AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಗೋರ್​ರಿಂದ ಮೈಕೆಲ್​ ಜಾಕ್ಸನ್​ವರೆಗೆ ಖ್ಯಾತನಾಮರನ್ನು ಗುರುತಿಸುವ ಈ ಪುಟಾಣಿ

Wonder Kid : ಇವರು ಸಚಿನ್​ ತೆಂಡೂಲ್ಕರ್​, ಇವರು ಮಹಾತ್ಮಾ ಗಾಂಧೀ, ಇವರು ಮದರ್ ತೆರೇಸಾ, ಇವರು ನೆಲ್ಸನ್​ ಮಂಡೇಲಾ, ಇವರು ಥಾಮಸ್ ಅಲ್ವಾ ಎಡಿಸನ್​... ಪಟಪಟ ಅರಳು ಹುರಿದಂತೆ. ನೋಡಿ ಈ ಮಗುವಿನ ವಿಡಿಯೋ.

ಟ್ಯಾಗೋರ್​ರಿಂದ ಮೈಕೆಲ್​ ಜಾಕ್ಸನ್​ವರೆಗೆ ಖ್ಯಾತನಾಮರನ್ನು ಗುರುತಿಸುವ ಈ ಪುಟಾಣಿ
TV9 Web
| Edited By: |

Updated on:Nov 28, 2022 | 3:47 PM

Share

ವೈರಲ್ ವಿಡಿಯೋ : ಹಸಿಗೋಡೆಯಲ್ಲಿ ಹರಳು ಒಗೆದಂತೆ ಮಕ್ಕಳ ಮನಸ್ಸು, ಹೃದಯ. ಎಳವೆಯಲ್ಲಿ ಏನನ್ನು ಧಾರೆ ಎರೆಯುತ್ತೇವೋ ಅದನ್ನೇ ಸ್ವೀಕರಿಸುತ್ತದೆ ಮಗು. ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿರುವ ಚುರುಕಾದ ಹೆಣ್ಣುಮಗುವನ್ನು ಗಮನಿಸಿ. 60 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು ಬೆರಗಾಗಿಸದೇ ಇರದು.  ಖ್ಯಾತನಾಮರ ಫೋಟೋ ತೋರಿಸುತ್ತಿದ್ದಂತೆ ಪಟಪಟನೆ ಹೇಗೆ ಉತ್ತರಿಸುತ್ತದೆ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮಗುವಿನ ತಾಯಿ ಒಬ್ಬೊಬ್ಬರ ಫೋಟೋ ತೋರಿಸುತ್ತಿದ್ದಂತೆ ಪುಟಿಚೆಂಡಿನಂತೆ ಉತ್ತರಿಸುತ್ತಾ ಹೋಗುತ್ತದೆ. ನವೆಂಬರ್​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. 70,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 4,000ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಸುಮಾರು 700 ಜನ ರೀಟ್ವೀಟ್ ಮಾಡಿದ್ದಾರೆ.

ಈ ಮಗುವಿನ ವಿಡಿಯೋ ನೋಡಿದ ನೂರಾರು ಜನರು ಇದರ ಸ್ಮರಣಶಕ್ತಿಯನ್ನು, ಲವಲವಿಕೆಯನ್ನು ಕೊಂಡಾಡಿದ್ದಾರೆ. ಮಗುವನ್ನು ಈ ರೀತಿಯಲ್ಲಿ ಬೆಳೆಸುತ್ತಿರುವ ತಾಯಿಗೆ ಶರಣು ಎಂದಿದ್ದಾರೆ ಹಲವರು. ಈ ವಯಸ್ಸಿನಲ್ಲಿ ಮಕ್ಕಳು ಒಂದೆಡೆ ಕುಳಿತುಕೊಳ್ಳುವುದೇ ಕಷ್ಟ. ಆದರೆ ಇಂಥ ಚಟುವಟಿಕೆಗಳಲ್ಲಿ ತೊಡಗಿಸಿದಾಗ ಪಾಠವೂ ಆಟವಾಗುತ್ತದೆ ಎಂದಿದ್ದಾರೆ ಕೆಲವರು. ಇನ್ನೂ ಕೆಲವರು ತಮ್ಮತಮ್ಮ ಮಕ್ಕಳ ವಿಡಿಯೋಗಳನ್ನು ಹಾಕಿ ಈ ಮಗುವಿನ ಜಾಣತನವನ್ನೂ ನೋಡಿ ಎಂದಿದ್ದಾರೆ.

ನಿಮ್ಮ ಮನೆಯ ಪುಟ್ಟ ಮಕ್ಕಳನ್ನು ಹೇಗೆ ಆಟದ ಮೂಲಕ ಪಾಠದಲ್ಲಿ ತೊಡಗಿಸುತ್ತಿದ್ದೀರಿ? ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:46 pm, Mon, 28 November 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ