AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಮ್ಮಾ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಅತ್ತ ಬಾಲಕನನ್ನು ತನ್ನ ಬಳಿಯೇ ಕೂರಿಸಿಕೊಂಡ ಬಸ್‌ ಚಾಲಕ

ಚಾಲಕರ ಮಾನವೀಯ ಕಾರ್ಯಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಅಮ್ಮ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಹಟ ಮಾಡಿದ ಬಾಲಕನನ್ನು ತನ್ನ ಸೀಟಿನಲ್ಲಿಯೇ ಕೂರಿಸಿ ಬಸ್‌ ಚಾಲಕರೊಬ್ಬರು ಪುಟ್ಟ ಬಾಲಕನ ಪುಟ್ಟ ಆಸೆಯನ್ನು ಪೂರೈಸಿದ್ದಾರೆ. ಬಸ್‌ ಚಾಲಕನ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on:Oct 19, 2024 | 3:50 PM

Share

ಪುಟ್ಟ ಮಕ್ಕಳೇ ಹಾಗೆ ಪ್ರತಿಯೊಂದು ವಿಷಯಕ್ಕೂ ಹಠ ಮಾಡುತ್ತಾರೆ. ಕಣ್ಣಿಗೆ ಕಂಡದ್ದೆಲ್ಲವೂ ಬೇಕೇ ಬೇಕು ಎನ್ನುತ್ತಾರೆ. ಮಕ್ಕಳ ಈ ಹಠಮಾರಿತನವನ್ನು ನಿಭಾಯಿಸುವುದೇ ಪೋಷಕರಿಗೆ ಒಂದು ದೊಡ್ಡ ಸವಾಲು ಅಂತಾನೇ ಹೇಳಬಹುದು. ಇದೀಗ ಇಲ್ಲೊಂದು ಮಗುವಿನ ಹಠಮಾರಿತನಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗಿದ್ದು, ತಾಯಿಯೊಂದಿಗೆ ಬಸ್‌ ಹತ್ತಿದ ಮಗುವೊಂದು ನಾನು ಡ್ರೈವರ್‌ ಸೀಟಿನಲ್ಲೇ ಕೂರಬೇಕು ಎಂದು ಹಠ ಮಾಡಿ ಜೋರಾಗಿ ಅತ್ತಿದ್ದು, ಮಗುವಿನ ಅಳುವನ್ನು ನೋಡಲಾರದೆ ಬಸ್‌ ಚಾಲಕ ಮಗುವನ್ನು ತನ್ನ ಸೀಟಿನಲ್ಲಿ ಕೂರಿಸಿ ಆತನ ಆಸೆಯನ್ನು ಪೂರೈಸಿದ್ದಾರೆ.

ಈ ಘಟನೆ ಕೇರಳದ ಚೆಂಗನ್ನೂರಿನಲ್ಲಿ ನಡೆದಿದ್ದು, ನಾನು ಡ್ರೈವರ್‌ ಸೀಟಿನಲ್ಲಿ ಕೂರಬೇಕೆಂದು ಹಠ ಮಾಡಿದ ಬಾಲಕನನ್ನು ತನ್ನ ಸೀಟಿನಲ್ಲಿ ಕೂರಿಸಿ ಖಾಸಗಿ ಬಸ್‌ ಚಾಲಕರೊಬ್ಬರು ಆ ಬಾಲಕನ ಆಸೆಯನ್ನು ಪೂರೈಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು UK 4 STAR NS ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪುಟ್ಟ ಬಾಲಕನೊಬ್ಬ ತನ್ನ ತಾಯಿಯ ಜೊತೆಯಲ್ಲಿ ಬಸ್‌ ಏರುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಸ್‌ ಒಳಗೆ ಬಂದ ಬಾಲಕ ನಾನು ಬೇರೆ ಯಾವುದೇ ಸೀಟ್‌ನಲ್ಲಿ ಕೂರುವುದಿಲ್ಲ ನನ್ಗೆ ಡ್ರೈವರ್‌ ಸೀಟ್‌ ಬೇಕು ಎಂದು ಹಟ ಮಾಡುತ್ತಾನೆ. ಅಷ್ಟೇ ಅಲ್ಲದೇ ಜೋರಾಗಿ ಅಳುತ್ತಾನೆ. ಮಗುವಿನ ಈ ಅಳುವನ್ನು ನೋಡಲಾರದೆ ಆ ಬಸ್ಸಿನ ನಿರ್ವಾಹಕ ಮತ್ತು ಚಾಲಕ ಮಗುವನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿ ಆತನ ಪುಟ್ಟ ಆಸೆಯನ್ನು ಪೂರೈಸುತ್ತಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 19 October 24

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!