AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಮ್ಮಾ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಅತ್ತ ಬಾಲಕನನ್ನು ತನ್ನ ಬಳಿಯೇ ಕೂರಿಸಿಕೊಂಡ ಬಸ್‌ ಚಾಲಕ

ಚಾಲಕರ ಮಾನವೀಯ ಕಾರ್ಯಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಅಮ್ಮ ನನ್ಗೆ ಡ್ರೈವರ್‌ ಸೀಟ್‌ ಬೇಕೇ ಬೇಕು ಎಂದು ಹಟ ಮಾಡಿದ ಬಾಲಕನನ್ನು ತನ್ನ ಸೀಟಿನಲ್ಲಿಯೇ ಕೂರಿಸಿ ಬಸ್‌ ಚಾಲಕರೊಬ್ಬರು ಪುಟ್ಟ ಬಾಲಕನ ಪುಟ್ಟ ಆಸೆಯನ್ನು ಪೂರೈಸಿದ್ದಾರೆ. ಬಸ್‌ ಚಾಲಕನ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on:Oct 19, 2024 | 3:50 PM

Share

ಪುಟ್ಟ ಮಕ್ಕಳೇ ಹಾಗೆ ಪ್ರತಿಯೊಂದು ವಿಷಯಕ್ಕೂ ಹಠ ಮಾಡುತ್ತಾರೆ. ಕಣ್ಣಿಗೆ ಕಂಡದ್ದೆಲ್ಲವೂ ಬೇಕೇ ಬೇಕು ಎನ್ನುತ್ತಾರೆ. ಮಕ್ಕಳ ಈ ಹಠಮಾರಿತನವನ್ನು ನಿಭಾಯಿಸುವುದೇ ಪೋಷಕರಿಗೆ ಒಂದು ದೊಡ್ಡ ಸವಾಲು ಅಂತಾನೇ ಹೇಳಬಹುದು. ಇದೀಗ ಇಲ್ಲೊಂದು ಮಗುವಿನ ಹಠಮಾರಿತನಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗಿದ್ದು, ತಾಯಿಯೊಂದಿಗೆ ಬಸ್‌ ಹತ್ತಿದ ಮಗುವೊಂದು ನಾನು ಡ್ರೈವರ್‌ ಸೀಟಿನಲ್ಲೇ ಕೂರಬೇಕು ಎಂದು ಹಠ ಮಾಡಿ ಜೋರಾಗಿ ಅತ್ತಿದ್ದು, ಮಗುವಿನ ಅಳುವನ್ನು ನೋಡಲಾರದೆ ಬಸ್‌ ಚಾಲಕ ಮಗುವನ್ನು ತನ್ನ ಸೀಟಿನಲ್ಲಿ ಕೂರಿಸಿ ಆತನ ಆಸೆಯನ್ನು ಪೂರೈಸಿದ್ದಾರೆ.

ಈ ಘಟನೆ ಕೇರಳದ ಚೆಂಗನ್ನೂರಿನಲ್ಲಿ ನಡೆದಿದ್ದು, ನಾನು ಡ್ರೈವರ್‌ ಸೀಟಿನಲ್ಲಿ ಕೂರಬೇಕೆಂದು ಹಠ ಮಾಡಿದ ಬಾಲಕನನ್ನು ತನ್ನ ಸೀಟಿನಲ್ಲಿ ಕೂರಿಸಿ ಖಾಸಗಿ ಬಸ್‌ ಚಾಲಕರೊಬ್ಬರು ಆ ಬಾಲಕನ ಆಸೆಯನ್ನು ಪೂರೈಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು UK 4 STAR NS ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪುಟ್ಟ ಬಾಲಕನೊಬ್ಬ ತನ್ನ ತಾಯಿಯ ಜೊತೆಯಲ್ಲಿ ಬಸ್‌ ಏರುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಸ್‌ ಒಳಗೆ ಬಂದ ಬಾಲಕ ನಾನು ಬೇರೆ ಯಾವುದೇ ಸೀಟ್‌ನಲ್ಲಿ ಕೂರುವುದಿಲ್ಲ ನನ್ಗೆ ಡ್ರೈವರ್‌ ಸೀಟ್‌ ಬೇಕು ಎಂದು ಹಟ ಮಾಡುತ್ತಾನೆ. ಅಷ್ಟೇ ಅಲ್ಲದೇ ಜೋರಾಗಿ ಅಳುತ್ತಾನೆ. ಮಗುವಿನ ಈ ಅಳುವನ್ನು ನೋಡಲಾರದೆ ಆ ಬಸ್ಸಿನ ನಿರ್ವಾಹಕ ಮತ್ತು ಚಾಲಕ ಮಗುವನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿ ಆತನ ಪುಟ್ಟ ಆಸೆಯನ್ನು ಪೂರೈಸುತ್ತಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 19 October 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್