟ್ಟ ಬಾಲಕ ಡೆಸ್ಕ್​ನ್ನೇ ತಾಳವಾದ್ಯವನ್ನಾಗಿಸಿಕೊಂಡಿದ್ಧಾನೆ!

ಈತನಕ ಈ ವಿಡಿಯೋ ಅನ್ನು ಸುಮಾರು 75,000 ಜನರು ವೀಕ್ಷಿಸಿದ್ದಾರೆ. ಸಾವಿರಕ್ಕಿಂತಲೂ ಹೆಚ್ಚು ಜನ ಇಷ್ಟಪ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ಹೃದಯ ತುಂಬಿ ಪ್ರತಿಕ್ರಿಯಿಸಿದ್ದಾರೆ. ವಜ್ರವೊಂದು ಪತ್ತೆಯಾಗಿದೆ! ಇದನ್ನು ಕತ್ತರಿಸಿ ನಯಗೊಳಿಸಿ ಹೊಳೆಯುವಂತೆ ಮಾಡಬೇಕಿದೆ ಎಂದಿದ್ಧಾರೆ ಒಬ್ಬರು. ಶಾಲೆಯಲ್ಲಿದ್ದಾಗ ಶಿಕ್ಷಕರೊಬ್ಬರು ನನ್ನನ್ನು ಹಾಡಲು ಒತ್ತಾಯಿಸಿ ಬಹುಮಾನ ಗೆಲ್ಲುವಂತೆ ಮಾಡಿದ್ದನ್ನು ನಾನು ಎಂದಿಗೂ ಮರೆಯಲಾರೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral: ಬಾಡಿಗೆದಾರರಿಗೆ 1 ಕಿಲೋ ಕ್ಯಾಬೇಜ್​ ಉಪ್ಪಿನಕಾಯಿ ತಯಾರಿಸಿ ಸ್ವಾಗತಿಸಿದ ಬೆಂಗಳೂರಿನ ಮಹಿಳೆ 

ಜನ್ಮಜಾತ ಪ್ರತಿಭೆ, ಇಂಥ ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿ, ಪೋಷಿಸಿ, ವೇದಿಕೆಯನ್ನು ಕಲ್ಪಿಸಿಕೊಡುವ ಶಿಕ್ಷಕರು ಈಗಿನ ದಿನಗಳಲ್ಲಿ ವಿರಳ, ಈ ಶಿಕ್ಷಕಿಯು ಈತನಿಗೆ ಒಳ್ಳೆಯ ಭವಿಷ್ಯ ಕಟ್ಟಿಕೊಡುವಲ್ಲಿ ಸಹಾಯ ಮಾಡಲಿ ಎಂದು ಹಾರೈಸಿದ್ದಾರೆ ಇನ್ನೂ ಒಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:31 pm, Thu, 6 July 23

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ