AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗಾಗಿ ಬೆಂಕಿ ಕಾಯಿಸಿದ ಯುವಕ; ಮುದ್ದಾದ ದೃಶ್ಯ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ಬಹು ಬೇಗನೇ ನಮ್ಮ ಗಮನವನ್ನು ಸೆಳೆಯುತ್ತವೆ. ಇದೀಗ ಅಂತಹದ್ದೇ ಮತ್ತೊಂದು ದೃಶ್ಯ ವೈರಲ್‌ ಆಗಿದ್ದು, ಯುವಕನೊಬ್ಬ ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಿಕೊಳ್ಳಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 06, 2025 | 12:27 PM

Share

ಈಗಂತೂ ಎಲ್ಲಿ ನೋಡಿದ್ರೂ ಸಿಕ್ಕಾಪಟ್ಟೆ ಚಳಿ. ಈ ತಂಪು ವಾತಾವರಣದಲ್ಲಿ ಬೆಚ್ಚಗಿರಲು ಹೆಚ್ಚಿನವರು ಸ್ವೆಟ್ಟರ್‌, ದಪ್ಪನೆಯ ಬಟ್ಟೆ, ಕೈಗಳಿಗೆ ಗೌಸ್‌ ಧರಿಸಿದರೆ ಇನ್ನೂ ಕೆಲವರು ಕೊರೆಯುವ ಚಳಿಯಲ್ಲಿ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಾರೆ. ಆದ್ರೆ ಬೀಡಾಡಿ ಪ್ರಾಣಿಗಳು ಪಾಪ ಚಳಿ ತಡೆಯಲಾರದೆ ಕಷ್ಟ ಅನುಭವಿಸುತ್ತವೆ. ಹೆಚ್ಚಿನವರು ಇವುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಇಲ್ಲೊಬ್ಬ ಯುವಕ ಮಾತ್ರ ನಾಯಿ ಮರಿಗಳು ಕೂಡಾ ಬೆಚ್ಚಗಿರಬೇಕೆಂದು ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಕಾಯಿಸಿಕೊಟ್ಟಿದ್ದಾನೆ. ಈತನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಬಹುಪಾಲು ಮಾನವೀಯತೆ ಮರೆಯಾಗಿರುವ ಈ ಕಾಲದಲ್ಲಿಯೂ ದಯೆ, ಕರುಣೆ, ಕಾಳಜಿ ಸಹಾನೂಭೂತಿಯನ್ನು ಹೊಂದಿದವರು, ಪರರ ಕಷ್ಟಕ್ಕೆ ಸಹಾಯವಾಗುವ ಒಂದಷ್ಟು ಜನ ಇದ್ದಾರೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸತ್ಯಮ್ ಸೂರ್ಯವಂಶಿ ಎಂಬ ಯುವಕ ಕೊರೆಯುವ ಚಳಿಯಲ್ಲಿ ನಡುಗಿ ಹೋಗಿದ್ದ ನಾಯಿ ಮರಿಗಳಿಗೆ ಚಳಿ ಕಾಯಿಸಲು ಬೆಂಕಿ ಹಾಕಿಕೊಟ್ಟಿದ್ದಾನೆ.

ಈ ಕುರಿತ ವಿಡಿಯೋವನ್ನು satyam_suryanshi123‌ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಸತ್ಯಮ್‌ ಜೊತೆ ಕುಳಿತಿರುವ ಪುಟ್ಟ ಪುಟ್ಟ ನಾಯಿ ಮರಿಗಳು ಬೆಂಕಿಯ ಪಕ್ಕ ಕುಳಿತು ಚಳಿ ಕಾಯಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ರೀಲ್ಸ್‌ ಗಾಗಿ ಚಲಿಸುವ ಕಾರಿನಲ್ಲಿ ಸ್ಟಂಟ್‌ ಮಾಡಿದ ಯುವಕರು, ಈ ಹುಚ್ಚಾಟಕ್ಕೆ ಬಿತ್ತು 33 ಸಾವಿರ ದಂಡ

ಏಳು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 10.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತಹ ಸಹೃದಯಿ ವ್ಯಕ್ತಿಯಿವʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಹೋದರ ನಿನ್ನ ಈ ಕಾರ್ಯಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಯುವಕನ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್