AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಗೋರ್​ರಿಂದ ಮೈಕೆಲ್​ ಜಾಕ್ಸನ್​ವರೆಗೆ ಖ್ಯಾತನಾಮರನ್ನು ಗುರುತಿಸುವ ಈ ಪುಟಾಣಿ

Wonder Kid : ಇವರು ಸಚಿನ್​ ತೆಂಡೂಲ್ಕರ್​, ಇವರು ಮಹಾತ್ಮಾ ಗಾಂಧೀ, ಇವರು ಮದರ್ ತೆರೇಸಾ, ಇವರು ನೆಲ್ಸನ್​ ಮಂಡೇಲಾ, ಇವರು ಥಾಮಸ್ ಅಲ್ವಾ ಎಡಿಸನ್​... ಪಟಪಟ ಅರಳು ಹುರಿದಂತೆ. ನೋಡಿ ಈ ಮಗುವಿನ ವಿಡಿಯೋ.

ಟ್ಯಾಗೋರ್​ರಿಂದ ಮೈಕೆಲ್​ ಜಾಕ್ಸನ್​ವರೆಗೆ ಖ್ಯಾತನಾಮರನ್ನು ಗುರುತಿಸುವ ಈ ಪುಟಾಣಿ
TV9 Web
| Edited By: |

Updated on:Nov 28, 2022 | 3:47 PM

Share

ವೈರಲ್ ವಿಡಿಯೋ : ಹಸಿಗೋಡೆಯಲ್ಲಿ ಹರಳು ಒಗೆದಂತೆ ಮಕ್ಕಳ ಮನಸ್ಸು, ಹೃದಯ. ಎಳವೆಯಲ್ಲಿ ಏನನ್ನು ಧಾರೆ ಎರೆಯುತ್ತೇವೋ ಅದನ್ನೇ ಸ್ವೀಕರಿಸುತ್ತದೆ ಮಗು. ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿರುವ ಚುರುಕಾದ ಹೆಣ್ಣುಮಗುವನ್ನು ಗಮನಿಸಿ. 60 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು ಬೆರಗಾಗಿಸದೇ ಇರದು.  ಖ್ಯಾತನಾಮರ ಫೋಟೋ ತೋರಿಸುತ್ತಿದ್ದಂತೆ ಪಟಪಟನೆ ಹೇಗೆ ಉತ್ತರಿಸುತ್ತದೆ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮಗುವಿನ ತಾಯಿ ಒಬ್ಬೊಬ್ಬರ ಫೋಟೋ ತೋರಿಸುತ್ತಿದ್ದಂತೆ ಪುಟಿಚೆಂಡಿನಂತೆ ಉತ್ತರಿಸುತ್ತಾ ಹೋಗುತ್ತದೆ. ನವೆಂಬರ್​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. 70,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 4,000ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಸುಮಾರು 700 ಜನ ರೀಟ್ವೀಟ್ ಮಾಡಿದ್ದಾರೆ.

ಈ ಮಗುವಿನ ವಿಡಿಯೋ ನೋಡಿದ ನೂರಾರು ಜನರು ಇದರ ಸ್ಮರಣಶಕ್ತಿಯನ್ನು, ಲವಲವಿಕೆಯನ್ನು ಕೊಂಡಾಡಿದ್ದಾರೆ. ಮಗುವನ್ನು ಈ ರೀತಿಯಲ್ಲಿ ಬೆಳೆಸುತ್ತಿರುವ ತಾಯಿಗೆ ಶರಣು ಎಂದಿದ್ದಾರೆ ಹಲವರು. ಈ ವಯಸ್ಸಿನಲ್ಲಿ ಮಕ್ಕಳು ಒಂದೆಡೆ ಕುಳಿತುಕೊಳ್ಳುವುದೇ ಕಷ್ಟ. ಆದರೆ ಇಂಥ ಚಟುವಟಿಕೆಗಳಲ್ಲಿ ತೊಡಗಿಸಿದಾಗ ಪಾಠವೂ ಆಟವಾಗುತ್ತದೆ ಎಂದಿದ್ದಾರೆ ಕೆಲವರು. ಇನ್ನೂ ಕೆಲವರು ತಮ್ಮತಮ್ಮ ಮಕ್ಕಳ ವಿಡಿಯೋಗಳನ್ನು ಹಾಕಿ ಈ ಮಗುವಿನ ಜಾಣತನವನ್ನೂ ನೋಡಿ ಎಂದಿದ್ದಾರೆ.

ನಿಮ್ಮ ಮನೆಯ ಪುಟ್ಟ ಮಕ್ಕಳನ್ನು ಹೇಗೆ ಆಟದ ಮೂಲಕ ಪಾಠದಲ್ಲಿ ತೊಡಗಿಸುತ್ತಿದ್ದೀರಿ? ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:46 pm, Mon, 28 November 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್