AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 6 ತಿಂಗಳಲ್ಲಿ 540 ಕೆಜಿಯಿಂದ 60 ಕೆಜಿಗೆ ತೂಕ ಇಳಿಸಿಕೊಂಡ ವ್ಯಕ್ತಿ

2013ರಲ್ಲಿ 610 ಕೆಜಿ ತೂಕವಿದ್ದ ವ್ಯಕ್ತಿ ನಡೆದಾಡಲು ಸಾಧ್ಯವಾಗದೇ 3ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದರು. ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದ ಈ ವ್ಯಕ್ತಿಯ ಕಥೆಯಿಂದ ಮನನೊಂದ ಸೌದಿ ರಾಜ ಅಬ್ದುಲ್ಲಾ ಅವರು ತೂಕ ಇಳಿಸಿಕೊಳ್ಳಲು ದುಬಾರಿ ವೈದ್ಯಕೀಯ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದ್ದರು.

Viral News: 6 ತಿಂಗಳಲ್ಲಿ 540 ಕೆಜಿಯಿಂದ 60 ಕೆಜಿಗೆ ತೂಕ ಇಳಿಸಿಕೊಂಡ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Aug 15, 2024 | 3:24 PM

Share

ಸುಮಾರು 610 ಕೆಜಿ ತೂಕದ ವಿಶ್ವದ ಅತ್ಯಂತ ತೂಕದ ವ್ಯಕ್ತಿ ಎಂದು ಸುದ್ದಿಯಾಗಿದ್ದ ‘ದೈತ್ಯ ಖಾಲಿದ್ ಬಿನ್ ಮೊಹ್ಸೆನ್ ಶಾರಿ’ ಕೇವಲ 6 ತಿಂಗಳಲ್ಲಿ 542 ಕೆಜಿ ತೂಕ ಇಳಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. 610 ಕೆಜಿಯಿಂದ 60 ಕೆಜಿಗೆ ಇಳಿಸಿದ್ದಾರೆ. 2013ರಲ್ಲಿ ಖಾಲಿದ್ ತೂಕ ಅಕ್ಷರಶಃ 610 ಕೆ.ಜಿ. ಇತ್ತು, ಇದರಿಂದಾಗಿ ಮೂರು ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದರು. ಅಧಿಕ ತೂಕದಿಂದಾಗಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಒಂದು ಹಂತದಲ್ಲಿ ಪ್ರಾಣಾಪಾಯವೂ ಸಂಭವಿಸಿತ್ತು. ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದ ಖಾಲಿದ್‌ನ ಕಥೆಯಿಂದ ಮನನೊಂದ ಸೌದಿ ರಾಜ ಅಬ್ದುಲ್ಲಾ ಅವರ ಜೀವ ಉಳಿಸಲು ಮುಂದಾದರು. ತೂಕ ಇಳಿಸಿಕೊಳ್ಳಲು ದುಬಾರಿ ವೈದ್ಯಕೀಯ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದ್ದರು.

ಮೊದಲಿಗೆ, ಖಲೀದ್‌ನನ್ನು ಜಜಾನ್‌ನಲ್ಲಿರುವ ತನ್ನ ಮನೆಯಿಂದ ರಿಯಾದ್‌ನ ಕಿಂಗ್ ಫಹದ್ ಮೆಡಿಕಲ್ ಸಿಟಿಗೆ ಫೋರ್ಕ್‌ಲಿಫ್ಟ್ ಮೂಲಕ ವಿಶೇಷವಾಗಿ ತಯಾರಿಸಿದ ಹಾಸಿಗೆಯನ್ನು ಬಳಸಿ ಸಾಗಿಸಲಾಯಿತು. ಅಲ್ಲಿ, ಸುಧಾರಿತ ವೈದ್ಯಕೀಯ ಚಿಕಿತ್ಸೆ ಮತ್ತು 30 ವೈದ್ಯರು ಕಾಲಕಾಲಕ್ಕೆ ಅವರಿಗೆ ಕಟ್ಟುನಿಟ್ಟಾದ ಆಹಾರಕ್ರಮವನ್ನು ಸಿದ್ಧಪಡಿಸಿದ್ದರು.

ಗ್ಯಾಸ್ಟ್ರಿಕ್ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಲಾಯಿತು. ದೇಹದಲ್ಲಿ ಚಲನೆಯನ್ನು ಪುನಃಸ್ಥಾಪಿಸಲು ವ್ಯಾಯಾಮಗಳನ್ನು ಮಾಡಿಸಲಾಗುತ್ತಿತ್ತು. ಪರಿಣಾಮ ಆರು ತಿಂಗಳಲ್ಲಿ ಅರ್ಧದಷ್ಟು ತೂಕವನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

2023 ರ ಹೊತ್ತಿಗೆ, ಅವರು 542 ಕೆಜಿಯನ್ನು ಕಡಿಮೆ ಮಾಡಿ 63.5 ಕೆಜಿ ತಲುಪಿದ್ದಾರೆ. ಖಾಲಿದ್ ಅವರ ದೇಹದಿಂದ ಹೆಚ್ಚುವರಿ ಚರ್ಮವನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕೇವಲ ಆರು ತಿಂಗಳಲ್ಲಿ ದೇಹದ ತೂಕ ಇಳಿಸಿಕೊಂಡು ಸಾಮಾನ್ಯ ವ್ಯಕ್ತಿಯಂತೆ ಆರೋಗ್ಯವಾಗಿದ್ದಾರೆ. ಎಲ್ಲರೂ ಖಲೀದ್ ಅವರನ್ನು ‘ದಿ ಸ್ಮೈಲಿಂಗ್ ಮ್ಯಾನ್’ ಎಂದು ಕರೆಯಲಾರಂಭಿಸಿದರು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Thu, 15 August 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!